ಬ್ರೇಕಿಂಗ್ ನ್ಯೂಸ್
10-03-21 02:03 pm Headline Karnataka News Network ದೇಶ - ವಿದೇಶ
ಡೆಹ್ರಾಡೂನ್, ಮಾ.10: ತ್ರಿವೇಂದ್ರ ಸಿಂಗ್ ರಾವತ್ ರಾಜಿನಾಮೆಯಿಂದ ತೆರವಾಗಿದ್ದ ಉತ್ತರಾಖಂಡ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಂಸದ ತೀರತ್ ಸಿಂಗ್ ರಾವತ್ ಅವರ ಹೆಸರನ್ನು ಬಿಜೆಪಿ ಹೈಕಮಾಂಡ್ ಅಂತಿಮಗೊಳಿಸಿದೆ.
2013ರಿಂದ 2015ರ ವರೆಗೆ ಉತ್ತರಾಖಂಡದ ಬಿಜೆಪಿ ಅಧ್ಯಕ್ಷರಾಗಿದ್ದ ತೀರತ್ ಸಿಂಗ್ ಈ ಹಿಂದೆ ಶಾಸಕರಾಗಿದ್ದರು. 2019ರಲ್ಲಿ ಗರ್ವಾಲ್ ಕ್ಷೇತ್ರದ ಸಂಸದರಾಗಿ ಆಯ್ಕೆಯಾಗಿದ್ದರು. ಮುಖ್ಯಮಂತ್ರಿ ಸ್ಥಾನಕ್ಕೆ ಕೇಂದ್ರ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್, ರಾಜ್ಯದ ಸಚಿವ ಧನ್ ಸಿಂಗ್ ರಾವತ್, ಸತ್ಪಾಲ್ ಮಹಾರಾಜ್, ಭಗತ್ ಸಿಂಗ್ ಕೋಶ್ರಿಯಾಲ್ ಸೇರಿದಂತೆ ಡಜನ್ ಗೂ ಹೆಚ್ಚು ಮಂದಿ ಆಕಾಂಕ್ಷಿಯಾಗಿದ್ದರು.


ಬಿಜೆಪಿ ದೆಹಲಿ ಮಟ್ಟದ ನಾಯಕರು ಮುಖ್ಯಮಂತ್ರಿ ಸ್ಥಾನಕ್ಕೆ ತೀರತ್ ಸಿಂಗ್ ಅವರನ್ನು ಆಯ್ಕೆ ಮಾಡಿದ್ದಾರೆ. ತೀರತ್, ಇಂದು ಸಂಜೆ ನಾಲ್ಕು ಗಂಟೆಗೆ ರಾಜ್ಯಪಾಲರಿಂದ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. 69 ವರ್ಷದ ಹಿರಿಯ ಸಚಿವರಾಗಿರುವ ಸತ್ಪಾಲ್ ಮಹಾರಾಜ್, ಕಾಂಗ್ರೆಸಿನಲ್ಲಿದ್ದು 2014ರಲ್ಲಿ ಹರೀಶ್ ರಾವತ್ ಮುಖ್ಯಮಂತ್ರಿಯಾಗಿದ್ದಕ್ಕೆ ಮುನಿಸಿಕೊಂಡು ಬಿಜೆಪಿ ಸೇರಿದ್ದರು. ಈ ಬಾರಿ ಸಿಎಂ ಸ್ಥಾನಕ್ಕೆ ಪ್ರಬಲ ಆಕಾಂಕ್ಷಿಯೂ ಆಗಿದ್ದರು. ಆಧ್ಯಾತ್ಮ ಗುರುವಿನ ನೆಲೆಯಲ್ಲಿ ಉತ್ತರ ಭಾರತದಲ್ಲಿ ಭಾರೀ ಪ್ರಸಿದ್ಧಿಯನ್ನೂ ಹೊಂದಿದ್ದಾರೆ. ಆದರೆ, ಬಿಜೆಪಿ ಹೈಕಮಾಂಡ್ ಅವರಿಗೆ ಮಣೆ ಹಾಕದೆ ಪಕ್ಷದ ನಿಷ್ಠಾವಂತ ಕಾರ್ಯಕರ್ತನಿಗೆ ಸ್ಥಾನ ನೀಡಿದೆ.
Read: ಉತ್ತರಾಖಂಡ ಬಿಜೆಪಿ ಸರಕಾರದಲ್ಲಿ ಸಿಎಂ ಬದಲಾವಣೆ ಪರ್ವ ; ರಾವತ್ ರಾಜಿನಾಮೆ
Trivendra Singh Rawat resigned as the Uttarakhand chief minister on Tuesday amid calls for a change in leadership. BJP legislature party in a meeting in Dehradun today picked Tirath Singh Rawat to be his successor.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm