ಬ್ರೇಕಿಂಗ್ ನ್ಯೂಸ್
13-03-21 03:42 pm Headline Karnataka News Network ದೇಶ - ವಿದೇಶ
ಕೊಲ್ಕತ್ತಾ, ಮಾ.13: ಮಾಜಿ ಕೇಂದ್ರ ಸಚಿವ, ಬಿಜೆಪಿಯ ಮಾಜಿ ಮುಖಂಡ, ಒಂದು ಕಾಲದ ಥಿಂಕ್ ಟ್ಯಾಂಕ್ ಆಗಿದ್ದ ಯಶವಂತ್ ಸಿನ್ಹಾ ದಿಢೀರ್ ಬೆಳವಣಿಗೆಯಲ್ಲಿ ಟಿಎಂಸಿ ಪಕ್ಷ ಸೇರ್ಪಡೆಯಾಗಿದ್ದಾರೆ. ಕೊಲ್ಕತ್ತಾದಲ್ಲಿ ನಡೆದ ಸಮಾರಂಭದಲ್ಲಿ ಪಶ್ಚಿಮ ಬಂಗಾಳದ ಚುನಾವಣೆಗೆ ಕೆಲವೇ ದಿನಗಳಿರುವಾಗ ಟಿಎಂಸಿ ಸೇರಿ ಅಚ್ಚರಿ ಮೂಡಿಸಿದ್ದಾರೆ.
83 ವರ್ಷದ ಯಶವಂತ್ ಸಿನ್ಹಾ ವಾಜಪೇಯಿ ಸಂಪುಟದಲ್ಲಿ ಸಚಿವರಾಗಿದ್ದರು. ಆಬಳಿಕ ಮೋದಿ ಸರಕಾರ ಅಧಿಕಾರಕ್ಕೇರಿದ ಬಳಿಕ ಮೂಲೆಗುಂಪಾಗಿದ್ದು, 2018ರಲ್ಲಿ ಪಕ್ಷಕ್ಕೆ ರಾಜಿನಾಮೆ ನೀಡಿ ಸಕ್ರಿಯ ರಾಜಕೀಯದಿಂದ ಹೊರ ತೆರಳಿದ್ದರು. ಇದೀಗ ಟಿಎಂಸಿ ಸೇರ್ಪಡೆಯಾದ ಬಳಿಕ ಇದೇ ವಿಚಾರದ ಬಗ್ಗೆ ಮಾತನಾಡಿದ ಸಿನ್ಹಾ, ಈ ವಯಸ್ಸಲ್ಲಿ ಮತ್ತೆ ಸಕ್ರಿಯ ರಾಜಕೀಯಕ್ಕೆ ಬರ್ತೀದ್ದಾರಲ್ಲ ಎಂಬ ಸಹಜ ಪ್ರಶ್ನೆ ನಿಮ್ಮಲ್ಲಿರಬಹುದು. ಬೇರೊಂದು ಪಕ್ಷಕ್ಕೆ ಸೇರಿ ಸಕ್ರಿಯ ರಾಜಕಾರಣಕ್ಕೆ ಬರುತ್ತಿರುವ ಬಗ್ಗೆ ಕುತೂಹಲ ಇರಬಹುದು. ಆದರೆ, ದೇಶದ ಪರಿಸ್ಥಿತಿ ಈಗ ಸಂದಿಗ್ಧ ಸ್ಥಿತಿಯಲ್ಲಿದೆ. ಅದಕ್ಕಾಗಿ ರಾಜಕೀಯದಲ್ಲಿ ಸಕ್ರಿಯವಾಗುತ್ತಿದ್ದೇನೆ ಎಂದಿದ್ದಾರೆ.

ನ್ಯಾಯಾಂಗ ಸೇರಿದಂತೆ ಪ್ರಜಾಪ್ರಭುತ್ವದ ಅಡಿಗಲ್ಲು, ಆಧಾರ ಸ್ತಂಭಗಳು ದುರ್ಬಲಗೊಳ್ಳುತ್ತಿವೆ. ಚುನಾವಣೆ ಜಯಿಸುವುದಷ್ಟೇ ಈಗಿನ ಬಿಜೆಪಿಯ ಏಕಮಾತ್ರ ಗುರಿಯಾಗಿದೆ. ಅಟಲ್ ಜೀ ಇದ್ದಾಗ ಪಕ್ಷಗಳ ನಡುವೆ ಸಹಮತ ಇತ್ತು. ಈಗಿನ ಮಂದಿ ಇತರ ಪಕ್ಷಗಳನ್ನು ತುಳಿದೇ ಅಧಿಕಾರಕ್ಕೇರಲು ಹವಣಿಸುತ್ತಾರೆ. ಇದೇ ಕಾರಣಕ್ಕೆ ಬಿಜೆಪಿ ಜೊತೆಗಿದ್ದ ಬಿಜೆಡಿ, ಅಕಾಲಿದಳ ಹೊರಗೆ ಉಳಿದಿದೆ. ಈಗ ಬಿಜೆಪಿ ಜೊತೆಗೆ ಯಾರಿದ್ದಾರೆ ಎಂದು ಪ್ರಶ್ನಿಸಿದರು.
ಯಶವಂತ್ ಸಿನ್ಹಾ ಬಿಜೆಪಿಯಿಂದ ದೂರವುಳಿದಿದ್ದರೂ, ಅವರ ಜಯಂತ್ ಸಿನ್ಹಾ ಜಾರ್ಖಂಡಿನ ಹಝಾರಿಬಾಗ್ ಕ್ಷೇತ್ರದಲ್ಲಿ ಬಿಜೆಪಿ ಸಂಸದರಾಗಿದ್ದಾರೆ. 2014ರಲ್ಲಿ ಮೊದಲ ಬಾರಿಗೆ ಸಂಸದರಾಗಿದ್ದ ವೇಳೆ ವಿಮಾನ ಯಾನ ಮತ್ತು ಹಣಕಾಸು ಖಾತೆಯಲ್ಲಿ ರಾಜ್ಯ ಸಚಿವರಾಗಿದ್ದರು. 2019ರಲ್ಲಿ ಮರು ಆಯ್ಕೆಯಾಗಿದ್ದರೂ, ಜಯಂತ್ ಸಿನ್ಹಾಗೆ ಸಚಿವ ಸ್ಥಾನದ ಜವಾಬ್ದಾರಿ ನೀಡಿಲ್ಲ.
ಈ ನಡುವೆ, ಯಶವಂತ್ ಸಿನ್ಹಾ ಈಗಿನ ಬಿಜೆಪಿಯ ವಿರುದ್ಧ ಕಟು ಟೀಕಾಕಾರರಾಗಿ ಬದಲಾಗಿದ್ದರು. ಈಗ ಪಶ್ಚಿಮ ಬಂಗಾಳದಲ್ಲಿ ಚುನಾವಣೆಗೆ ಕೆಲವೇ ದಿನಗಳಿರುವಾಗ ಬದ್ಧ ಪ್ರತಿಸ್ಪರ್ಧಿ ಟಿಎಂಸಿ ಪಕ್ಷ ಸೇರಿ ಟಾಂಗ್ ನೀಡಿದ್ದಾರೆ. ಬಂಗಾಳದಲ್ಲಿ ಏಳು ಹಂತದ ಚುನಾವಣೆಯಿದ್ದು ಮೊದಲ ಮತದಾನ ಮಾ.27ರಂದು ನಡೆಯಲಿದೆ.
05-03-26 11:42 pm
HK News Desk
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
05-03-26 08:51 pm
HK News Staffer
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
05-03-26 07:38 pm
HK News Staffer
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm