ಬ್ರೇಕಿಂಗ್ ನ್ಯೂಸ್
20-08-20 07:09 pm Headline Karnataka News Network ದೇಶ - ವಿದೇಶ
ಚೆನ್ನೈ , ಆಗಸ್ಟ್ 20: ತಂದೆಯ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಾಣುತ್ತಿಲ್ಲ ಅಂತ ಎಸ್ಪಿಬಿ ಪುತ್ರ ಚರಣ್ ಆತಂಕ ವ್ಯಕ್ತಪಡಿಸಿದ್ದಾರೆ. ಇಂದು ಮತ್ತೆ ಎಸ್ ಪಿ ಬಿಯವರ ಆರೋಗ್ಯದ ಬಗ್ಗೆ ಪುತ್ರ ಚರಣ್ ಮಾಹಿತಿಯನ್ನ ಕೊಟ್ಟಿದ್ದಾರೆ.
ತಂದೆಯ ಆರೋಗ್ಯದಲ್ಲಿ ಯಾವುದೇ ರೀತಿ ಚೇತರಿಕೆ ಕಾಣ್ತಿಲ್ಲ. ಆದ್ರೂ ನಮಗೆ ನಂಬಿಕೆ ಇದೆ. ದೇವರ ಮೇಲೆ ನಂಬಿಕೆ ಇಟ್ಟಿದ್ದೇವೆ. ಅವ್ರು ಚೇತರಿಸಿಕೊಂಡು ದೇವರು, ಅಭಿಮಾನಿಗಳ ಆಶೀರ್ವಾದದಿಂದ ಅನಾರೋಗ್ಯ ಗೆದ್ದು ಬರ್ತಾರೆ. ಎಲ್ಲಾ ಚಿತ್ರರಂಗ, ಸಂಗೀತ ನಿರ್ದೇಶಕರ ತಂಡಕ್ಕೂ ಧನ್ಯವಾದ ಹೇಳಲು ಇಚ್ಚಿಸುತ್ತೇನೆ. ಸಂಜೆ 6 ಗಂಟೆಗೆ ಗಾನ ಸಂಕಲ್ಪದ ಪ್ರಾರ್ಥನೆಗೂ ಧನ್ಯವಾದಗಳು. ನಮ್ಮ ಕುಟುಂಬಸ್ಥರಿಂದ ನಿಮ್ಮೆಲ್ಲರಿಗೂ ಧನ್ಯವಾದ. ನಾವು ಎಲ್ಲರಿಗೂ ಚಿರರುಣಿಯಾಗಿದ್ದೇವೆ. ಇಡೀ ದೇಶವೇ ತುಂಬಾ ಪ್ರೀತಿಯಿಂದ ಪ್ರಾರ್ಥಿಸುತ್ತಿದ್ದೀರಾ ಎಂದು ದುಃಖತಪ್ತರಾಗಿ ಚರಣ್ ಮಾಹಿತಿಯನ್ನ ಹಂಚಿಕೊಂಡಿದ್ದಾರೆ.
ಇನ್ನು ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಚೇತರಿಕೆಗಾಗಿ ಪ್ರಾರ್ಥಿಸಿ ಇಂದು ವಿಶ್ವಾದ್ಯಂತ ಅವರ ಅಭಿಮಾನಿಗಳು ‘ಸಾಮೂಹಿಕ ಪ್ರಾರ್ಥನೆ’ ನಡೆಸಲಿದ್ದಾರೆ.
74 ವರ್ಷ ಪ್ರಾಯದ ಈ ಶ್ರೇಷ್ಠ ಗಾಯಕನ ಆರೋಗ್ಯ ಚೇತರಿಕೆಗಾಗಿ ಈ ಪ್ರಾರ್ಥನೆ ನಡೆಯಲಿದೆ. ನಿರ್ದೇಶಕ ಭರತ್ ರಾಜ್ ಅವರು ಈ ಸಾಮೂಹಿಕ ಪ್ರಾರ್ಥನೆಯ ಕರೆಯನ್ನು ನೀಡಿದ್ದಾರೆ.
ಕೋವಿಡ್ 19 ಪಾಸಿಟಿವ್ ಕಾಣಿಸಿಕೊಂಡಿದ್ದ ಕಾರಣದಿಂದಾಗಿ ಗಾಯಕ ಎಸ್.ಪಿ.ಬಿ ಅವರು ಆಗಸ್ಟ್ 5ರಂದು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲುಗೊಂಡಿದ್ದರು.
‘ಗುರುವಾರ ಸಾಯಂಕಾಲ 6 ಗಂಟೆಗೆ ಸರಿಯಾಗಿ ಭಾರತವೂ ಸೇರಿದಂತೆ ವಿಶ್ವಾದ್ಯಂತ ಇರುವ ಎಸ್.ಪಿ.ಬಿ ಅಭಿಮಾನಿಗಳು ಅವರು ಹಾಡಿರುವ ಹಾಡುಗಳನ್ನು ಹಾಡುವ ಮೂಲಕ ಈ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸಲಿದ್ದಾರೆ’ ಎಂದು ನಿರ್ದೇಶಕ ಭರತ್ ರಾಜ್ ತಿಳಿಸಿದ್ದಾರೆ.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am