ಬ್ರೇಕಿಂಗ್ ನ್ಯೂಸ್
31-03-21 12:53 pm Headline Karnataka News Network ದೇಶ - ವಿದೇಶ
ನವದೆಹಲಿ, ಮಾರ್ಚ್ 31: ಹಲವು ಜನ ಸಾಮಾನ್ಯರಿಗೆ ತಿಂಗಳಲ್ಲಿ ಒಮ್ಮೆಯಾದರೂ ಬ್ಯಾಂಕ್ ಕೆಲಸಗಳಿರುತ್ತವೆ. ಆದರೆ, ಆ ದಿನ ಬ್ಯಾಂಕ್ಗೆ ರಜೆ ಇದ್ದರೆ ಅವರ ಇತರ ಕೆಲಸಗಳಿಗೆ ತೊಂದರೆಯಾಗಬಹುದು. ಈ ಹಿನ್ನೆಲೆ ಬ್ಯಾಂಕ್ ರಜಾ ದಿನಗಳ ವಿವರಗಳನ್ನು ಮೊದಲೇ ನೋಡಿದರೆ, ತಮ್ಮ ಬ್ಯಾಂಕ್ಗಳು ಕಾರ್ಯ ನಿರ್ವಹಿಸುವ ದಿನದಲ್ಲಿ ಅವರು ತಮ್ಮ ಬ್ಯಾಂಕ್ ಶಾಖೆಗಳಿಗೆ ಹೋದರೆ ಅವರ ಕೆಲಸ ಬೇಗ ಮುಗಿಸಿಕೊಳ್ಳಬಹುದು.
ಇದೇ ರೀತಿ ಏಪ್ರಿಲ್ 2021 ರಲ್ಲೂ ಬ್ಯಾಂಕುಗಳು 15 ದಿನಗಳ ಕಾಲ ಬಂದ್ ಆಗಿರುತ್ತದೆ. ಏಪ್ರಿಲ್ ತಿಂಗಳ ಮೊದಲನೆಯ ದಿನವೂ ಸಹ ರಜಾ ದಿನವೇ ಆಗಿದೆ.
ಹೌದು, 2020-21ರ ಹಣಕಾಸು ವರ್ಷವು ಮಾರ್ಚ್ 31 ರಂದು ಕೊನೆಗೊಳ್ಳುವುದರಿಂದ, ಹಣಕಾಸಿನ ವರ್ಷದ ಕೊನೆಯ ದಿನವಾದ ಮಾರ್ಚ್ 31 ರಂದು ಗ್ರಾಹಕರಿಗೆ ಸಂಬಂಧಿಸಿದ ಕೆಲಸವನ್ನು ಮಾಡಲಾಗುವುದಿಲ್ಲ. ಏಪ್ರಿಲ್ 1 ರಂದೂ ಸಹ ಇದೇ ರೀತಿ ಬ್ಯಾಂಕುಗಳು ತಮ್ಮ ವಾರ್ಷಿಕ ಖಾತೆಗಳನ್ನು ಕ್ಲೋಸ್ ಮಾಡುವ ದಿನವಾಗಿದ್ದು ಜನಸಾಮಾನ್ಯರ ಕೆಲಸ ನಿರ್ವಹಿಸುವುದಿಲ್ಲ. ಈ ಹಿನ್ನೆಲೆ ಜನರಿಗೆ ತೊಂದರೆಯಾಗಬಾರದೆಂದು ಆರ್ಬಿಐ ಬ್ಯಾಂಕುಗಳ ರಜಾ ದಿನಗಳ ಪಟ್ಟಿಯನ್ನು ನೀಡುತ್ತದೆ. ನಿಮಗೆ ಏಪ್ರಿಲ್ ತಿಂಗಳಲ್ಲಿ ಬ್ಯಾಂಕ್ನಲ್ಲಿ ಕೆಲಸ ಇದ್ದರೆ, ಯಾವ ದಿನ ಮುಚ್ಚಲಾಗುತ್ತದೆ ಎಂಬುದನ್ನು ತಿಳಿದುಕೊಳ್ಳಲು ಈ ಪಟ್ಟಿಯನ್ನು ಪರಿಶೀಲಿಸಿ.
ಆದರೂ, ಎಲ್ಲ ಬ್ಯಾಂಕುಗಳಲ್ಲಿ ಹಾಗೂ ಎಲ್ಲ ರಾಜ್ಯಗಳಲ್ಲಿ 15 ದಿನಗಳ ಕಾಲ ರಜೆ ಇರುವುದಿಲ್ಲ. ಏಕೆಂದರೆ ಕೆಲವು ಹಬ್ಬಗಳನ್ನು ಇಡೀ ದೇಶದಲ್ಲಿ ಆಚರಿಸಲಾಗುವುದಿಲ್ಲ ಎಂಬುದನ್ನು ಬ್ಯಾಂಕ್ ಗ್ರಾಹಕರು ಗಮನಿಸಬೇಕಾಗಿದೆ.

ಬ್ಯಾಂಕ್ ರಜಾ ದಿನಗಳ ಪಟ್ಟಿ ಹೀಗಿದೆ ನೋಡಿ...

ತೆಲುಗು ಹೊಸ ವರ್ಷ, ಬಿಹು, ಗುಡಿ ಪಾಡ್ವಾ, ವೈಶಾಖ, ಬಿಜು ಉತ್ಸವ ಮತ್ತು ಯುಗಾದಿ ಹಿನ್ನೆಲೆ ಏಪ್ರಿಲ್ 13 ರಂದು ಬ್ಯಾಂಕುಗಳಿಗೆ ರಜೆ ಇರುತ್ತದೆ. ಮರುದಿನ ಅಂದರೆ ಏಪ್ರಿಲ್ 14 ರಂದು ಡಾ. ಅಂಬೇಡ್ಕರ್ ಜಯಂತಿ ಹಿನ್ನೆಲೆ ಬ್ಯಾಂಕುಗಳನ್ನು ಮುಚ್ಚಲಾಗುವುದು. ನಂತರ ಏಪ್ರಿಲ್ 15, ಹಿಮಾಚಲ ದಿನ, ವಿಶು, ಬಂಗಾಳಿ ಹೊಸ ವರ್ಷ, ಸರ್ಹುಲ್ ಹಿನ್ನೆಲೆ ಕೆಲವು ರಾಜ್ಯಗಳಲ್ಲಿ ಬ್ಯಾಂಕುಗಳಿಗೆ ರಜೆ ನೀಡಲಾಗುವುದು. ಇದರ ನಂತರ, ಏಪ್ರಿಲ್ 21 ರಂದು ರಾಮ ನವಮಿ ಮತ್ತು ಏಪ್ರಿಲ್ 25ರಂದು ಮಹಾವೀರ ಜಯಂತಿ ಹಿನ್ನೆಲೆ ಬ್ಯಾಂಕ್ ಶಾಖೆಗಳಿಗೆ ರಜೆ ಇರುತ್ತದೆ.
ಇದರ ಜತೆಗೆ ಏಪ್ರಿಲ್ 10 ಮತ್ತು 24 ರಂದು ಬ್ಯಾಂಕುಗಳಲ್ಲಿ ಎರಡನೇ ಮತ್ತು ನಾಲ್ಕನೇ ಶನಿವಾರದ ರಜೆ ಇದ್ದರೆ, ಏಪ್ರಿಲ್ 4, 11, 18 ಹಾಗೂ 25 ರಂದು ಭಾನುವಾರ ಎಂದಿನಂತೆ ರಜೆ ಇದೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 04:14 pm
HK News Staffer
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am