ಬ್ರೇಕಿಂಗ್ ನ್ಯೂಸ್
25-03-21 08:24 pm Headline Karnataka News Network ದೇಶ - ವಿದೇಶ
ನವದೆಹಲಿ: ಕೇಂದ್ರ ಸರ್ಕಾರದ ಹೊಸ ಕೃಷಿ ಕಾನೂನುಗಳ ವಿರುದ್ಧ ದೆಹಲಿಯ ಎಲ್ಲಾ ಗಡಿಗಳಲ್ಲಿ ಸುಮಾರು ನಾಲ್ಕು ತಿಂಗಳಿಂದ ರೈತರು ನಡೆಸುತ್ತಿರುವ ಪ್ರತಿಭಟನೆ ಮುಂದುವರೆದಿದ್ದು ನಾಳೆ ಎಂದರೆ ಮಾರ್ಚ್ 26ರಂದು ಸಂಪೂರ್ಣ ಭಾರತ ಬಂದ್ಗೆ ಕರೆ ನೀಡಿದ್ದಾರೆ. ರೈತರ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಸಂಯುಕ್ತ ಕಿಸಾನ್ ಮೋರ್ಚಾ (ಎಸ್ಕೆಎಂ) ಮಾರ್ಚ್ 26 ರಂದು ಭಾರತ್ ಬಂದ್ ಅನ್ನು ಸಂಪೂರ್ಣವಾಗಿ ಯಶಸ್ವಿಗೊಳಿಸುವಂತೆ ದೇಶದ ನಾಗರಿಕರಿಗೆ ಮನವಿ ಮಾಡಿದೆ.
ಬೆಳಿಗ್ಗೆ 6 ರಿಂದ ಸಂಜೆ 6 ರವರೆಗೆ ಭಾರತ ಬಂದ್:
ಸುದ್ದಿ ಸಂಸ್ಥೆ ಪಿಟಿಐ ನೀಡಿದ ವರದಿಯ ಪ್ರಕಾರ, ಸಂಯುಕ್ತ ಕಿಸಾನ್ ಮೋರ್ಚಾ (ಎಸ್ಕೆಎಂ) ಮಾರ್ಚ್ 26 ರಂದು ಬೆಳಿಗ್ಗೆ 6 ರಿಂದ ಸಂಜೆ 6 ರವರೆಗೆ ರೈತರಿಂದ ಭಾರತ್ ಬಂದ್ಗೆ ಕರೆ ನೀಡಿದೆ. ಈ ಸಮಯದಲ್ಲಿ, ದೇಶಾದ್ಯಂತ ರಸ್ತೆ ಮತ್ತು ರೈಲು ಸಾರಿಗೆ, ಮಾರುಕಟ್ಟೆಗಳು ಮತ್ತು ಇತರ ಸಾರ್ವಜನಿಕ ಸ್ಥಳಗಳನ್ನು ಮುಚ್ಚಲು ನಿರ್ಧರಿಸಲಾಗಿದೆ. ಆದಾಗ್ಯೂ, ಎಲ್ಲಾ ತುರ್ತು ಆರೋಗ್ಯ ಸೇವೆಗಳು ಬಂದ್ ಸಮಯದಲ್ಲಿ ಕಾರ್ಯನಿರ್ವಹಿಸುತ್ತವೆ ಎಂದು ತಿಳಿದುಬಂದಿದೆ.
ರೈತ ಮುಖಂಡ ದರ್ಶನ್ ಪಾಲ್ ಮಾತನಾಡಿ, 'ಭಾರತ್ ಬಂದ್ ಅನ್ನು ಯಶಸ್ವಿಗೊಳಿಸಿ ಅನ್ನದಾತ'ರಿಗೆ ಬೆಂಬಲ ಸೂಚಿಸುವಂತೆ ದೇಶದ ಜನರಿಗೆ ಮನವಿ ಮಾಡಿದ್ದಾರೆ.
ದೆಹಲಿ ಗಡಿಯಲ್ಲಿ ನಾಲ್ಕು ತಿಂಗಳಿನಿಂದ ನಡೆಯುತ್ತಿರುವ ರೈತರ ಹೋರಾಟ:
ಹೊಸ ಕೃಷಿ ಕಾನೂನುಗಳ ವಿರುದ್ಧ ದೆಹಲಿ ಗಡಿಗಳಲ್ಲಿ ರೈತರ ಪ್ರತಿಭಟನೆ ನವೆಂಬರ್ 26 ರಂದು ಪ್ರಾರಂಭವಾಯಿತು. ಮಾರ್ಚ್ 26 ರಂದು ರೈತರ ಪ್ರತಿಭಟನೆ ನಾಲ್ಕು ತಿಂಗಳನ್ನು ಪೂರೈಸುತ್ತಿದೆ. ದೆಹಲಿಯ ಸಿಂಗು, ಟಿಕ್ರಿ ಮತ್ತು ಗಾಜಿಪುರ ಗಡಿಗಳಲ್ಲಿ ರೈತರು ಕ್ಯಾಂಪ್ ಮಾಡುತ್ತಿದ್ದಾರೆ. ಈ ಅವಧಿಯಲ್ಲಿ ಸರ್ಕಾರದೊಂದಿಗೆ ಹಲವಾರು ಸುತ್ತಿನ ಮಾತುಕತೆ ನಡೆಸಲಾಗಿದ್ದರೂ ಇನ್ನೂ ಸಮಸ್ಯೆ ಬಗೆಹರಿದಿಲ್ಲ. ರೈತ ಸಂಘಟನೆಗಳು ಹೊಸ ಕಾನೂನುಗಳನ್ನು ಕೈಬಿಡುವಂತೆ ಪಟ್ಟು ಹಿಡಿದಿದ್ದರೆ, ಕಾನೂನುಗಳ ಲೋಪದೋಷಗಳನ್ನು ಚರ್ಚಿಸುವ ಮೂಲಕ ಸರ್ಕಾರ ತಿದ್ದುಪಡಿಗೆ ಸಿದ್ಧವಾಗಿದೆ. ಇದರೊಂದಿಗೆ ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್ಪಿ) ಕಾನೂನು ಖಾತರಿ ನೀಡಬೇಕು ಎಂಬ ರೈತರ ಬೇಡಿಕೆಯಿದೆ.
ಹೋಳಿ ದಹನದ ಸಮಯದಲ್ಲಿ ಹೊಸ ಕೃಷಿ ಕಾನೂನುಗಳ ನಕಲನ್ನು ಸುಡಲು ರೈತರ ನಿರ್ಧಾರ:
ಈ ಮೊದಲು, ರೈತ ಮುಖಂಡ ಬುಟಾ ಸಿಂಗ್ ಬುರ್ಜ್ಗಿಲ್, 'ಹೊಸ ಕೃಷಿ ಕಾನೂನುಗಳ ವಿರುದ್ಧ ನಾಲ್ಕು ತಿಂಗಳ ಪ್ರತಿಭಟನೆಯ ನಂತರ ನಾವು ಮಾರ್ಚ್ 26 ರಂದು ನಾವು ಭಾರತ್ ಬಂದ್ಗೆ ಕರೆ ನೀಡಿದ್ದೇವೆ. ಬೆಳಿಗ್ಗೆಯಿಂದ ಸಂಜೆಯವರೆಗೆ ಶಾಂತಿಯುತ ಪ್ರತಿಭಟನೆ ನಡೆಸುತ್ತೇವೆ. ಇದರೊಂದಿಗೆ ಮಾರ್ಚ್ 28 ರಂದು ನಡೆಯುವ 'ಹೋಳಿಕಾ ದಹನ್' ಸಂದರ್ಭದಲ್ಲಿ ಕೃಷಿ ಕಾನೂನುಗಳ ನಕಲಿ ಪ್ರತಿಗಳನ್ನು ಸುಡಲಾಗುವುದು ಎಂದು ತಿಳಿಸಿದ್ದಾರೆ.
ಭಾರತ್ ಬಂದ್ಗೆ ವೈಎಸ್ಆರ್ ಕಾಂಗ್ರೆಸ್ ಬೆಂಬಲ:
ಆಂಧ್ರಪ್ರದೇಶದ ಆಡಳಿತಾರೂಢ ವೈಎಸ್ಆರ್ ಕಾಂಗ್ರೆಸ್ ಪಕ್ಷ (YSRCP) ಮಾರ್ಚ್ 26 ರಂದು ರೈತರು ಕರೆ ನೀಡಿರುವ ಭಾರತ್ ಬಂದ್ಗೆ ಬೆಂಬಲ ವ್ಯಕ್ತಪಡಿಸಿದೆ.
ಮಾರ್ಚ್ 26 ರಂದು ಭಾರತ್ ಬಂದ್: ಏನಿದೆ? ಏನಿಲ್ಲ?
ವಿಧಾನಸಭಾ ಚುನಾವಣೆಗಳು ನಡೆಯಲಿರುವ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ಮಾರ್ಚ್ 26 ರಂದು ಭಾರತ್ ಬಂದ್ನಿಂದ ವಿನಾಯಿತಿ ನೀಡಲಾಗುವುದು ಎಂದು ರೈತ ಸಂಘ ಸ್ಪಷ್ಟಪಡಿಸಿದೆ. ತುರ್ತು ಸೇವೆಗಳಿಗೆ ತೊಂದರೆಯಾಗುವುದಿಲ್ಲ ಔಷಧದ ಲಭ್ಯತೆ, ಹಾಲು ಪೂರೈಕೆ, ಆಂಬ್ಯುಲೆನ್ಸ್ ಮತ್ತು ಆಸ್ಪತ್ರೆ ಸೇವೆಗಳಂತಹ ತುರ್ತು ಸೇವೆಗಳಿಗೆ ಯಾವುದೇ ಪರಿಣಾಮ ಬೀರುವುದಿಲ್ಲ.
ಎಲ್ಲಾ ರಸ್ತೆ ಮತ್ತು ರೈಲು ಸಾರಿಗೆ, ಮಾರುಕಟ್ಟೆಗಳು ಮತ್ತು ಇತರ ಸಾರ್ವಜನಿಕ ಸ್ಥಳಗಳನ್ನು ದೇಶಾದ್ಯಂತ ಮುಚ್ಚಲಾಗುವುದರಿಂದ ಪ್ರಯಾಣಿಕರು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಬ್ಯಾಂಕಿಂಗ್ ಸೇವೆಗಳಿಗೆ ತೊಂದರೆಯಾಗುವುದು ಬ್ಯಾಂಕಿಂಗ್ ಸೇವೆಗಳಾದ ಠೇವಣಿ ಮತ್ತು ವಾಪಸಾತಿ ಮತ್ತು ಚೆಕ್ ಕ್ಲಿಯರಿಂಗ್ ಮುಷ್ಕರದಿಂದಾಗಿ ಪರಿಣಾಮ ಬೀರುವ ಸಾಧ್ಯತೆಯಿದೆ.
The Samyukta Kisan Morcha (SKM), an umbrella body of farmer unions, will on Friday observe 'Bharat Bandh'. Notably, 26 March 2021 marks four months of farmers’ agitation on the borders of the national capital against the three Central farm laws.
20-10-25 06:58 pm
Bangalore Correspondent
Hassan Accident, Two Killed: ಹಾಸನಾಂಬ ದರ್ಶನ ಪಡ...
20-10-25 04:00 pm
ಕಲಬುರಗಿಯಲ್ಲಿ ಭೂಕಂಪನ ; ಮನೆಯಿಂದ ಹೊರಬಂದ ಜನರು, ನಿ...
20-10-25 02:56 pm
ಸೇಡಂನಲ್ಲಿ ಆರೆಸ್ಸೆಸ್ ಪಥಸಂಚಲನ ; ನೂರಾರು ಕಾರ್ಯಕರ್...
19-10-25 07:00 pm
Government Bans RSS: ಸರ್ಕಾರಿ ಶಾಲೆ, ಕಾಲೇಜು ಆವರ...
19-10-25 05:42 pm
20-10-25 08:34 pm
HK News Desk
300 Naxals, PM Narendra Modi: 75 ಗಂಟೆಯಲ್ಲಿ 30...
18-10-25 07:34 pm
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
20-10-25 10:28 pm
Mangalore Correspondent
Ashoka Janamana in Puttur, CM Siddaramaiah: ಪ...
20-10-25 07:25 pm
ಉಳ್ಳಾಲ ಟೀಮ್ ಹನುಮಾನ್ ತಂಡದಿಂದ ನವರಾತ್ರಿ ಯಕ್ಷವೇಷ...
19-10-25 10:32 pm
Karkala Abhishek Suicide Case, Arrest: ಅಭಿಷೇಕ...
19-10-25 07:58 pm
Bindu Jewellery Mangalore: ಮಂಗಳೂರಿನಲ್ಲಿ 'ಬಿಂದ...
19-10-25 07:19 pm
20-10-25 10:51 pm
Mangalore Correspondent
Rape Ullal, Mangalore Crime: ಅಪ್ರಾಪ್ತ ಬಾಲಕಿ ಮ...
20-10-25 12:25 pm
ಚಿನ್ನದಂಗಡಿಗೆ ತೆರಳಿ ಬಣ್ಣನೆಯ ಮಾತುಗಳಿಂದ ಮರುಳು ;...
19-10-25 11:09 pm
Bangalore engineering College rape, Crime: ಬೆ...
19-10-25 01:26 pm
MSME Fraud, SBI Malikatte, Mangalore': ಕೇಂದ್ರ...
18-10-25 10:49 pm