ಬ್ರೇಕಿಂಗ್ ನ್ಯೂಸ್
31-07-20 03:20 pm Headline Karnataka News Network ದೇಶ - ವಿದೇಶ
ನವದೆಹಲಿ: ರಕ್ಷಾ ಬಂಧನದ ಪ್ರಯುಕ್ತ ಪಾಕಿಸ್ತಾನ ಮಹಿಳೆ ಖಮರ್ ಮೊಹ್ಸಿನ್ ಶೈಖ್ ಪ್ರಧಾನಿ ನರೇಂದ್ರ ಮೋದಿಯವರಿಗೆ ರಾಖಿಯನ್ನು ಕಳುಹಿಸಿದ್ದಾರೆ.
ಶೈಖ್ ಅವರು ಕಳೆದ 25 ವರ್ಷಗಳಿಂದ ಪ್ರತಿ ರಕ್ಷಾ ಬಂಧನಕ್ಕೆ ಪ್ರಧಾನಿ ನರೇಂದ್ರ ಮೋದಿಯವರಿಗೆ ರಾಖಿ ಕಳುಹಿಸುತ್ತಿದ್ದು, ಭಾರತದಿಂದ ಆಹ್ವಾನ ನೀಡಿದರೆ ದೆಹಲಿಗೆ ಭೇಟಿ ನೀಡುವುದಾಗಿ ತಿಳಿಸಿದ್ದಾರೆ ಎಂದು ವರದಿಯಾಗಿದೆ.
ವರ್ಷಕ್ಕೊಂದು ಬಾರಿ ನನ್ನ ಹಿರಿಯ ಸಹೋದರನಿಗೆ ರಾಖಿ ಕಟ್ಟುವ ಅವಕಾಶ ಸಿಕ್ಕಿದ್ದಕ್ಕೆ ತುಂಬಾ ಖುಷಿಯಾಗುತ್ತಿದೆ. ಮುಂದಿನ ಐದು ವರ್ಷಗಳು ಅವರಿಗೆ ಉತ್ತಮವಾಗಿರಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಧನಾತ್ಮಕ ನಿರ್ಧಾರವನ್ನು ವಿಶ್ವವೇ ಗುರುತಿಸುತ್ತಿದೆ ಎಂದು ಕಳೆದ ವರ್ಷ ಅವರು ಸುದ್ದಿ ಸಂಸ್ಥೆಗೆ ಹೇಳಿಕೆ ನೀಡಿದ್ದರು. ಇದಕ್ಕೂ ಮುನ್ನ ಭಾರತದಲ್ಲಿ ತ್ರಿವಳಿ ತಲಾಖ್ ನಿಷೇಧಿಸುವ ಭಾರತ ಸರ್ಕಾರದ ನಿರ್ಧಾರವನ್ನು ಅವರು ಸ್ವಾಗತಿಸಿದ್ದಾರೆ. ಅಲ್ಲದೆ ಪತಿ ರಚಿಸಿದ ಪೇಂಟಿಂಗ್ನ್ನು ಪ್ರಧಾನಿ ನರೇಂದ್ರ ಮೋದಿಯವರಿಗೆ ಉಡುಗೊರೆ ನೀಡಲು ಉತ್ಸುಕರಾಗಿದ್ದಾರಂತೆ.
ಖುರಾನ್ ಹಾಗೂ ಇಸ್ಲಾಂನಲ್ಲಿ ತ್ರಿವಳಿ ತಲಾಖ್ ಕುರಿತು ನಿಬಂಧನೆ ಇಲ್ಲ. ಪ್ರಧಾನಿ ನರೇಂದ್ರ ಮೋದಿ ಹೊರತು ಇನ್ನಾರೂ ತ್ರಿವಳಿ ತಲಾಖ್ ನಿಷೇಧಿಸುವ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ. ಮುಸ್ಲಿಂ ಮಹಿಳೆಯರ ಹಿತದೃಷ್ಟಿಯಿಂದ ಮೋದಿಯವರು ಅತ್ಯುತ್ತಮ ಕೆಲಸ ಮಾಡಿದ್ದಾರೆ ಎಂದು ತ್ರಿವಳಿ ತಲಾಖ್ ಕುರಿತ ಕಾನೂನು ರೂಪಿಸಿದ್ದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ.
ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ 370ನೇ ವಿಧಿ ರದ್ದುಪಡಿಸಿದ ಭಾರತ ಸರ್ಕಾರದ ನಿರ್ಧಾರವನ್ನೂ ಶೈಖ್ ಶ್ಲಾಘಿಸಿದ್ದಾರೆ. ಕಳೆದ 25 ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿಯವರಿಗೆ ರಾಖಿ ಕಳುಹಿಸುತ್ತಿರುವ ಶೈಖ್ ಅವರು, ಜಮ್ಮು ಕಾಶ್ಮೀರದ ಕುರಿತು ಭಾರತದ ಸರ್ಕಾರದ ನಿರ್ಧಾರವನ್ನು ಪಾಕಿಸ್ತಾನ ವಿರೋಧಿಸುತ್ತಿರುವುದರ ಮಧ್ಯೆಯೂ ಈ ನಡೆ ಅನುಸರಿಸಿರುವುದು ಮೆಚ್ಚುಗೆಗೆ ಪಾತ್ರವಾಗಿದೆ.
ಆಗಸ್ಟ್ 3ರಂದು ರಕ್ಷಾ ಬಂಧನ ಆಚರಿಸಲಾಗುತ್ತಿದ್ದು, ಮಹಿಳಾ ಕುಶಲಕರ್ಮಿಗಳು ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಹಾಗೂ ಗಲ್ವಾನ್ನ ಗಡಿ ವಾಸ್ತವ ರೇಖೆ(ಎಲ್ಎಸಿ)ಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸೈನಿಕರಿಗೆ ರಾಖಿಯನ್ನು ಕಳುಹಿಸಿದ್ದಾರೆ. ಹೀಗೆ ರಕ್ಷಾ ಬಂಧನವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am