ಬ್ರೇಕಿಂಗ್ ನ್ಯೂಸ್
17-03-21 03:55 pm Headline Karnataka News Network ದೇಶ - ವಿದೇಶ
ನವದೆಹಲಿ, ಮಾ.17: ದೇಶದಲ್ಲಿ ಕೊರೊನಾ ಸೋಂಕಿನ ಎರಡನೇ ಅಲೆ ಎದ್ದಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಎಚ್ಚತ್ತುಕೊಂಡಿದ್ದು, ಇಂದು ದೇಶದಲ್ಲಿ ಸೋಂಕು ಹೆಚ್ಚಿರುವ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ವಿಡಿಯೋ ಸಂವಾದ ನಡೆಸಿದ್ದಾರೆ. ಅಲ್ಲದೆ, ಯಾವುದೇ ಕಾರಣಕ್ಕೂ ಹಳ್ಳಿಯತ್ತ ಸೋಂಕು ಹರಡದಂತೆ ಎಚ್ಚರ ವಹಿಸುವಂತೆ ಆಯಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಸೂಚನೆ ನೀಡಿದ್ದಾರೆ.
ಗುಜರಾತ್, ಕೇರಳ, ಮಹಾರಾಷ್ಟ್ರ, ಕರ್ನಾಟಕ ಮತ್ತು ಪಂಜಾಬ್ ರಾಜ್ಯಗಳಲ್ಲಿ ಸೋಂಕು ಹೆಚ್ಚಿದ್ದು, ಸೋಂಕು ಇನ್ನಷ್ಟು ಹರಡದಂತೆ ತುರ್ತು ಕ್ರಮ ಕೈಗೊಳ್ಳುವಂತೆ ಪ್ರಧಾನಿ ಸೂಚನೆ ನೀಡಿದ್ದಾರೆ. ಕಳೆದ ಒಂದು ವಾರದ ಅವಧಿಯಲ್ಲಿ ದೇಶದ 70 ಜಿಲ್ಲೆಗಳಲ್ಲಿ 150 ಪರ್ಸೆಂಟ್ ಕೋವಿಡ್ ಸೋಂಕು ಹೆಚ್ಚಿರುವುದು ಕಂಡುಬಂದಿದೆ. ಡಿಸೆಂಬರ್ ಬಳಿಕ ಇದೇ ಮೊದಲ ಬಾರಿಗೆ ಅತಿಹೆಚ್ಚು ಕೋವಿಡ್ ಸೋಂಕು ಕಂಡುಬಂದಿದ್ದು, ದೇಶದಲ್ಲಿ ಒಂದೇ ದಿನದಲ್ಲಿ 29 ಸಾವಿರ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಇದನ್ನು ಗಂಭೀರವಾಗಿ ಪರಿಗಣಿಸಿ, ಜನ ಸೇರುವ ಕಾರ್ಯಕ್ರಮಗಳಿಗೆ ತಾತ್ಕಾಲಿಕ ಬ್ರೇಕ್ ಹಾಕುವಂತೆ ಸೂಚನೆ ನೀಡಿದ್ದಾರೆ.
ಇದೇ ವೇಳೆ, ಲಸಿಕೆ ನೀಡುವುದನ್ನು ಹೆಚ್ಚಿಸಬೇಕು ಎಂದು ಸಲಹೆ ಮಾಡಿರುವ ಮೋದಿ, ಲಸಿಕೆ ವೇಸ್ಟ್ ಮಾಡುವ ವಿಚಾರವನ್ನು ಗಂಭೀರವಾಗಿ ಪರಿಗಣಿಸುವಂತೆ ಸೂಚನೆ ನೀಡಿದರು. ತೆಲಂಗಾಣ, ಆಂಧ್ರಪ್ರದೇಶ ಮತ್ತು ಉತ್ತರ ಪ್ರದೇಶದಲ್ಲಿ ಹತ್ತು ಶೇ.ದಷ್ಟು ಲಸಿಕೆ ವೇಸ್ಟ್ ಆಗುತ್ತಿದೆ. ಇದು ಯಾಕಾಗುತ್ತಿದೆ ಎನ್ನುವುದರ ಬಗ್ಗೆ ನಿಗಾ ವಹಿಸಬೇಕು ಎಂದು ಆಯಾ ರಾಜ್ಯ ಸರಕಾರಗಳಿಗೆ ಸೂಚಿಸಿದ್ದಾರೆ.
ಸಾರ್ವಜನಿಕರು ಕಡ್ಡಾಯ ಮಾಸ್ಕ್ ಬಳಸಬೇಕು. ಇದರ ಜೊತೆಗೆ, ದೈಹಿಕ ಅಂತರ ಮತ್ತು ಲಸಿಕೆ ಪಡೆಯುವುದನ್ನು ಕಡ್ಡಾಯ ಮಾಡಬೇಕು. ಈಗಾಗ್ಲೇ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡುವ ಅಭಿಯಾನ ನಡೆಯುತ್ತಿದ್ದು, ಇದನ್ನು ಆದಷ್ಟು ಬೇಗ ದೇಶಾದ್ಯಂತ ಹಿರಿಯ ನಾಗರಿಕರಿಗೆ ನೀಡುವಂತಾಗಬೇಕು ಎಂದು ಪ್ರಧಾನಿ ಮೋದಿ ಸಲಹೆ ಮಾಡಿದ್ದಾರೆ.
ದೇಶದಲ್ಲಿ ಸೋಂಕಿತರ ಚೇತರಿಕೆ 96 ಶೇಕಡಾ ಇದ್ದು, ಇದೇ ವೇಳೆ, ಜಗತ್ತಿನಲ್ಲಿಯೇ ಅತಿ ಕಡಿಮೆ ಮರಣ ಪ್ರಮಾಣ ಇದೆ. ಹಾಗೆಂದು ನಮ್ಮದು ಅತಿ ಆತ್ಮವಿಶ್ವಾಸ ಆಗಬಾರದು. ಕೋವಿಡ್ ಎದುರಿಸುವ ಯಶಸ್ಸು ಎಂದೂ ನಿರ್ಲಕ್ಷ್ಯಕ್ಕೆ ಕಾರಣವಾಗಬಾರದು ಎಂದು ಹೇಳಿದ ಮೋದಿ, ಉತ್ತರ ಪ್ರದೇಶ, ಕೇರಳ, ಛತ್ತೀಸ್ ಗಢ ರಾಜ್ಯಗಳು ಏಂಟಿಜೆನ್ ಪರೀಕ್ಷೆಗಳನ್ನು ಹೆಚ್ಚು ಮಾಡುತ್ತಿದೆ. ಆದರೆ, ಇದರಿಂದ ಸೋಂಕು ಪತ್ತೆ ಸಾಧ್ಯವಾಗಲ್ಲ. ಬದಲಿಗೆ, ಆರ್ ಟಿಪಿಸಿಆರ್ ಟೆಸ್ಟ್ ಗಳನ್ನು ಹೆಚ್ಚು ಮಾಡುವುದರಿಂದ ಸೋಂಕು ಪತ್ತೆ ಸಾಧ್ಯ ಎಂದು ಹೇಳಿದರು.
ಜನರನ್ನು ಆತಂಕ ಪಡುವಂತೆ ಮಾಡುವುದು ಅಥವಾ ಭಯಕ್ಕೆ ಒಳಪಡಿಸುವುದು ನಮ್ಮ ಉದ್ದೇಶ ಅಲ್ಲ. ಬದಲಿಗೆ, ಮುಂಜಾಗ್ರತೆ ಮತ್ತು ಕಠಿಣ ನಿಯಮಗಳನ್ನು ಪಾಲಿಸಿಕೊಂಡು ಜನರನ್ನು ಸೇಫ್ ಆಗಿಸುವುದು ನಮ್ಮ ಉದ್ದೇಶ ಎಂದು ಸೂಚ್ಯವಾಗಿ ಹೇಳಿದರು ಪ್ರಧಾನಿ. ವಿಡಿಯೋ ಸಂವಾದದಲ್ಲಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಛತ್ತೀಸ್ ಗಢ ಸಿಎಂ ಭೂಪೇಶ್ ಭಾಗೆಲ್ ಭಾಗವಹಿಸಿಲ್ಲ.
Speaking at the interaction with Chief Ministers. https://t.co/s0c7OSK8zK
— Narendra Modi (@narendramodi) March 17, 2021
Prime Minister Narendra Modi speaks during a meeting with chief ministers of all states and Union territories over the spike in COVID-19 cases via video conferencing in New Delhi on Wednesday.
18-05-24 10:01 pm
Bangalore Correspondent
Bangalore crime: ತನ್ನ ಮೊಬೈಲ್ ತೆಗೆದು ಗೇಮ್ಸ್ ಆ...
18-05-24 08:20 pm
Dr Dhananjaya Sarji, Vidhan Parishad election...
18-05-24 07:24 pm
Bangalore KSRTC Bus accident, Bridge: ಡ್ರೈವರ್...
18-05-24 04:18 pm
Haveri Lokayukta arrest Police: ಇಸ್ಪೀಟ್ ಆಡಿಸಲ...
18-05-24 10:25 am
18-05-24 10:18 pm
HK News Desk
Pavithra Jayaram, Chandrakanth suicide: ಸೀರಿಯ...
18-05-24 09:15 pm
ಕರೆಂಟ್ ಶಾಕ್ ಹೊಡೆದು ಕುಸಿದು ಬಿದ್ದ ಆರು ವರ್ಷದ ಬಾಲ...
18-05-24 11:54 am
ಮೋದಿ ನೇತೃತ್ವದಲ್ಲಿ ಭಾರತ ಹೊಸ ಎತ್ತರಕ್ಕೆ ಹೋಗಿದೆ,...
17-05-24 09:56 pm
PM Modi, Ayodhya Ram Temple, Yogi Adityanath:...
17-05-24 05:59 pm
18-05-24 10:31 pm
Mangalore Correspondent
Raghupati Bhat, BJP, Mangalore: ಬಿಜೆಪಿಯಲ್ಲಿ ಗ...
18-05-24 05:13 pm
Mangalore Naturals Ice Cream owner, Raghunand...
18-05-24 11:48 am
Mangalore News, Traffic police video: ಪೊಲೀಸ್...
17-05-24 09:17 pm
MLA Ashok Rai Puttur: ಶಾಸಕನಾಗಿ ಒಂದು ವರ್ಷ ; ಜನ...
17-05-24 04:32 pm
18-05-24 04:05 pm
HK News Desk
ಹೊಸದುರ್ಗ ; ಮನೆಯಲ್ಲಿ ಮಲಗಿದ್ದ ಬಾಲಕಿಯನ್ನು ನಸುಕಿನ...
17-05-24 09:52 pm
Kalaburagi police bus, crime: ಕುಡಿದ ನಶೆಯಲ್ಲಿ...
17-05-24 07:23 pm
7-8 ಬಾರಿ ಎದೆ, ಹೊಟ್ಟೆಗೆ ತಿವಿದಿದ್ದಾನೆ, ನೆಲಕ್ಕೆ...
17-05-24 05:38 pm
Bangalore crime, Police: ಇವ್ನು ಬೆಸ್ಕಾಂ ಸಹಾಯಕ...
17-05-24 05:17 pm