ಬ್ರೇಕಿಂಗ್ ನ್ಯೂಸ್
26-03-21 10:01 am Headline Karnataka News Network ದೇಶ - ವಿದೇಶ
ಹೈದರಾಬಾದ್, ಮಾ 26: ಸಾಲವೆಂಬ ಶೂಲಕ್ಕೆ ಸಿಲುಕಿ ಒಂದೇ ಕುಟುಂಬದ ನಾಲ್ವರು ಪ್ರಾಣ ಕಳೆದುಕೊಂಡಿದ್ದಾರೆ. ಈ ಘಟನೆಯಿಂದ ತೆಲಂಗಾಣದ ಮಂಚಿರ್ಯಾಲ ಜಿಲ್ಲೆಯ ಮಲ್ಕಪಲ್ಲಿ ಗ್ರಾಮ ಬೆಚ್ಚಿ ಬಿದ್ದಿದೆ.
ಈ ಗ್ರಾಮದ ರೈತ ಬಂಜಿರಾಲ ರಮೇಶ್ ಮನೆ ಬಾಗಿಲು ತೆಗೆದಾಗ ಶಾಕ್ ಕಾದಿತ್ತು. ಯಾಕಂದ್ರೆ 40 ವರ್ಷದ ರಮೇಶ್, 35 ವರ್ಷದ ಈತನ ಪತ್ನಿ ಪದ್ಮ ಮತ್ತು ಇಬ್ಬರು ಮಕ್ಕಳಾದ 19 ವರ್ಷದ ಸೌಮ್ಯ ಮತ್ತು ಅಕ್ಷಯ್ ನೇಣಿನ ಕುಣಿಕೆಯಲ್ಲಿ ಶವವಾಗಿದ್ರು.
ಇಡೀ ಕುಟುಂಬ ಸಾಲಬಾಧೆ ಹಿನ್ನೆಲೆ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದೆ. ನಿನ್ನೆ ಸಾಲ ಕೊಟ್ಟವರಿಗೆ ಸಾಲ ತೀರಿಸುವುದಾಗಿ ಮಾತು ಕೊಟ್ಟಿದ್ದರಂತೆ. ಆದ್ರೆ ಮಾತು ಉಳಿಸಿಕೊಳ್ಳಲಾಗದ್ದಕ್ಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರೋದಾಗಿ ಡೆತ್ ನೋಟ್ ಬರೆದಿಟ್ಟಿದ್ದಾರೆ.

ಬಂಜಿರಾಲ ರಮೇಶ್ ತನ್ನ ಜಮೀನಿನಲ್ಲಿ ಬೆಳೆ ಬೆಳೆಯಲು ಲಕ್ಷಾಂತರ ರೂಪಾಯಿ ಸಾಲ ಮಾಡಿದ್ದರು. ಅಲ್ಲದೇ ಕಳೆದ ವರ್ಷ ಸಾಕಷ್ಟು ಬೆಳೆ ಹಾನಿಯಾಗಿತ್ತು. ಮಗಳ ಮದುವೆಗೆಂದು ಸಹ ಸಾಲ ಮಾಡಿದ್ದರು. ಆದ್ರೆ, ಸಾಲ ತೀರಿಸಲು ಆಗಲಿಲ್ಲ. ಇದರ ನಡುವೆ ಸಾಲಗಾರರ ಕಾಟ ಜೋರಾಗಿತ್ತು. ನಿನ್ನೆ ಸಾಲ ತೀರಿಸುವುದಾಗಿ ಮಾತು ಕೊಟ್ಟಿದ್ದರು. ಆದ್ರೆ ಸಾಲ ತೀರಿಸುವ ಪರಿಸ್ಥಿತಿ ಇರಲಿಲ್ಲ. ಇದರಿಂದ ಬದುಕುವ ಆಸೆ ಕಳೆದುಕೊಂಡ ರಮೇಶ್ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಂಚಿರ್ಯಾಲ ಜಿಲ್ಲಾ ಕಾಸಿಪೇಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಸಾಲಕ್ಕಾಗಿ ಇಡೀ ಕುಟುಂಬ ಬಲಿಯಾಗಿದ್ದು ನಿಜಕ್ಕೂ ದುರಂತದ ಸಂಗತಿ.
Four members of a family committed suicide in Telangana's Mancherial district. The tragic incident occurred in the Malkapalli village of Kasipeta mandal of the district on Thursday.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm