ಬ್ರೇಕಿಂಗ್ ನ್ಯೂಸ್
10-03-21 02:03 pm Headline Karnataka News Network ದೇಶ - ವಿದೇಶ
ಡೆಹ್ರಾಡೂನ್, ಮಾ.10: ತ್ರಿವೇಂದ್ರ ಸಿಂಗ್ ರಾವತ್ ರಾಜಿನಾಮೆಯಿಂದ ತೆರವಾಗಿದ್ದ ಉತ್ತರಾಖಂಡ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಂಸದ ತೀರತ್ ಸಿಂಗ್ ರಾವತ್ ಅವರ ಹೆಸರನ್ನು ಬಿಜೆಪಿ ಹೈಕಮಾಂಡ್ ಅಂತಿಮಗೊಳಿಸಿದೆ.
2013ರಿಂದ 2015ರ ವರೆಗೆ ಉತ್ತರಾಖಂಡದ ಬಿಜೆಪಿ ಅಧ್ಯಕ್ಷರಾಗಿದ್ದ ತೀರತ್ ಸಿಂಗ್ ಈ ಹಿಂದೆ ಶಾಸಕರಾಗಿದ್ದರು. 2019ರಲ್ಲಿ ಗರ್ವಾಲ್ ಕ್ಷೇತ್ರದ ಸಂಸದರಾಗಿ ಆಯ್ಕೆಯಾಗಿದ್ದರು. ಮುಖ್ಯಮಂತ್ರಿ ಸ್ಥಾನಕ್ಕೆ ಕೇಂದ್ರ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್, ರಾಜ್ಯದ ಸಚಿವ ಧನ್ ಸಿಂಗ್ ರಾವತ್, ಸತ್ಪಾಲ್ ಮಹಾರಾಜ್, ಭಗತ್ ಸಿಂಗ್ ಕೋಶ್ರಿಯಾಲ್ ಸೇರಿದಂತೆ ಡಜನ್ ಗೂ ಹೆಚ್ಚು ಮಂದಿ ಆಕಾಂಕ್ಷಿಯಾಗಿದ್ದರು.


ಬಿಜೆಪಿ ದೆಹಲಿ ಮಟ್ಟದ ನಾಯಕರು ಮುಖ್ಯಮಂತ್ರಿ ಸ್ಥಾನಕ್ಕೆ ತೀರತ್ ಸಿಂಗ್ ಅವರನ್ನು ಆಯ್ಕೆ ಮಾಡಿದ್ದಾರೆ. ತೀರತ್, ಇಂದು ಸಂಜೆ ನಾಲ್ಕು ಗಂಟೆಗೆ ರಾಜ್ಯಪಾಲರಿಂದ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. 69 ವರ್ಷದ ಹಿರಿಯ ಸಚಿವರಾಗಿರುವ ಸತ್ಪಾಲ್ ಮಹಾರಾಜ್, ಕಾಂಗ್ರೆಸಿನಲ್ಲಿದ್ದು 2014ರಲ್ಲಿ ಹರೀಶ್ ರಾವತ್ ಮುಖ್ಯಮಂತ್ರಿಯಾಗಿದ್ದಕ್ಕೆ ಮುನಿಸಿಕೊಂಡು ಬಿಜೆಪಿ ಸೇರಿದ್ದರು. ಈ ಬಾರಿ ಸಿಎಂ ಸ್ಥಾನಕ್ಕೆ ಪ್ರಬಲ ಆಕಾಂಕ್ಷಿಯೂ ಆಗಿದ್ದರು. ಆಧ್ಯಾತ್ಮ ಗುರುವಿನ ನೆಲೆಯಲ್ಲಿ ಉತ್ತರ ಭಾರತದಲ್ಲಿ ಭಾರೀ ಪ್ರಸಿದ್ಧಿಯನ್ನೂ ಹೊಂದಿದ್ದಾರೆ. ಆದರೆ, ಬಿಜೆಪಿ ಹೈಕಮಾಂಡ್ ಅವರಿಗೆ ಮಣೆ ಹಾಕದೆ ಪಕ್ಷದ ನಿಷ್ಠಾವಂತ ಕಾರ್ಯಕರ್ತನಿಗೆ ಸ್ಥಾನ ನೀಡಿದೆ.
Read: ಉತ್ತರಾಖಂಡ ಬಿಜೆಪಿ ಸರಕಾರದಲ್ಲಿ ಸಿಎಂ ಬದಲಾವಣೆ ಪರ್ವ ; ರಾವತ್ ರಾಜಿನಾಮೆ
Trivendra Singh Rawat resigned as the Uttarakhand chief minister on Tuesday amid calls for a change in leadership. BJP legislature party in a meeting in Dehradun today picked Tirath Singh Rawat to be his successor.
05-03-26 11:42 pm
HK News Desk
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
05-03-26 08:51 pm
HK News Staffer
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
05-03-26 07:38 pm
HK News Staffer
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm