ಬ್ರೇಕಿಂಗ್ ನ್ಯೂಸ್
22-03-21 02:05 pm Headline Karnataka News Network ದೇಶ - ವಿದೇಶ
ತಿರುವನಂತಪುರಂ, ಮಾ.22: ಕೇರಳ ಅಸೆಂಬ್ಲಿ ಚುನಾವಣೆಯಲ್ಲಿ ಬಿಜೆಪಿಗೆ ಚುನಾವಣೆಯ ಮೊದಲೇ ಹಿನ್ನಡೆಯಾಗಿದೆ. ಬಿಜೆಪಿ ಮತ್ತು ಮಿತ್ರಪಕ್ಷ ಎಐಎಡಿಎಂಕೆಯ ಮೂವರು ಅಸೆಂಬ್ಲಿ ಅಭ್ಯರ್ಥಿಗಳ ನಾಮಪತ್ರವನ್ನು ಚುನಾವಣಾಧಿಕಾರಿಗಳು ತಿರಸ್ಕರಿಸಿದ್ದಾರೆ.

ತಲಶ್ಶೇರಿ ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿ ಕಣ್ಣೂರು ಜಿಲ್ಲಾಧ್ಯಕ್ಷ ಎನ್.ಹರಿದಾಸ್ ನಾಮಪತ್ರ ಸಲ್ಲಿಸಿದ್ದರು. ಆದರೆ, ನಾಮಪತ್ರವನ್ನು ಚುನಾವಣಾಧಿಕಾರಿ ತಿರಸ್ಕರಿಸಿದ್ದಾರೆ. ಬಿಜೆಪಿಯಿಂದ ನೀಡಿರುವ ಬಿ ಫಾರ್ಮ್ ನಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸಹಿ ಇಲ್ಲವೆಂದು ನಾಮಪತ್ರ ತಿರಸ್ಕಾರ ಮಾಡಿದ್ದಾರೆ ಎನ್ನಲಾಗುತ್ತಿದೆ.
ಇದೇ ರೀತಿ ಗುರುವಾಯೂರು ಕ್ಷೇತ್ರದಲ್ಲಿ ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆ ನಿವೇದಿತಾ ಸುಬ್ರಹ್ಮಣ್ಯಂ ಅವರ ನಾಮಪತ್ರವನ್ನು ತಿರಸ್ಕರಿಸಲಾಗಿದೆ. ನಾಮಪತ್ರದಲ್ಲಿ ಪಕ್ಷದ ಅಧ್ಯಕ್ಷರ ಸಹಿ ಇಲ್ಲವೆಂದು ಅಧಿಕಾರಿಗಳು ನಿರಾಕರಣೆ ಮಾಡಿದ್ದಾರೆಂದು ಹೇಳಲಾಗುತ್ತಿದೆ.

ಇಡುಕ್ಕಿ ಜಿಲ್ಲೆಯ ದೇವಿಕುಳಂ ಕ್ಷೇತ್ರದಲ್ಲಿ ಎಐಎಡಿಎಂಕೆಯ ಅಭ್ಯರ್ಥಿ ಧನಲಕ್ಷ್ಮಿ ಎಂಬವರ ನಾಮಪತ್ರವನ್ನು ಪೂರ್ತಿಯಾಗಿ ತುಂಬಿಲ್ಲ ಎಂಬ ಕಾರಣಕ್ಕೆ ನಿರಾಕರಣೆ ಮಾಡಲಾಗಿದೆ. ಕೇರಳ ಮತ್ತು ತಮಿಳುನಾಡಿನಲ್ಲಿ ಎಐಎಡಿಎಂಕೆ ಬಿಜೆಪಿಯ ಮಿತ್ರಪಕ್ಷವಾಗಿದ್ದು, ಎನ್ ಡಿಎ ಮೈತ್ರಿಕೂಟದಲ್ಲಿ ಸ್ಪರ್ಧಿಸುತ್ತಿದ್ದಾರೆ.
ಇದೇ ಬಿಜೆಪಿ ಚುನವಾಣಾಧಿಕಾರಿಗಳ ನಿರ್ಧಾರವನ್ನು ಪ್ರಶ್ನಿಸಿ, ಹೈಕೋರ್ಟ್ ಮೆಟ್ಟಿಲೇರಿದೆ. ಕೋರ್ಟ್ ಚುನಾವಣಾ ಆಯೋಗಕ್ಕೆ ಉತ್ತರ ನೀಡುವಂತೆ ನೋಟೀಸ್ ಮಾಡಿದೆ.
Kerala Election 2021 Live News: Nomination forms of 2 BJP candidates declared invalid
04-12-25 05:36 pm
HK News Desk
Bagalakote Accident, Four Killed: ಬಾಗಲಕೋಟೆ ;...
03-12-25 03:01 pm
ಜೈಷ್-ಇ-ಮೊಹಮ್ಮದ್ ಹೆಸರಲ್ಲಿ ಬೆಂಗಳೂರು ಏರ್ಪೋರ್ಟ್,...
02-12-25 10:17 pm
ಸಂಪುಟ ಪುನಾರಚನೆಯಾದ್ರೆ ಮುನಿಯಪ್ಪ, ಮಹದೇವಪ್ಪ, ಪರಮೇ...
02-12-25 06:29 pm
ಕೃತಕ ಬುದ್ಧಿಮತ್ತೆ ಎಫೆಕ್ಟ್ ; ಭವಿಷ್ಯದಲ್ಲಿ ಜನರು ಕ...
01-12-25 10:59 pm
04-12-25 05:39 pm
HK News Desk
IndiGo Cancels Nearly 200 Flights Nationwide;...
04-12-25 11:15 am
Nationwide Census: ಎರಡು ಹಂತಗಳಲ್ಲಿ ದೇಶಾದ್ಯಂತ ಜ...
03-12-25 07:19 pm
Jawaharlal Nehru, Babri Masjid, Sardar Patel,...
03-12-25 07:14 pm
ಅಮೆರಿಕದ ಡಾಲರ್ ಎದುರು ನೈಂಟಿ ಕ್ರಾಸ್ ಮಾಡಿದ ರೂಪಾಯಿ...
03-12-25 05:32 pm
05-12-25 12:24 pm
Mangalore Correspondent
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
Mithun Rai Congress, Notice: ಎಐಸಿಸಿ ಸೆಕ್ರಟರಿ...
05-12-25 10:34 am
Brother Sajith Joseph Ban, Mangalore Prayer:...
04-12-25 06:39 pm
ಅಜ್ಜನ ಕೈಹಿಡಿದು ಹೆದ್ದಾರಿ ದಾಟಿ ತಿಂಡಿಗೆ ಹೋಗಿದ್ದ...
04-12-25 12:38 pm
04-12-25 11:15 pm
Mangalore Correspondent
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm
ಬೆಂಗಳೂರು ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ; ರಕ್ತಚ...
04-12-25 04:18 pm
ಹೊಸ ವರ್ಷದ ಸಂಭ್ರಮಾಚರಣೆಗೆ ಡ್ರಗ್ಸ್ ಮಾರಾಟ ಮಾಡಲು ಸ...
03-12-25 01:41 pm
ಲೈಂಗಿಕ ಸಮಸ್ಯೆಗಳಿಗೆ ಆಯುರ್ವೇದ ಔಷಧ ನೆಪದಲ್ಲಿ ವಂಚನ...
02-12-25 10:48 pm