ಬ್ರೇಕಿಂಗ್ ನ್ಯೂಸ್
13-03-21 03:42 pm Headline Karnataka News Network ದೇಶ - ವಿದೇಶ
ಕೊಲ್ಕತ್ತಾ, ಮಾ.13: ಮಾಜಿ ಕೇಂದ್ರ ಸಚಿವ, ಬಿಜೆಪಿಯ ಮಾಜಿ ಮುಖಂಡ, ಒಂದು ಕಾಲದ ಥಿಂಕ್ ಟ್ಯಾಂಕ್ ಆಗಿದ್ದ ಯಶವಂತ್ ಸಿನ್ಹಾ ದಿಢೀರ್ ಬೆಳವಣಿಗೆಯಲ್ಲಿ ಟಿಎಂಸಿ ಪಕ್ಷ ಸೇರ್ಪಡೆಯಾಗಿದ್ದಾರೆ. ಕೊಲ್ಕತ್ತಾದಲ್ಲಿ ನಡೆದ ಸಮಾರಂಭದಲ್ಲಿ ಪಶ್ಚಿಮ ಬಂಗಾಳದ ಚುನಾವಣೆಗೆ ಕೆಲವೇ ದಿನಗಳಿರುವಾಗ ಟಿಎಂಸಿ ಸೇರಿ ಅಚ್ಚರಿ ಮೂಡಿಸಿದ್ದಾರೆ.
83 ವರ್ಷದ ಯಶವಂತ್ ಸಿನ್ಹಾ ವಾಜಪೇಯಿ ಸಂಪುಟದಲ್ಲಿ ಸಚಿವರಾಗಿದ್ದರು. ಆಬಳಿಕ ಮೋದಿ ಸರಕಾರ ಅಧಿಕಾರಕ್ಕೇರಿದ ಬಳಿಕ ಮೂಲೆಗುಂಪಾಗಿದ್ದು, 2018ರಲ್ಲಿ ಪಕ್ಷಕ್ಕೆ ರಾಜಿನಾಮೆ ನೀಡಿ ಸಕ್ರಿಯ ರಾಜಕೀಯದಿಂದ ಹೊರ ತೆರಳಿದ್ದರು. ಇದೀಗ ಟಿಎಂಸಿ ಸೇರ್ಪಡೆಯಾದ ಬಳಿಕ ಇದೇ ವಿಚಾರದ ಬಗ್ಗೆ ಮಾತನಾಡಿದ ಸಿನ್ಹಾ, ಈ ವಯಸ್ಸಲ್ಲಿ ಮತ್ತೆ ಸಕ್ರಿಯ ರಾಜಕೀಯಕ್ಕೆ ಬರ್ತೀದ್ದಾರಲ್ಲ ಎಂಬ ಸಹಜ ಪ್ರಶ್ನೆ ನಿಮ್ಮಲ್ಲಿರಬಹುದು. ಬೇರೊಂದು ಪಕ್ಷಕ್ಕೆ ಸೇರಿ ಸಕ್ರಿಯ ರಾಜಕಾರಣಕ್ಕೆ ಬರುತ್ತಿರುವ ಬಗ್ಗೆ ಕುತೂಹಲ ಇರಬಹುದು. ಆದರೆ, ದೇಶದ ಪರಿಸ್ಥಿತಿ ಈಗ ಸಂದಿಗ್ಧ ಸ್ಥಿತಿಯಲ್ಲಿದೆ. ಅದಕ್ಕಾಗಿ ರಾಜಕೀಯದಲ್ಲಿ ಸಕ್ರಿಯವಾಗುತ್ತಿದ್ದೇನೆ ಎಂದಿದ್ದಾರೆ.

ನ್ಯಾಯಾಂಗ ಸೇರಿದಂತೆ ಪ್ರಜಾಪ್ರಭುತ್ವದ ಅಡಿಗಲ್ಲು, ಆಧಾರ ಸ್ತಂಭಗಳು ದುರ್ಬಲಗೊಳ್ಳುತ್ತಿವೆ. ಚುನಾವಣೆ ಜಯಿಸುವುದಷ್ಟೇ ಈಗಿನ ಬಿಜೆಪಿಯ ಏಕಮಾತ್ರ ಗುರಿಯಾಗಿದೆ. ಅಟಲ್ ಜೀ ಇದ್ದಾಗ ಪಕ್ಷಗಳ ನಡುವೆ ಸಹಮತ ಇತ್ತು. ಈಗಿನ ಮಂದಿ ಇತರ ಪಕ್ಷಗಳನ್ನು ತುಳಿದೇ ಅಧಿಕಾರಕ್ಕೇರಲು ಹವಣಿಸುತ್ತಾರೆ. ಇದೇ ಕಾರಣಕ್ಕೆ ಬಿಜೆಪಿ ಜೊತೆಗಿದ್ದ ಬಿಜೆಡಿ, ಅಕಾಲಿದಳ ಹೊರಗೆ ಉಳಿದಿದೆ. ಈಗ ಬಿಜೆಪಿ ಜೊತೆಗೆ ಯಾರಿದ್ದಾರೆ ಎಂದು ಪ್ರಶ್ನಿಸಿದರು.
ಯಶವಂತ್ ಸಿನ್ಹಾ ಬಿಜೆಪಿಯಿಂದ ದೂರವುಳಿದಿದ್ದರೂ, ಅವರ ಜಯಂತ್ ಸಿನ್ಹಾ ಜಾರ್ಖಂಡಿನ ಹಝಾರಿಬಾಗ್ ಕ್ಷೇತ್ರದಲ್ಲಿ ಬಿಜೆಪಿ ಸಂಸದರಾಗಿದ್ದಾರೆ. 2014ರಲ್ಲಿ ಮೊದಲ ಬಾರಿಗೆ ಸಂಸದರಾಗಿದ್ದ ವೇಳೆ ವಿಮಾನ ಯಾನ ಮತ್ತು ಹಣಕಾಸು ಖಾತೆಯಲ್ಲಿ ರಾಜ್ಯ ಸಚಿವರಾಗಿದ್ದರು. 2019ರಲ್ಲಿ ಮರು ಆಯ್ಕೆಯಾಗಿದ್ದರೂ, ಜಯಂತ್ ಸಿನ್ಹಾಗೆ ಸಚಿವ ಸ್ಥಾನದ ಜವಾಬ್ದಾರಿ ನೀಡಿಲ್ಲ.
ಈ ನಡುವೆ, ಯಶವಂತ್ ಸಿನ್ಹಾ ಈಗಿನ ಬಿಜೆಪಿಯ ವಿರುದ್ಧ ಕಟು ಟೀಕಾಕಾರರಾಗಿ ಬದಲಾಗಿದ್ದರು. ಈಗ ಪಶ್ಚಿಮ ಬಂಗಾಳದಲ್ಲಿ ಚುನಾವಣೆಗೆ ಕೆಲವೇ ದಿನಗಳಿರುವಾಗ ಬದ್ಧ ಪ್ರತಿಸ್ಪರ್ಧಿ ಟಿಎಂಸಿ ಪಕ್ಷ ಸೇರಿ ಟಾಂಗ್ ನೀಡಿದ್ದಾರೆ. ಬಂಗಾಳದಲ್ಲಿ ಏಳು ಹಂತದ ಚುನಾವಣೆಯಿದ್ದು ಮೊದಲ ಮತದಾನ ಮಾ.27ರಂದು ನಡೆಯಲಿದೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 04:14 pm
HK News Staffer
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am