ಬ್ರೇಕಿಂಗ್ ನ್ಯೂಸ್
20-08-20 07:09 pm Headline Karnataka News Network ದೇಶ - ವಿದೇಶ
ಚೆನ್ನೈ , ಆಗಸ್ಟ್ 20: ತಂದೆಯ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಾಣುತ್ತಿಲ್ಲ ಅಂತ ಎಸ್ಪಿಬಿ ಪುತ್ರ ಚರಣ್ ಆತಂಕ ವ್ಯಕ್ತಪಡಿಸಿದ್ದಾರೆ. ಇಂದು ಮತ್ತೆ ಎಸ್ ಪಿ ಬಿಯವರ ಆರೋಗ್ಯದ ಬಗ್ಗೆ ಪುತ್ರ ಚರಣ್ ಮಾಹಿತಿಯನ್ನ ಕೊಟ್ಟಿದ್ದಾರೆ.
ತಂದೆಯ ಆರೋಗ್ಯದಲ್ಲಿ ಯಾವುದೇ ರೀತಿ ಚೇತರಿಕೆ ಕಾಣ್ತಿಲ್ಲ. ಆದ್ರೂ ನಮಗೆ ನಂಬಿಕೆ ಇದೆ. ದೇವರ ಮೇಲೆ ನಂಬಿಕೆ ಇಟ್ಟಿದ್ದೇವೆ. ಅವ್ರು ಚೇತರಿಸಿಕೊಂಡು ದೇವರು, ಅಭಿಮಾನಿಗಳ ಆಶೀರ್ವಾದದಿಂದ ಅನಾರೋಗ್ಯ ಗೆದ್ದು ಬರ್ತಾರೆ. ಎಲ್ಲಾ ಚಿತ್ರರಂಗ, ಸಂಗೀತ ನಿರ್ದೇಶಕರ ತಂಡಕ್ಕೂ ಧನ್ಯವಾದ ಹೇಳಲು ಇಚ್ಚಿಸುತ್ತೇನೆ. ಸಂಜೆ 6 ಗಂಟೆಗೆ ಗಾನ ಸಂಕಲ್ಪದ ಪ್ರಾರ್ಥನೆಗೂ ಧನ್ಯವಾದಗಳು. ನಮ್ಮ ಕುಟುಂಬಸ್ಥರಿಂದ ನಿಮ್ಮೆಲ್ಲರಿಗೂ ಧನ್ಯವಾದ. ನಾವು ಎಲ್ಲರಿಗೂ ಚಿರರುಣಿಯಾಗಿದ್ದೇವೆ. ಇಡೀ ದೇಶವೇ ತುಂಬಾ ಪ್ರೀತಿಯಿಂದ ಪ್ರಾರ್ಥಿಸುತ್ತಿದ್ದೀರಾ ಎಂದು ದುಃಖತಪ್ತರಾಗಿ ಚರಣ್ ಮಾಹಿತಿಯನ್ನ ಹಂಚಿಕೊಂಡಿದ್ದಾರೆ.
ಇನ್ನು ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಚೇತರಿಕೆಗಾಗಿ ಪ್ರಾರ್ಥಿಸಿ ಇಂದು ವಿಶ್ವಾದ್ಯಂತ ಅವರ ಅಭಿಮಾನಿಗಳು ‘ಸಾಮೂಹಿಕ ಪ್ರಾರ್ಥನೆ’ ನಡೆಸಲಿದ್ದಾರೆ.
74 ವರ್ಷ ಪ್ರಾಯದ ಈ ಶ್ರೇಷ್ಠ ಗಾಯಕನ ಆರೋಗ್ಯ ಚೇತರಿಕೆಗಾಗಿ ಈ ಪ್ರಾರ್ಥನೆ ನಡೆಯಲಿದೆ. ನಿರ್ದೇಶಕ ಭರತ್ ರಾಜ್ ಅವರು ಈ ಸಾಮೂಹಿಕ ಪ್ರಾರ್ಥನೆಯ ಕರೆಯನ್ನು ನೀಡಿದ್ದಾರೆ.
ಕೋವಿಡ್ 19 ಪಾಸಿಟಿವ್ ಕಾಣಿಸಿಕೊಂಡಿದ್ದ ಕಾರಣದಿಂದಾಗಿ ಗಾಯಕ ಎಸ್.ಪಿ.ಬಿ ಅವರು ಆಗಸ್ಟ್ 5ರಂದು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲುಗೊಂಡಿದ್ದರು.
‘ಗುರುವಾರ ಸಾಯಂಕಾಲ 6 ಗಂಟೆಗೆ ಸರಿಯಾಗಿ ಭಾರತವೂ ಸೇರಿದಂತೆ ವಿಶ್ವಾದ್ಯಂತ ಇರುವ ಎಸ್.ಪಿ.ಬಿ ಅಭಿಮಾನಿಗಳು ಅವರು ಹಾಡಿರುವ ಹಾಡುಗಳನ್ನು ಹಾಡುವ ಮೂಲಕ ಈ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸಲಿದ್ದಾರೆ’ ಎಂದು ನಿರ್ದೇಶಕ ಭರತ್ ರಾಜ್ ತಿಳಿಸಿದ್ದಾರೆ.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 05:42 pm
HK News Staffer
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm