ಬ್ರೇಕಿಂಗ್ ನ್ಯೂಸ್
09-04-21 12:20 pm Headline Karnataka News Network ದೇಶ - ವಿದೇಶ
ಲಕ್ನೋ, ಎ.9: ವಾರಣಾಸಿಯಲ್ಲಿರುವ ಕಾಶಿ ವಿಶ್ವನಾಥ ದೇವಸ್ಥಾನ ಮತ್ತು ಪರಿಸರದ ಜ್ಞಾನವಾಪಿ ಮಸೀದಿಯ ಆವರಣದಲ್ಲಿ ಸರ್ವೆ ನಡೆಸುವುದಕ್ಕೆ ವಾರಣಾಸಿ ಕೋರ್ಟ್ ಅನುಮತಿ ನೀಡಿದೆ. ಪ್ರಾಚ್ಯವಸ್ತು ಇಲಾಖೆಯಿಂದ ಮಸೀದಿ ಕಾಂಪ್ಲೆಕ್ಸ್ ಮತ್ತು ಕಾಶಿ ವಿಶ್ವನಾಥ ದೇವಸ್ಥಾನ ವ್ಯಾಪ್ತಿಯಲ್ಲಿ ಸರ್ವೆ ನಡೆಸಬಹುದು ಎಂದು ಕೋರ್ಟ್ ಹೇಳಿದೆ.

ಅಲ್ಲದೆ, ಸರ್ವೆ ನಡೆಸುವುದಕ್ಕೆ ಆಗಬಹುದಾದ ವೆಚ್ಚವನ್ನು ಉತ್ತರ ಪ್ರದೇಶ ಸರಕಾರ ಭರಿಸಬೇಕೆಂದು ಕೋರ್ಟ್ ಹೇಳಿದೆ. ವಿ.ಎಸ್. ರಸ್ತೋಗಿ ಎಂಬ ವಕೀಲರೊಬ್ಬರು ಈ ಬಗ್ಗೆ ಕೋರ್ಟಿಗೆ ಮನವಿ ಮಾಡಿದ್ದು, ಜ್ಞಾನವಾಪಿ ಮಸೀದಿಯನ್ನು 1664ರಲ್ಲಿ ಔರಂಗಜೇಬ್ ಕಟ್ಟಿದ್ದ. ಎರಡು ಸಾವಿರ ವರ್ಷಗಳ ಪ್ರಾಚೀನ ಕಾಲದ ಕಾಶಿ ವಿಶ್ವನಾಥ ಮಂದಿರವನ್ನು ಒಡೆದು ಮಸೀದಿ ಕಟ್ಟಲಾಗಿತ್ತು. ಮಸೀದಿ ಇರುವ ಭೂಮಿಯನ್ನು ಕಾಶಿ ವಿಶ್ವನಾಥ ದೇವಸ್ಥಾನ ಕಮಿಟಿಗೇ ಬಿಟ್ಟುಕೊಡಬೇಕು. ಸರಕಾರ ಅದನ್ನು ವಶಕ್ಕೆ ಪಡೆಯಬೇಕು. ಅದಕ್ಕಾಗಿ ಪ್ರಾಚ್ಯವಸ್ತು ಇಲಾಖೆಯಿಂದ ಸರ್ವೆ ನಡೆಸಿ, ಅಧ್ಯಯನ ನಡೆಸಬೇಕು ಎಂದು ಕೋರ್ಟಿಗೆ ಮನವಿ ಮಾಡಿದ್ದರು.

ಈ ಬಗ್ಗೆ ವಿಚಾರಣೆ ನಡೆಸಿದ ಕೋರ್ಟ್, ದೇವಸ್ಥಾನ ಮತ್ತು ಮಸೀದಿ ಇರುವ ಜಾಗದಲ್ಲಿ ಭಾರತೀಯ ಪ್ರಾಚ್ಯವಸ್ತು ಇಲಾಖೆಯಿಂದ ಸರ್ವೆ ನಡೆಸುವಂತೆ ಸೂಚನೆ ನೀಡಿದೆ.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm