ಬ್ರೇಕಿಂಗ್ ನ್ಯೂಸ್
26-03-21 10:01 am Headline Karnataka News Network ದೇಶ - ವಿದೇಶ
ಹೈದರಾಬಾದ್, ಮಾ 26: ಸಾಲವೆಂಬ ಶೂಲಕ್ಕೆ ಸಿಲುಕಿ ಒಂದೇ ಕುಟುಂಬದ ನಾಲ್ವರು ಪ್ರಾಣ ಕಳೆದುಕೊಂಡಿದ್ದಾರೆ. ಈ ಘಟನೆಯಿಂದ ತೆಲಂಗಾಣದ ಮಂಚಿರ್ಯಾಲ ಜಿಲ್ಲೆಯ ಮಲ್ಕಪಲ್ಲಿ ಗ್ರಾಮ ಬೆಚ್ಚಿ ಬಿದ್ದಿದೆ.
ಈ ಗ್ರಾಮದ ರೈತ ಬಂಜಿರಾಲ ರಮೇಶ್ ಮನೆ ಬಾಗಿಲು ತೆಗೆದಾಗ ಶಾಕ್ ಕಾದಿತ್ತು. ಯಾಕಂದ್ರೆ 40 ವರ್ಷದ ರಮೇಶ್, 35 ವರ್ಷದ ಈತನ ಪತ್ನಿ ಪದ್ಮ ಮತ್ತು ಇಬ್ಬರು ಮಕ್ಕಳಾದ 19 ವರ್ಷದ ಸೌಮ್ಯ ಮತ್ತು ಅಕ್ಷಯ್ ನೇಣಿನ ಕುಣಿಕೆಯಲ್ಲಿ ಶವವಾಗಿದ್ರು.
ಇಡೀ ಕುಟುಂಬ ಸಾಲಬಾಧೆ ಹಿನ್ನೆಲೆ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದೆ. ನಿನ್ನೆ ಸಾಲ ಕೊಟ್ಟವರಿಗೆ ಸಾಲ ತೀರಿಸುವುದಾಗಿ ಮಾತು ಕೊಟ್ಟಿದ್ದರಂತೆ. ಆದ್ರೆ ಮಾತು ಉಳಿಸಿಕೊಳ್ಳಲಾಗದ್ದಕ್ಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರೋದಾಗಿ ಡೆತ್ ನೋಟ್ ಬರೆದಿಟ್ಟಿದ್ದಾರೆ.

ಬಂಜಿರಾಲ ರಮೇಶ್ ತನ್ನ ಜಮೀನಿನಲ್ಲಿ ಬೆಳೆ ಬೆಳೆಯಲು ಲಕ್ಷಾಂತರ ರೂಪಾಯಿ ಸಾಲ ಮಾಡಿದ್ದರು. ಅಲ್ಲದೇ ಕಳೆದ ವರ್ಷ ಸಾಕಷ್ಟು ಬೆಳೆ ಹಾನಿಯಾಗಿತ್ತು. ಮಗಳ ಮದುವೆಗೆಂದು ಸಹ ಸಾಲ ಮಾಡಿದ್ದರು. ಆದ್ರೆ, ಸಾಲ ತೀರಿಸಲು ಆಗಲಿಲ್ಲ. ಇದರ ನಡುವೆ ಸಾಲಗಾರರ ಕಾಟ ಜೋರಾಗಿತ್ತು. ನಿನ್ನೆ ಸಾಲ ತೀರಿಸುವುದಾಗಿ ಮಾತು ಕೊಟ್ಟಿದ್ದರು. ಆದ್ರೆ ಸಾಲ ತೀರಿಸುವ ಪರಿಸ್ಥಿತಿ ಇರಲಿಲ್ಲ. ಇದರಿಂದ ಬದುಕುವ ಆಸೆ ಕಳೆದುಕೊಂಡ ರಮೇಶ್ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಂಚಿರ್ಯಾಲ ಜಿಲ್ಲಾ ಕಾಸಿಪೇಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಸಾಲಕ್ಕಾಗಿ ಇಡೀ ಕುಟುಂಬ ಬಲಿಯಾಗಿದ್ದು ನಿಜಕ್ಕೂ ದುರಂತದ ಸಂಗತಿ.
Four members of a family committed suicide in Telangana's Mancherial district. The tragic incident occurred in the Malkapalli village of Kasipeta mandal of the district on Thursday.
06-04-26 08:51 pm
HK News Staffer
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
06-04-26 06:16 pm
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
ಯುಎಇಯಿಂದ ಪಾಕಿಸ್ತಾನಕ್ಕೆ ಬಿಗ್ ಶಾಕ್ ; 2 ಬಿಲಿಯನ್...
05-04-26 12:37 pm
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
06-04-26 07:58 pm
HK News Staffer
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
06-04-26 05:40 pm
HK News Staffer
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm