ಬ್ರೇಕಿಂಗ್ ನ್ಯೂಸ್
10-04-21 01:39 pm Headline Karnataka News Network ದೇಶ - ವಿದೇಶ
ಕಾಸರಗೋಡು, ಏ.10 : ಬ್ಯಾಂಕ್ ಮ್ಯಾನೇಜರ್ ಆಗಿರುವ ಮಹಿಳೆಯೊಬ್ಬರು ತಮ್ಮ ಕಚೇರಿಯಲ್ಲೇ ನೇಣಿಗೆ ಶರಣಾದ ಘಟನೆ ಕಣ್ಣೂರು ಜಿಲ್ಲೆಯ ಕೂತುಪರಂಬದಲ್ಲಿ ನಡೆದಿದೆ.
ಕೆನರಾ ಬ್ಯಾಂಕ್ ಕೂತುಪರಂಬ ಶಾಖೆಯ ಕಚೇರಿಯಲ್ಲಿ ಘಟನೆ ನಡೆದಿದೆ. ಮೃತ ಬ್ಯಾಂಕ್ ಮ್ಯಾನೇಜರ್ ಅನ್ನು ತ್ರಿಶ್ಶೂರ್ ಮೂಲದ ಕೆ.ಎಸ್ ಸ್ವಪ್ನಾ (40) ಎಂದು ಗುರುತಿಸಲಾಗಿದೆ. ಬ್ಯಾಂಕ್ ನೌಕರರು ಎಂದಿನಂತೆ ಶುಕ್ರವಾರ ಬೆಳಗ್ಗೆ 8.45 ರ ವೇಳೆಗೆ ಬ್ಯಾಂಕ್ಗೆ ಆಗಮಿಸಿದಾಗ ಸ್ವಪ್ನಾ ಸೀಲಿಂಗ್ ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿರುವುದು ಕಂಡುಬಂದಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದರೂ, ಜೀವ ಉಳಿಸಲಾಗಲಿಲ್ಲ.
ಬ್ಯಾಂಕ್ ವ್ಯವಸ್ಥಾಪಕಿ ಆತ್ಮಹತ್ಯೆಗೆ ಶರಣಾದ ಪ್ರಕರಣದ ಕುರಿತು ಕೂತುಪರಂಬ ಎಸಿಪಿ ಕೆ.ಜಿ. ಸುರೇಶ್ ಕುಮಾರ್ ಮತ್ತು ಎಸ್ಐ ಕೆ.ಟಿ. ಸಂದೀಪ್ ನೇತೃತ್ವದ ಪೊಲೀಸ್ ತಂಡ ಬ್ಯಾಂಕ್ ಪರಿಶೀಲನೆ ನಡೆಸಿದ್ದು ಸಿಸಿಟಿವಿ ದೃಶ್ಯಾವಳಿಗಳನ್ನು ವಶಕ್ಕೆ ಪಡೆದಿದೆ.
ಸಿಸಿಟಿವಿ ದೃಶ್ಯಾವಳಿಯಂತೆ ಸ್ವಪ್ನಾ ಬೆಳಗ್ಗೆ 8.10 ರ ವೇಳೆಗೆ ಕಚೇರಿ ತಲುಪಿ 8.17 ರ ವೇಳೆಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಪೊಲೀಸರಿಗೆ ಸ್ಪಪ್ನಾ ಅವರ ಡೈರಿ ಪತ್ತೆಯಾಗಿದ್ದು, ಅದರಲ್ಲಿ ಕೆಲಸವನ್ನು ಉತ್ತಮವಾಗಿ ನಿರ್ವಹಿಸಲು ಸಾಧ್ಯವಾಗಿಲ್ಲ ಎಂದು ಬರೆದಿದೆ. ಇದು ಆತ್ಮಹತ್ಯೆಗೆ ಕಾರಣವಾಗಿರಬಹುದು ಎಂದು ಎಸ್ಐ ಕೆ ಟಿ ಸಂದೀಪ್ ಅನುಮಾನ ವ್ಯಕ್ತಪಡಿಸಿದ್ದಾರೆ.
ತ್ರಿಶೂರ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸ್ವಪ್ನಾ ಭಡ್ತಿ ಪಡೆದಿದ್ದು ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ನಲ್ಲಿ ಕೂತ್ತುಪರಂಬಕ್ಕೆ ಬಂದು ಬಾಡಿಗೆ ಮನೆಯಲ್ಲಿ ವಾಸವಿದ್ದರು. ಇವರ ಪತಿ ಸಾಬು ಎರಡು ವರ್ಷಗಳ ಹಿಂದೆ ಹೃದಯಾಘಾತದಿಂದ ಮೃತಪಟ್ಟಿದ್ದರು. ಸ್ವಪ್ನಾ ಅವರ ಮಕ್ಕಳಾದ ನಿರಂಜನ್ ಮತ್ತು ನಿವೇದಿಕಾ ಇಬ್ಬರೂ ಕೇಂದ್ರಿಯ ವಿದ್ಯಾಲಯಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ.
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 02:28 pm
HK News Desk
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
ಕಲ್ಲು ಮರಳಿನ ಸಮಸ್ಯೆಯಿಂದ ಜನರ ತಲೆಗೆ ಚಪ್ಪಡಿ ಕಲ್ಲು...
14-07-25 09:55 pm
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
15-07-25 01:13 pm
HK News Desk
Mangalore Crime, Police: ದುಬೈನಲ್ಲಿ ವಹಿವಾಟು ;...
15-07-25 11:38 am
ಮ್ಯಾಟ್ರಿಮನಿ ಸೈಟಲ್ಲಿ ಸಿಕ್ಕ ಗೆಳತಿಯಿಂದಲೇ ಮೋಸ ; ಆ...
13-07-25 05:23 pm
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm