ಬ್ರೇಕಿಂಗ್ ನ್ಯೂಸ್
22-03-21 02:05 pm Headline Karnataka News Network ದೇಶ - ವಿದೇಶ
ತಿರುವನಂತಪುರಂ, ಮಾ.22: ಕೇರಳ ಅಸೆಂಬ್ಲಿ ಚುನಾವಣೆಯಲ್ಲಿ ಬಿಜೆಪಿಗೆ ಚುನಾವಣೆಯ ಮೊದಲೇ ಹಿನ್ನಡೆಯಾಗಿದೆ. ಬಿಜೆಪಿ ಮತ್ತು ಮಿತ್ರಪಕ್ಷ ಎಐಎಡಿಎಂಕೆಯ ಮೂವರು ಅಸೆಂಬ್ಲಿ ಅಭ್ಯರ್ಥಿಗಳ ನಾಮಪತ್ರವನ್ನು ಚುನಾವಣಾಧಿಕಾರಿಗಳು ತಿರಸ್ಕರಿಸಿದ್ದಾರೆ.

ತಲಶ್ಶೇರಿ ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿ ಕಣ್ಣೂರು ಜಿಲ್ಲಾಧ್ಯಕ್ಷ ಎನ್.ಹರಿದಾಸ್ ನಾಮಪತ್ರ ಸಲ್ಲಿಸಿದ್ದರು. ಆದರೆ, ನಾಮಪತ್ರವನ್ನು ಚುನಾವಣಾಧಿಕಾರಿ ತಿರಸ್ಕರಿಸಿದ್ದಾರೆ. ಬಿಜೆಪಿಯಿಂದ ನೀಡಿರುವ ಬಿ ಫಾರ್ಮ್ ನಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸಹಿ ಇಲ್ಲವೆಂದು ನಾಮಪತ್ರ ತಿರಸ್ಕಾರ ಮಾಡಿದ್ದಾರೆ ಎನ್ನಲಾಗುತ್ತಿದೆ.
ಇದೇ ರೀತಿ ಗುರುವಾಯೂರು ಕ್ಷೇತ್ರದಲ್ಲಿ ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆ ನಿವೇದಿತಾ ಸುಬ್ರಹ್ಮಣ್ಯಂ ಅವರ ನಾಮಪತ್ರವನ್ನು ತಿರಸ್ಕರಿಸಲಾಗಿದೆ. ನಾಮಪತ್ರದಲ್ಲಿ ಪಕ್ಷದ ಅಧ್ಯಕ್ಷರ ಸಹಿ ಇಲ್ಲವೆಂದು ಅಧಿಕಾರಿಗಳು ನಿರಾಕರಣೆ ಮಾಡಿದ್ದಾರೆಂದು ಹೇಳಲಾಗುತ್ತಿದೆ.

ಇಡುಕ್ಕಿ ಜಿಲ್ಲೆಯ ದೇವಿಕುಳಂ ಕ್ಷೇತ್ರದಲ್ಲಿ ಎಐಎಡಿಎಂಕೆಯ ಅಭ್ಯರ್ಥಿ ಧನಲಕ್ಷ್ಮಿ ಎಂಬವರ ನಾಮಪತ್ರವನ್ನು ಪೂರ್ತಿಯಾಗಿ ತುಂಬಿಲ್ಲ ಎಂಬ ಕಾರಣಕ್ಕೆ ನಿರಾಕರಣೆ ಮಾಡಲಾಗಿದೆ. ಕೇರಳ ಮತ್ತು ತಮಿಳುನಾಡಿನಲ್ಲಿ ಎಐಎಡಿಎಂಕೆ ಬಿಜೆಪಿಯ ಮಿತ್ರಪಕ್ಷವಾಗಿದ್ದು, ಎನ್ ಡಿಎ ಮೈತ್ರಿಕೂಟದಲ್ಲಿ ಸ್ಪರ್ಧಿಸುತ್ತಿದ್ದಾರೆ.
ಇದೇ ಬಿಜೆಪಿ ಚುನವಾಣಾಧಿಕಾರಿಗಳ ನಿರ್ಧಾರವನ್ನು ಪ್ರಶ್ನಿಸಿ, ಹೈಕೋರ್ಟ್ ಮೆಟ್ಟಿಲೇರಿದೆ. ಕೋರ್ಟ್ ಚುನಾವಣಾ ಆಯೋಗಕ್ಕೆ ಉತ್ತರ ನೀಡುವಂತೆ ನೋಟೀಸ್ ಮಾಡಿದೆ.
Kerala Election 2021 Live News: Nomination forms of 2 BJP candidates declared invalid
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 04:14 pm
HK News Staffer
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am