ಬ್ರೇಕಿಂಗ್ ನ್ಯೂಸ್
10-03-21 03:12 pm Headline Karnataka News Network ದೇಶ - ವಿದೇಶ
ತಿರುವನಂತಪುರ, ಮಾ.10: ಕೇರಳ ಕಾಂಗ್ರೆಸಿನಲ್ಲಿ ಭಿನ್ನಮತ ಮತ್ತೆ ಸ್ಫೋಟಗೊಂಡಿದೆ. ರಾಜ್ಯದಲ್ಲಿ ವಿಧಾನಸಭೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ವಿಚಾರದಲ್ಲಿ ಮುನಿಸಿಕೊಂಡಿರುವ ಹಿರಿಯ ಕಾಂಗ್ರೆಸಿಗ, ಮಾಜಿ ಸಂಸದ ಪಿ.ಸಿ. ಚಾಕೋ ಪಕ್ಷಕ್ಕೆ ರಾಜಿನಾಮೆ ನೀಡಿದ್ದಾರೆ.
ಈ ಬಗ್ಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿಗೆ ರಾಜಿನಾಮೆ ಪತ್ರ ಬರೆದಿರುವ ಚಾಕೋ, ಕೇರಳದಲ್ಲಿ ಕಾಂಗ್ರೆಸ್ ಮುಖಂಡನಾಗಿ ಮುಂದುವರಿಯುವುದು ಕಷ್ಟವಿದೆ. ರಾಜ್ಯ ಕಾಂಗ್ರೆಸ್ ನಲ್ಲಿ ಪ್ರಜಾಪ್ರಭುತ್ವ ಇಲ್ಲ. ರಾಜ್ಯ ಕಮಿಟಿಯಲ್ಲಿ ಚರ್ಚೆ ಮಾಡದೆ, ವಿಧಾನಸಭೆ ಅಭ್ಯರ್ಥಿಗಳನ್ನು ಫೈನಲ್ ಮಾಡುವುದು ಯಾವ ನ್ಯಾಯ ಎಂದು ಪ್ರಶ್ನೆ ಮಾಡಿದ್ದಾರೆ.

ಕಳೆದ ಒಂದು ವರ್ಷದಲ್ಲಿ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ನೇಮಕ ಆಗದಿರುವ ವಿಚಾರದಲ್ಲಿ ಪ್ರತಿಕ್ರಿಯಿಸಿರುವ, ಕಾಂಗ್ರೆಸಿಗನಾಗಿ ಹೇಳುವುದಾದರೆ, ರಾಜ್ಯದಲ್ಲಿ ಪಕ್ಷ ತುಂಬ ಕಷ್ಟದಲ್ಲಿದೆ. ನೀವು ಕಾಂಗ್ರೆಸಿನಲ್ಲಿ ಯಾವುದಾದ್ರೂ ಒಂದು ಗ್ರೂಪಿನಲ್ಲಿ ಇರುವುದಾದರೆ ಮಾತ್ರ ಉಳಿಯಬಹುದಷ್ಟೆ. ರಾಜ್ಯ ನಾಯಕತ್ವ ಸಕ್ರಿಯವಾಗಿಲ್ಲ. ಪಕ್ಷದ ಮೇಲೆ ಹಿಡಿತ ಹೊಂದಿಲ್ಲ ಎಂದು ಟೀಕಿಸಿದ್ದಾರೆ.

ಕೇರಳ ಕಾಂಗ್ರೆಸಿನ ಕಾರ್ಯ ನಿರ್ವಹಣೆ ಬಗ್ಗೆ ತುಂಬ ನೊಂದಿದ್ದೇನೆ. ರಾಜಿನಾಮೆ ನೀಡುವ ಬಗ್ಗೆ ತುಂಬ ಸಮಯದಿಂದ ಚಿಂತನೆ ಮಾಡಿದ್ದೆ. ಪಕ್ಷ ದಿನದಿಂದ ದಿನಕ್ಕೆ ದುರ್ಬಲವಾಗುತ್ತಿದೆ. ನನ್ನ ರಾಜಿನಾಮೆಯಿಂದಾದ್ರು ಪಕ್ಷದ ನಾಯಕತ್ವ ಕಣ್ಣು ತೆರೆದುಕೊಂಡರೆ ರಾಜಿನಾಮೆ ನಿರ್ಧಾರದ ಬಗ್ಗೆ ಪುನರ್ ವಿಮರ್ಶೆ ಮಾಡುತ್ತೇನೆ ಎಂದಿದ್ದಾರೆ.
ರಾಜ್ಯ ಕಾಂಗ್ರೆಸಿನಲ್ಲಿ ಎರಡು ಗುಂಪು ಇದೆ. ಕಾಂಗ್ರೆಸ್ ಐ ಮತ್ತು ಕಾಂಗ್ರೆಸ್ ಎ. ಈ ಎರಡು ಗುಂಪುಗಳ ಸಮನ್ವಯ ಕಮಿಟಿಯಾಗಿ ಕೆಪಿಸಿಸಿ ಇದೆ ಎಂದು ಚಾಕೋ ವ್ಯಂಗ್ಯ ಮಾಡಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಪ್ರಬಲ ಕ್ರಿಸ್ತಿಯನ್ ಸಮುದಾಯದ ಹಿರಿಯ ಮುಖಂಡನೊಬ್ಬ ಪಕ್ಷಕ್ಕೆ ರಾಜಿನಾಮೆ ನೀಡಿರುವುದು ಕಾಂಗ್ರೆಸಿಗೆ ದೊಡ್ಡ ಹಿನ್ನಡೆಯಾಗಲಿದೆ.

ಕೇರಳ ಕಾಂಗ್ರೆಸಿನಲ್ಲಿ ಎರಡು ಮೂರು ಬಣಗಳಾಗಿದ್ದು, ರಾಜ್ಯ ನಾಯಕರು ಈ ಬಣಗಳನ್ನು ತಮ್ಮ ಹಿಡಿತದಲ್ಲಿಟ್ಟುಕೊಳ್ಳಲು ಸಾಧ್ಯವಾಗದ ಸ್ಥಿತಿಗೆ ತಲುಪಿದ್ದಾರೆ. ನಾಯಕರ ಭಿನ್ನಮತದ ಕಾರಣ ಕಳೆದ ಪಂಚಾಯತ್ ಚುನಾವಣೆಯಲ್ಲೂ ತಟ್ಟಿದ್ದು, ಎಡರಂಗ ಮತ್ತು ಬಿಜೆಪಿಗೆ ಸ್ಥಾನಗಳನ್ನು ಬಿಟ್ಟುಕೊಟ್ಟಿತ್ತು. ಮುಸ್ಲಿಂ ಬಾಹುಳ್ಯ ಇರುವಲ್ಲಿ ಮುಸ್ಲಿಂ ಲೀಗ್ ಸ್ಥಾನ ಪಡೆದಿತ್ತು. ಮುಂದಿನ ವಿಧಾನಸಭೆ ಚುನಾವಣೆಯಲ್ಲೂ ಕಾಂಗ್ರೆಸ್ ಹೀನಾಯ ಸೋಲು ಕಾಣುವ ಸುಳಿವು ಸಿಕ್ಕಿರುವಾಗಲೇ ನಾಯಕರು ಪಕ್ಷ ತ್ಯಜಿಸಲು ಮುಂದಾಗಿದ್ದಾರೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 04:14 pm
HK News Staffer
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am