ಬ್ರೇಕಿಂಗ್ ನ್ಯೂಸ್
20-03-21 01:51 pm Headline Karnataka News Network ದೇಶ - ವಿದೇಶ
ಚೆನ್ನೈ,ಮಾ 20 : ತಮಿಳುನಾಡಿನ ಅರವಕುರಚಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ನಾಮಪತ್ರಕ್ಕೆ ಚುನಾವಣಾ ಆಯೋಗ ತಡೆ ನೀಡಿದೆ. ನಾಮಪತ್ರದಲ್ಲಿ ಅಪರಾಧ ಪ್ರಕರಣಗಳ ಬಗ್ಗೆಉಲ್ಲೇಖಿಸಲ್ಲವೆಂಬ ಕಾರಣಕ್ಕೆ ತಡೆ ನೀಡಲಾಗಿದ್ದು, ಸ್ಪಷ್ಟೀಕರಣ ನೀಡುವಂತೆ ಚುನಾವಣಾ ಆಯೋಗ ಕೇಳಿದೆ.

ಅಣ್ಣಾಮಲೈ ವಿರುದ್ಧ 10ಕ್ಕೂ ಹೆಚ್ಚು ಅಪರಾಧ ಪ್ರಕರಣಗಳಿವೆ ಎಂದು ಸ್ವತಂತ್ರ ಅಭ್ಯರ್ಥಿಗಳು ಆರೋಪ ಮಾಡಿರುವ ಹಿನ್ನೆಲೆಯಲ್ಲಿ ಆಯೋಗಕ್ಕೆ ತಪ್ಪು ಮಾಹಿತಿ ನೀಡಿರುವುದಾಗಿ ತಿಳಿಸಿ ನಾಮಪತ್ರಕ್ಕೆ ತಡೆ ಹೇರಲಾಗಿದೆ.

ಅರವಕುರಚಿ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿರುವ ಅಣ್ಣಾಮಲೈ ಅವರನ್ನು ಪ್ರಬಲ ಅಭ್ಯರ್ಥಿಯಾಗಿ ಬಿಂಬಿಸಿರುವ ಬಿಜೆಪಿ ಶತಾಯಗತಾಯ ಗೆಲ್ಲಿಸಬೇಕೆಂದು ಪಣತೊಟ್ಟಿದೆ. ಡಿಎಂಕೆ ಪಕ್ಷದ ಭದ್ರಕೋಟೆಯಿಂದಲೇ ಸ್ಪರ್ಧಿಸುತ್ತಿರುವ ಅಣ್ಣಾಮಲೈ ಮಾರ್ಚ್ 18ರಂದು ಸೈಕಲ್ ಮೂಲಕ ಆಗಮಿಸಿ ನಾಮಪತ್ರ ಸಲ್ಲಿಸಿದ್ದರು. ನಾನು ಜನಸಾಮಾನ್ಯರ ಪ್ರತಿನಿಧಿ ಎಂದು ಹೇಳಿಕೊಂಡು ಸೈಕಲ್ನಲ್ಲಿ ಬಂದಿದ್ದ ಅಣ್ಣಾಮಲೈಗೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ಮುನಿರತ್ನ ಸೇರಿದಂತೆ ತಮಿಳುನಾಡಿನ ಬಿಜೆಪಿ ನಾಯಕರು, ಕಾರ್ಯಕರ್ತರು ಬೆಂಬಲ ನೀಡಿದ್ದರು.
ಏಪ್ರಿಲ್ 6ಕ್ಕೆ ನಡೆಯಲಿರುವ ತಮಿಳುನಾಡು ವಿಧಾನಸಭೆ ಚುನಾವಣೆಯಿಂದ ಸ್ಪರ್ಧಿಸಲು ಸರ್ವಸನ್ನದ್ಧರಾಗಿರುವ ಅಣ್ಣಾಮಲೈಗೆ ಇದೀಗ ಮೊದಲ ತಡೆ ಎದುರಾಗಿದೆ.
Election commission brings stay on BJP contestant and former IPS officer K Annamalai whose contesting from Aravakurichi in Tamil Nadu.
06-04-26 08:51 pm
HK News Staffer
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
06-04-26 06:16 pm
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
ಯುಎಇಯಿಂದ ಪಾಕಿಸ್ತಾನಕ್ಕೆ ಬಿಗ್ ಶಾಕ್ ; 2 ಬಿಲಿಯನ್...
05-04-26 12:37 pm
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
06-04-26 07:58 pm
HK News Staffer
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
06-04-26 05:40 pm
HK News Staffer
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm