ಬ್ರೇಕಿಂಗ್ ನ್ಯೂಸ್
27-03-21 05:19 pm Headline Karnataka News Network ದೇಶ - ವಿದೇಶ
ನವದೆಹಲಿ, ಮಾ.27: ವಾತಾವರಣದ ಮಾಲಿನ್ಯದಿಂದಾಗಿ ಮನುಷ್ಯನಿಗೆ ನಾನಾ ರೀತಿಯ ತೊಂದರೆಗಳು ಎದುರಾಗುತ್ತಿವೆ. ಪರಿಸರ ವಿಜ್ಞಾನಿಗಳು ತಮ್ಮ ಸಂಶೋಧನೆಯಲ್ಲಿ ಮನುಷ್ಯನಲ್ಲಿ ಜನನಾಂಗ, ಶಿಶ್ನಗಳು ಕುಗ್ಗುತ್ತಿದ್ದು ಮುರುಟಿಕೊಳ್ಳುತ್ತಿವೆ ಎನ್ನುವ ವಿಚಾರವನ್ನು ಹೊರಗೆಡಹಿದ್ದಾರೆ. ಪರಿಸರ ಮಾಲಿನ್ಯದ ಕಾರಣದಿಂದಾಗಿ ಹುಟ್ಟುವ ಶಿಶುವಿನ ಜನನಾಂಗಗಳು ಅತ್ಯಂತ ಕಿರಿದಾಗಿರುವುದನ್ನು ವಿಜ್ಞಾನಿಗಳು ಪತ್ತೆ ಮಾಡಿದ್ದಾರೆ.
ಅಮೆರಿಕದ ಶನ್ನಾ ಸ್ವಾನ್ ಎಂಬ ಮಹಿಳಾ ವಿಜ್ಞಾನಿ ಬರೆದಿರುವ ಕೌಂಟ್ ಡೌನ್ ಎನ್ನುವ ಪುಸ್ತಕದಲ್ಲಿ ಈ ಬಗ್ಗೆ ಉಲ್ಲೇಖ ಮಾಡಿದ್ದು, ಮನುಷ್ಯ ಅಸ್ತಿತ್ವಕ್ಕಾಗಿ ಹೋರಾಡುತ್ತಿರುವ ಸನ್ನಿವೇಶಗಳ ಬಗ್ಗೆ ಎಚ್ಚರಿಕೆ ನೀಡಿದ್ದಾರೆ. ಹುಟ್ಟುತ್ತಿರುವ ಮಕ್ಕಳಲ್ಲಿ ಶಿಶ್ನಗಳ ಗಾತ್ರ ಕಿರಿದಾಗುತ್ತಿದ್ದು ಮುರುಟಿಕೊಂಡಿರುವುದು ಕಂಡುಬಂದಿದೆ. ಅಲ್ಲದೆ, ಮಾಲಿನ್ಯದಿಂದಾಗಿ ಮನುಷ್ಯನ ಸಹಜ ಸೃಷ್ಟಿ ಕ್ರಿಯೆಯ ಶಕ್ತಿ ಕುಗ್ಗುತ್ತಿದೆ. ಹೀಗಾಗಿ ಮನುಷ್ಯನ ಪುನರುತ್ಪತ್ತಿಯ ಜೈವಿಕ ಪ್ರಕ್ರಿಯೆ ಸವಾಲಾಗಿ ಪರಿಣಮಿಸಲಿದೆ ಎಂದು ತಿಳಿಸಿದ್ದಾರೆ.

ಮನುಷ್ಯನಲ್ಲಿ ವೀರ್ಯೋತ್ಪತ್ತಿಯ ಕುಸಿತದಿಂದ ಆಧುನಿಕ ಜಗತ್ತು ಯಾವೆಲ್ಲಾ ಅಪಾಯಗಳನ್ನು ಎದುರಿಸುತ್ತಿದೆ. ಹೆಣ್ಣು ಹಾಗೂ ಗಂಡಿನ ಸೃಷ್ಟಿ ಕ್ರಿಯೆಯ ಮೇಲೆ ಯಾವ ರೀತಿ ಪರಿಣಾಮ ಬೀರುತ್ತಿದೆ ಮತ್ತು ಇದರಿಂದ ಮನುಷ್ಯ ಕುಲದ ಭವಿಷ್ಯದ ಮೇಲಾಗುವ ಪರಿಣಾಮಗಳೇನು ಎಂಬುದರ ಬಗ್ಗೆ ವಿಜ್ಞಾನಿ ಅಧ್ಯಯನ ಕೈಗೊಂಡಿದ್ದರು. ಅಧ್ಯಯನದಲ್ಲಿ ಪ್ಲಾಸ್ಟಿಕ್ ಉತ್ಪಾದನೆಗೆ ಬಳಸುವ phthalate ಎನ್ನುವ ಹೆಸರಿನ ಕೆಮಿಕಲ್ ಮನುಷ್ಯನ ಮೇಲೆ ಗಂಭೀರ ಪರಿಣಾಮ ಬೀರುವುದನ್ನು ಪತ್ತೆ ಮಾಡಿದ್ದಾರೆ. ನಿರಂತರ ಪ್ಲಾಸ್ಟಿಕ್ ಮಾಲಿನ್ಯವನ್ನು ಹೀರಿಕೊಳ್ಳುವ ಮನುಷ್ಯನಿಂದ ಹುಟ್ಟುವ ಮಕ್ಕಳಲ್ಲಿ ಜನನಾಂಗ ದೋಷಗಳು ಕಂಡುಬರುತ್ತವೆ ಎಂದು ಕಂಡುಕೊಂಡಿದ್ದಾರೆ.

Phthalate ಕೆಮಿಕಲ್ ಬಳಸುವುದರಿಂದ ಪ್ಲಾಸ್ಟಿಕ್ ಹೆಚ್ಚು ಫ್ಲೆಕ್ಸಿಬಲ್ ಆಗಿ ಪರಿವರ್ತನೆಯಾಗುತ್ತವೆ. ಆದರೆ, ಈ ರೀತಿಯ ವಿಷಕಾರಿ ಕೆಮಿಕಲ್ ಆಟಿಕೆ ಇನ್ನಿತರ ಸಾಮಗ್ರಿಗಳ ಮೂಲಕ ಮನುಷ್ಯನ ಆಹಾರ ಸೇರುತ್ತಿದ್ದು, ದೀರ್ಘಕಾಲೀನ ಪ್ರಭಾವಗಳನ್ನು ಬೀರುತ್ತಿದೆ. ಮನುಷ್ಯನಲ್ಲಿ ಸಹಜವಾಗಿ ಉತ್ಪಾದನೆಯಾಗುವ ಹಾರ್ಮೋನ್ ಗಳಿಗೆ ಪೆಟ್ಟು ನೀಡಲಿದೆ. ಇದರಿಂದ ಮನುಷ್ಯ ಕುಲದ ಮೇಲೆ ಮಹತ್ತರ ಪರಿಣಾಮ ಬೀರಲಿದೆ ಎಂದು ಶನ್ನಾ ಸ್ವಾನ್ ಹೇಳಿದ್ದಾರೆ.
An environmental scientist, in her new book titled Count Down, has warned that human penises are shrinking and genitals becoming malfunctioned due to pollution. Dr Shanna Swan writes that humanity is facing an "existential crisis" in fertility rates because of phthalates.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm