ಬ್ರೇಕಿಂಗ್ ನ್ಯೂಸ್
20-03-21 01:51 pm Headline Karnataka News Network ದೇಶ - ವಿದೇಶ
ಚೆನ್ನೈ,ಮಾ 20 : ತಮಿಳುನಾಡಿನ ಅರವಕುರಚಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ನಾಮಪತ್ರಕ್ಕೆ ಚುನಾವಣಾ ಆಯೋಗ ತಡೆ ನೀಡಿದೆ. ನಾಮಪತ್ರದಲ್ಲಿ ಅಪರಾಧ ಪ್ರಕರಣಗಳ ಬಗ್ಗೆಉಲ್ಲೇಖಿಸಲ್ಲವೆಂಬ ಕಾರಣಕ್ಕೆ ತಡೆ ನೀಡಲಾಗಿದ್ದು, ಸ್ಪಷ್ಟೀಕರಣ ನೀಡುವಂತೆ ಚುನಾವಣಾ ಆಯೋಗ ಕೇಳಿದೆ.

ಅಣ್ಣಾಮಲೈ ವಿರುದ್ಧ 10ಕ್ಕೂ ಹೆಚ್ಚು ಅಪರಾಧ ಪ್ರಕರಣಗಳಿವೆ ಎಂದು ಸ್ವತಂತ್ರ ಅಭ್ಯರ್ಥಿಗಳು ಆರೋಪ ಮಾಡಿರುವ ಹಿನ್ನೆಲೆಯಲ್ಲಿ ಆಯೋಗಕ್ಕೆ ತಪ್ಪು ಮಾಹಿತಿ ನೀಡಿರುವುದಾಗಿ ತಿಳಿಸಿ ನಾಮಪತ್ರಕ್ಕೆ ತಡೆ ಹೇರಲಾಗಿದೆ.

ಅರವಕುರಚಿ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿರುವ ಅಣ್ಣಾಮಲೈ ಅವರನ್ನು ಪ್ರಬಲ ಅಭ್ಯರ್ಥಿಯಾಗಿ ಬಿಂಬಿಸಿರುವ ಬಿಜೆಪಿ ಶತಾಯಗತಾಯ ಗೆಲ್ಲಿಸಬೇಕೆಂದು ಪಣತೊಟ್ಟಿದೆ. ಡಿಎಂಕೆ ಪಕ್ಷದ ಭದ್ರಕೋಟೆಯಿಂದಲೇ ಸ್ಪರ್ಧಿಸುತ್ತಿರುವ ಅಣ್ಣಾಮಲೈ ಮಾರ್ಚ್ 18ರಂದು ಸೈಕಲ್ ಮೂಲಕ ಆಗಮಿಸಿ ನಾಮಪತ್ರ ಸಲ್ಲಿಸಿದ್ದರು. ನಾನು ಜನಸಾಮಾನ್ಯರ ಪ್ರತಿನಿಧಿ ಎಂದು ಹೇಳಿಕೊಂಡು ಸೈಕಲ್ನಲ್ಲಿ ಬಂದಿದ್ದ ಅಣ್ಣಾಮಲೈಗೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ಮುನಿರತ್ನ ಸೇರಿದಂತೆ ತಮಿಳುನಾಡಿನ ಬಿಜೆಪಿ ನಾಯಕರು, ಕಾರ್ಯಕರ್ತರು ಬೆಂಬಲ ನೀಡಿದ್ದರು.
ಏಪ್ರಿಲ್ 6ಕ್ಕೆ ನಡೆಯಲಿರುವ ತಮಿಳುನಾಡು ವಿಧಾನಸಭೆ ಚುನಾವಣೆಯಿಂದ ಸ್ಪರ್ಧಿಸಲು ಸರ್ವಸನ್ನದ್ಧರಾಗಿರುವ ಅಣ್ಣಾಮಲೈಗೆ ಇದೀಗ ಮೊದಲ ತಡೆ ಎದುರಾಗಿದೆ.
Election commission brings stay on BJP contestant and former IPS officer K Annamalai whose contesting from Aravakurichi in Tamil Nadu.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm