ಪತ್ನಿ ಜೊತೆ ಕಲಹ ; ಇಬ್ಬರು ಮಕ್ಕಳಿಗೆ ವಿಷವುಣಿಸಿ ತಂದೆ ಆತ್ಮಹತ್ಯೆ !

17-03-21 03:30 pm       Headline Karnataka News Network   ದೇಶ - ವಿದೇಶ

ಮಕ್ಕಳಿಗೆ ವಿಷವುಣಿಸಿ ತಂದೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಚೆರ್ವತ್ತೂರಿನಲ್ಲಿ ನಡೆದಿದೆ.

ಕಾಸರಗೋಡು, ಮಾ.17 : ಇಬ್ಬರು ಮಕ್ಕಳಿಗೆ ವಿಷವುಣಿಸಿ ತಂದೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಚೆರ್ವತ್ತೂರಿನಲ್ಲಿ ನಡೆದಿದೆ.

ಪಿಲಿಕ್ಕೋಡು ನಿವಾಸಿ ಆಟೋರಿಕ್ಷಾ ಚಾಲಕ ರೂಪೇಶ್ (37) ಮತ್ತು ಮಕ್ಕಳಾದ ವೈದೇಹಿ (10) ಮತ್ತು ಶಿವಾನಂದ (6) ಮೃತಪಟ್ಟವರು. ಅವರ ಮೃತದೇಹ ನಿರ್ಮಾಣ ಹಂತದಲ್ಲಿರುವ ಮನೆಯ ಕೋಣೆಯಲ್ಲಿ ಪತ್ತೆಯಾಗಿವೆ.

ಮಕ್ಕಳಿಬ್ಬರು ವಿಷ ಸೇವನೆಯಿಂದ ಮೃತಪಟ್ಟರೆ ರೂಪೇಶ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮಕ್ಕಳಿಗೆ ವಿಷವುಣಿಸಿ ಬಳಿಕ ಆತ್ಮಹತ್ಯೆಗೈದಿರುವ ಬಗ್ಗೆ ಶಂಕಿಸಲಾಗಿದೆ.

ರೂಪೇಶ್ ಅವರು ಕಾಞಂಗಾಡ್ ನ ಸವಿತಾ ಎಂಬಾಕೆಯನ್ನು ವಿವಾಹವಾಗಿದ್ದರು.  ದಾಂಪತ್ಯದಲ್ಲಿ ವಿರಸ ಮೂಡಿ ಇಬ್ಬರು ಬೇರೆ ಬೇರೆ ವಾಸವಾಗಿದ್ದರು ಎನ್ನಲಾಗಿದೆ . ಇಬ್ಬರು ಮಕ್ಕಳು, ತಂದೆ ಜೊತೆ ವಾಸವಾಗಿದ್ದರು. ಕೌಟುಂಬಿಕ ಕಲಹ ಕೃತ್ಯಕ್ಕೆ ಕಾರಣವಾಗಿರಬಹುದು ಎನ್ನಲಾಗಿದೆ. ಚಂದೇರ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ  ತನಿಖೆ ನಡೆಸುತ್ತಿದ್ದಾರೆ.

In a tragic incident A Husband who had dispute with his wife killed himself also by giving poison to two of his kids.