ಬ್ರೇಕಿಂಗ್ ನ್ಯೂಸ್
29-03-21 05:41 pm Headline Karnataka News Network ದೇಶ - ವಿದೇಶ
ನವದೆಹಲಿ, ಮಾ.29: ಆಫ್ರಿಕಾ ಮತ್ತು ಯುರೋಪ್ ಖಂಡವನ್ನು ಬೇರ್ಪಡಿಸುವ ಸುಯೆಜ್ ಕಾಲುವೆಯಲ್ಲಿ ಒಂದು ವಾರದಿಂದ ಸಿಕ್ಕಿಕೊಂಡಿದ್ದ ಬೃಹತ್ ಹಡಗನ್ನು ತೆರವುಗೊಳಿಸುವ ಕಾರ್ಯಾಚರಣೆ ನಡೆದಿದೆ. 70 ಶೇಕಡಾ ತೆರವು ಕಾರ್ಯ ನಡೆದಿದೆ ಎಂದು ಸುಯೆಜ್ ಕಾಲುವೆ ಅಥಾರಿಟಿ ಅಧಿಕಾರಿಗಳು ತಿಳಿಸಿದ್ದಾರೆ.
ಎವರ್ ಗೀವನ್ ಎನ್ನುವ ಹೆಸರಿನ ಬೃಹತ್ ಕಂಟೇನರ್ ಹಡಗು ಈಜಿಪ್ಟ್ ಬಳಿಯ ಸುಯೆಜ್ ಕಾಲುವೆಯಲ್ಲಿ ವಾರದ ಹಿಂದೆ ಸಿಕ್ಕಿಕೊಂಡಿತ್ತು. ಇದರಿಂದಾಗಿ ಯುರೋಪ್ ಮತ್ತು ಮಧ್ಯ ಪ್ರಾಚ್ಯ ದೇಶಗಳಿಂದ ಸಾಗುವ ಹಡಗುಗಳ ಸಂಚಾರಕ್ಕೆ ತೊಡಕಾಗಿದ್ದು, ಭಾರೀ ವೈಪರೀತ್ಯ ಉಂಟಾಗಿತ್ತು. ಹಡಗು ಕಾಲುವೆಯಿಂದ ಸಾಗುತ್ತಿದ್ದಾಗ ಅಡಿಭಾಗದ ಮರಳಿನಲ್ಲಿ ಹೂತಿದ್ದರಿಂದ ಅಲ್ಲೇ ಉಳಿದುಕೊಂಡಿತ್ತು.
ಕಾಲುವೆಯಲ್ಲಿ ಅಡ್ಡಲಾಗಿ ಹಡಗು ನಿಂತಿದ್ದರಿಂದ ಇತರೇ ಹಡಗುಗಳ ಸಂಚಾರಕ್ಕೆ ಬ್ರೇಕ್ ಬಿದ್ದಿತ್ತು. ಎರಡೂ ಭಾಗದಲ್ಲಿ ಸುಮಾರು 450 ರಷ್ಟು ಹಡಗುಗಳು ಅಲ್ಲಿ ಸಿಕ್ಕಿಕೊಂಡು ಸರದಿ ನಿಂತಿದ್ದವು. ಇದರಿಂದಾಗಿ 9 ಬಿಲಿಯನ್ ಡಾಲರ್ ನಷ್ಟವಾಗಿತ್ತು. ಯುರೋಪ್ ಭಾಗದ ರಾಷ್ಟ್ರಗಳಿಂದ ಭಾರತ ಇನ್ನಿತರ ಪೂರ್ವ ರಾಷ್ಟ್ರಗಳಿಗೆ ವ್ಯಾಪಾರ ಸಂಬಂಧ ಸಾಗುವ ಹಡಗುಗಳು ಸುಯೆಜ್ ಕಾಲುವೆಯಲ್ಲಿ ಸಾಗುತ್ತವೆ.
ಆಫ್ರಿಕಾ ಮತ್ತು ಯುರೋಪ್ ಖಂಡದ ಮಧ್ಯೆ ಇರುವ ಸಪೂರ ಹಾದಿಯಾಗಿರುವ ಸುಯೆಜ್ ಕಾಲುವೆ ಈಜಿಪ್ಟ್ ದೇಶದ ವ್ಯಾಪ್ತಿಗೆ ಸೇರುತ್ತದೆ. ಅಲ್ಲಿನ ಕಾಲುವೆಯ ಮೂಲಕ ಸಾಗಿದರೆ, ಆಫ್ರಿಕಾವನ್ನು ಸುತ್ತುಹಾಕಿ ಸಾಗಬೇಕಾಗಿಲ್ಲ. ಆಫ್ರಿಕಾವನ್ನು ಸುತ್ತುಹಾಕಿ ಹಡಗು ಸಂಚರಿಸಿದರೆ, ಒಂದು ಹಡಗು ಭಾರತದಿಂದ ಇಂಗ್ಲೆಂಡ್ ತಲುಪಬೇಕಿದ್ದರೆ 34 ದಿನ(25 ಸಾವಿರ ಕಿಮೀ) ಬೇಕಾಗುತ್ತದೆ. ಸುಯೆಜ್ ಕಾಲುವೆಯಲ್ಲಿ ಸಾಗಿದರೆ 25 ದಿನಗಳಲ್ಲಿ(18 ಸಾವಿರ ಕಿಮೀ) ತಲುಪಬಹುದು. ಹೀಗಾಗಿ ಸರಕು ಸಾಗಾಟದ ಹಡಗುಗಳು ಹೆಚ್ಚಾಗಿ ಪೂರ್ವದಿಂದ ಪಶ್ಚಿಮ ರಾಷ್ಟ್ರಗಳಿಗೆ ತೆರಳಲು ಸುಯೆಜ್ ಕಾಲುವೆಯನ್ನೇ ಬಳಸುತ್ತವೆ.
The stern of a huge container ship that has been wedged across the Suez Canal for almost a week has been freed from the shoreline, officials say.
03-09-25 09:00 pm
HK News Desk
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
ಪ್ರೀಮಿಯಂ ಬ್ರಾಂಡ್ ಮದ್ಯಗಳ ಬೆಲೆ ಇಳಿಕೆಗೆ ಚಿಂತನೆ ;...
03-09-25 02:30 pm
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
04-09-25 08:47 pm
HK News Desk
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
04-09-25 11:07 pm
Mangalore Correspondent
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
Mangalore, Loudspeaker Ban: ರಾತ್ರಿ ವೇಳೆ ಧ್ವನಿ...
04-09-25 07:39 pm
KMC Attavar Performs Rare, Life-Saving Surger...
03-09-25 11:03 pm
04-09-25 01:10 pm
Udupi Correspondent
Udupi Crime, Baby Sale Racket: ಮಂಗಳೂರಿನ ಪ್ರತಿ...
04-09-25 12:25 pm
Bagalur Police, Drugs, Crime: ಬ್ಯುಸಿನೆಸ್ ವೀಸಾ...
03-09-25 05:40 pm
Gold Theft, Mangalore, Airport: ವಿಮಾನ ಪ್ರಯಾಣಿ...
02-09-25 07:09 pm
Valachil, Rape, College, Mangalore Crime: ಇನ್...
02-09-25 04:31 pm