ಬ್ರೇಕಿಂಗ್ ನ್ಯೂಸ್
20-08-20 07:09 pm Headline Karnataka News Network ದೇಶ - ವಿದೇಶ
ಚೆನ್ನೈ , ಆಗಸ್ಟ್ 20: ತಂದೆಯ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಾಣುತ್ತಿಲ್ಲ ಅಂತ ಎಸ್ಪಿಬಿ ಪುತ್ರ ಚರಣ್ ಆತಂಕ ವ್ಯಕ್ತಪಡಿಸಿದ್ದಾರೆ. ಇಂದು ಮತ್ತೆ ಎಸ್ ಪಿ ಬಿಯವರ ಆರೋಗ್ಯದ ಬಗ್ಗೆ ಪುತ್ರ ಚರಣ್ ಮಾಹಿತಿಯನ್ನ ಕೊಟ್ಟಿದ್ದಾರೆ.
ತಂದೆಯ ಆರೋಗ್ಯದಲ್ಲಿ ಯಾವುದೇ ರೀತಿ ಚೇತರಿಕೆ ಕಾಣ್ತಿಲ್ಲ. ಆದ್ರೂ ನಮಗೆ ನಂಬಿಕೆ ಇದೆ. ದೇವರ ಮೇಲೆ ನಂಬಿಕೆ ಇಟ್ಟಿದ್ದೇವೆ. ಅವ್ರು ಚೇತರಿಸಿಕೊಂಡು ದೇವರು, ಅಭಿಮಾನಿಗಳ ಆಶೀರ್ವಾದದಿಂದ ಅನಾರೋಗ್ಯ ಗೆದ್ದು ಬರ್ತಾರೆ. ಎಲ್ಲಾ ಚಿತ್ರರಂಗ, ಸಂಗೀತ ನಿರ್ದೇಶಕರ ತಂಡಕ್ಕೂ ಧನ್ಯವಾದ ಹೇಳಲು ಇಚ್ಚಿಸುತ್ತೇನೆ. ಸಂಜೆ 6 ಗಂಟೆಗೆ ಗಾನ ಸಂಕಲ್ಪದ ಪ್ರಾರ್ಥನೆಗೂ ಧನ್ಯವಾದಗಳು. ನಮ್ಮ ಕುಟುಂಬಸ್ಥರಿಂದ ನಿಮ್ಮೆಲ್ಲರಿಗೂ ಧನ್ಯವಾದ. ನಾವು ಎಲ್ಲರಿಗೂ ಚಿರರುಣಿಯಾಗಿದ್ದೇವೆ. ಇಡೀ ದೇಶವೇ ತುಂಬಾ ಪ್ರೀತಿಯಿಂದ ಪ್ರಾರ್ಥಿಸುತ್ತಿದ್ದೀರಾ ಎಂದು ದುಃಖತಪ್ತರಾಗಿ ಚರಣ್ ಮಾಹಿತಿಯನ್ನ ಹಂಚಿಕೊಂಡಿದ್ದಾರೆ.
ಇನ್ನು ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಚೇತರಿಕೆಗಾಗಿ ಪ್ರಾರ್ಥಿಸಿ ಇಂದು ವಿಶ್ವಾದ್ಯಂತ ಅವರ ಅಭಿಮಾನಿಗಳು ‘ಸಾಮೂಹಿಕ ಪ್ರಾರ್ಥನೆ’ ನಡೆಸಲಿದ್ದಾರೆ.
74 ವರ್ಷ ಪ್ರಾಯದ ಈ ಶ್ರೇಷ್ಠ ಗಾಯಕನ ಆರೋಗ್ಯ ಚೇತರಿಕೆಗಾಗಿ ಈ ಪ್ರಾರ್ಥನೆ ನಡೆಯಲಿದೆ. ನಿರ್ದೇಶಕ ಭರತ್ ರಾಜ್ ಅವರು ಈ ಸಾಮೂಹಿಕ ಪ್ರಾರ್ಥನೆಯ ಕರೆಯನ್ನು ನೀಡಿದ್ದಾರೆ.
ಕೋವಿಡ್ 19 ಪಾಸಿಟಿವ್ ಕಾಣಿಸಿಕೊಂಡಿದ್ದ ಕಾರಣದಿಂದಾಗಿ ಗಾಯಕ ಎಸ್.ಪಿ.ಬಿ ಅವರು ಆಗಸ್ಟ್ 5ರಂದು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲುಗೊಂಡಿದ್ದರು.
‘ಗುರುವಾರ ಸಾಯಂಕಾಲ 6 ಗಂಟೆಗೆ ಸರಿಯಾಗಿ ಭಾರತವೂ ಸೇರಿದಂತೆ ವಿಶ್ವಾದ್ಯಂತ ಇರುವ ಎಸ್.ಪಿ.ಬಿ ಅಭಿಮಾನಿಗಳು ಅವರು ಹಾಡಿರುವ ಹಾಡುಗಳನ್ನು ಹಾಡುವ ಮೂಲಕ ಈ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸಲಿದ್ದಾರೆ’ ಎಂದು ನಿರ್ದೇಶಕ ಭರತ್ ರಾಜ್ ತಿಳಿಸಿದ್ದಾರೆ.
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 04:45 pm
HK News Desk
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
14-05-25 06:33 pm
Mangalore Correspondent
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm