ಬ್ರೇಕಿಂಗ್ ನ್ಯೂಸ್
05-04-21 10:46 am Headline Karnataka News Network ದೇಶ - ವಿದೇಶ
ಜಕಾರ್ತಾ, ಏ 5: ಪೂರ್ವ ಇಂಡೋನೇಷ್ಯಾದಲ್ಲಿ ಧಾರಾಕಾರ ಮಳೆಯಿಂದ ಉಂಟಾದ ಭೂ ಕುಸಿತದಿಂದ ಸುಮಾರು 55 ಮಂದಿ ಸಾವನ್ನಪ್ಪಿದ್ದು, 40ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ ಎಂದು ದೇಶದ ವಿಪತ್ತು ಪರಿಹಾರ ಸಂಸ್ಥೆ ತಿಳಿಸಿದೆ.
ಪೂರ್ವ ನುಸಾ ತೆಂಗಾರ ಪ್ರಾಂತ್ಯದ ಅಡೋನಾರಾ ದ್ವೀಪಕ್ಕೆ, ಲ್ಯಾಮೆನೆಲೆ ಗ್ರಾಮದ ಸುತ್ತಮುತ್ತಲಿನ ಬೆಟ್ಟಗಳಿಂದ ಮಣ್ಣು ಕುಸಿದು ಬಿದ್ದಿದೆ. ಘಟನೆಯಲ್ಲಿ 38 ಮಂದಿ ಪ್ರಾಣ ಕಳೆದುಕೊಂಡಿದ್ದು, ಅವಶೇಷಗಳನ್ನು ಸಿಬ್ಬಂದಿ ಹೊರತೆಗೆದಿದ್ದಾರೆ. 5 ಮಂದಿ ಗಾಯಗೊಂಡಿದ್ದಾರೆ ಎಂದು ಸ್ಥಳೀಯ ವಿಪತ್ತು ಏಜೆನ್ಸಿಯ ಮುಖ್ಯಸ್ಥ ಲೆನ್ನಿ ಓಲಾ ಹೇಳಿದ್ದಾರೆ.

ಒಯಾಂಗ್ ಬಯಾಂಗ್ ಗ್ರಾಮದಲ್ಲಿ ಪ್ರವಾಹದಲ್ಲಿ ಕೊಚ್ಚಿ ಹೋದ ಮೂವರ ಮೃತದೇಹವನ್ನು ಸಿಬ್ಬಂದಿ ವಶಪಡಿಸಿಕೊಂಡಿದ್ದು, ಸುಮಾರು 40 ಮನೆಗಳು ಸಹ ನಾಶವಾಗಿವೆ ಎಂದು ಓಲಾ ತಿಳಿಸಿದ್ದಾರೆ.
ವೈಬುರಾಕ್ ಎಂಬ ಮತ್ತೊಂದು ಹಳ್ಳಿಯಲ್ಲಿ, ರಾತ್ರಿ ಸುರಿದ ಭಾರಿ ಮಳೆಯಿಂದ ಮೂವರು ಸಾವನ್ನಪ್ಪಿದ್ದು, ಏಳು ಮಂದಿ ನಾಪತ್ತೆಯಾಗಿದ್ದಾರೆ. ನದಿಗಳ ಅಣೆಕಟ್ಟು ಒಡೆದು ಪೂರ್ವ ಫ್ಲೋರ್ಸ್ ಜಿಲ್ಲೆಗೆ ನೀರು ನುಗ್ಗಿದೆ. ಘಟನೆಯಲ್ಲಿ ಗಾಯಗೊಂಡ ನಾಲ್ವರು ಸ್ಥಳೀಯ ಆರೋಗ್ಯ ಚಿಕಿತ್ಸಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


ವೈಬುರಾಕ್ ಎಂಬ ಮತ್ತೊಂದು ಹಳ್ಳಿಯಲ್ಲಿ, ರಾತ್ರಿ ಸುರಿದ ಭಾರಿ ಮಳೆಯಿಂದ ಮೂವರು ಸಾವನ್ನಪ್ಪಿದ್ದು, ಏಳು ಮಂದಿ ನಾಪತ್ತೆಯಾಗಿದ್ದಾರೆ. ನದಿಗಳ ಅಣೆಕಟ್ಟು ಒಡೆದು ಪೂರ್ವ ಫ್ಲೋರ್ಸ್ ಜಿಲ್ಲೆಗೆ ನೀರು ನುಗ್ಗಿದೆ. ಘಟನೆಯಲ್ಲಿ ಗಾಯಗೊಂಡ ನಾಲ್ವರು ಸ್ಥಳೀಯ ಆರೋಗ್ಯ ಚಿಕಿತ್ಸಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನು ಇಲಿ ಲೆವೊಟೊಲೊಕ್ ಜ್ವಾಲಾಮುಖಿಯ ಇಳಿಜಾರು ಪ್ರದೇಶದಲ್ಲಿ ಭೂ ಕುಸಿತ ಉಂಟಾಗಿ, ಹಲವಾರು ಗ್ರಾಮಗಳಿಗೆ ಹಾನಿ ಉಂಟು ಮಾಡಿದೆ. ಘಟನೆಯಲ್ಲಿ ಇಂದು ಬೆಳಗ್ಗೆ ವೇಳೆ ಅನೇಕರು ಸಾವನ್ನಪ್ಪಿದ್ದು, ಒಟ್ಟು ಮೃತರ ಸಂಖ್ಯೆ 55ಕ್ಕೆ ಏರಿಕೆಯಾಗಿದೆ.


ಲೆಂಬಾಟಾ ದ್ವೀಪದಲ್ಲಿ ಸಂಭವಿಸಿದ ಈ ದುರಂತದಲ್ಲಿ 11 ಮಂದಿ ಸಾವನ್ನಪ್ಪಿದ್ದಾರೆ. 16 ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆಯಿದ್ದು, ರಕ್ಷಣಾ ಕಾರ್ಯ ಮುಂದುವರೆದಿದೆ.
ಸುಮಾರು 10,000 ಜನರನ್ನು ಸ್ಥಳಾಂತರಿಸಲಾಗಿದೆ. ಕಾಲೋಚಿತ ಮಳೆಯು ಇಂಡೋನೇಷ್ಯಾದಲ್ಲಿ ಆಗಾಗ್ಗೆ ಪ್ರವಾಹ ಮತ್ತು ಭೂಕುಸಿತಕ್ಕೆ ಕಾರಣವಾಗುತ್ತದೆ. ಇದು 17,000 ದ್ವೀಪಗಳ ಸಮೂಹವಾಗಿದೆ. ಅಲ್ಲಿ ಲಕ್ಷಾಂತರ ಜನರು ಪರ್ವತ ಪ್ರದೇಶಗಳಲ್ಲಿ ಅಥವಾ ಫಲವತ್ತಾದ ಪ್ರವಾಹ ಬಯಲುಗಳ ಬಳಿ ವಾಸಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಇಲ್ಲಿ ಸಂಭವಿಸುವ ಅನಾಹುತಕ್ಕೆ ಜನರು ಬೇಗ ಬಲಿಯಾಗುತ್ತಾರೆ ಎನ್ನಬಹುದು.
Landslides and flash floods from torrential rains in eastern Indonesia have killed at least 55 people and displaced thousands.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
ಒಂದು ವರ್ಷದಲ್ಲಿ 400 ಡ್ರಗ್ ಪೆಡ್ಲರ್ಗಳ ಬಂಧನ ; 2,...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm