ಬ್ರೇಕಿಂಗ್ ನ್ಯೂಸ್
10-04-21 01:39 pm Headline Karnataka News Network ದೇಶ - ವಿದೇಶ
ಕಾಸರಗೋಡು, ಏ.10 : ಬ್ಯಾಂಕ್ ಮ್ಯಾನೇಜರ್ ಆಗಿರುವ ಮಹಿಳೆಯೊಬ್ಬರು ತಮ್ಮ ಕಚೇರಿಯಲ್ಲೇ ನೇಣಿಗೆ ಶರಣಾದ ಘಟನೆ ಕಣ್ಣೂರು ಜಿಲ್ಲೆಯ ಕೂತುಪರಂಬದಲ್ಲಿ ನಡೆದಿದೆ.
ಕೆನರಾ ಬ್ಯಾಂಕ್ ಕೂತುಪರಂಬ ಶಾಖೆಯ ಕಚೇರಿಯಲ್ಲಿ ಘಟನೆ ನಡೆದಿದೆ. ಮೃತ ಬ್ಯಾಂಕ್ ಮ್ಯಾನೇಜರ್ ಅನ್ನು ತ್ರಿಶ್ಶೂರ್ ಮೂಲದ ಕೆ.ಎಸ್ ಸ್ವಪ್ನಾ (40) ಎಂದು ಗುರುತಿಸಲಾಗಿದೆ. ಬ್ಯಾಂಕ್ ನೌಕರರು ಎಂದಿನಂತೆ ಶುಕ್ರವಾರ ಬೆಳಗ್ಗೆ 8.45 ರ ವೇಳೆಗೆ ಬ್ಯಾಂಕ್ಗೆ ಆಗಮಿಸಿದಾಗ ಸ್ವಪ್ನಾ ಸೀಲಿಂಗ್ ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿರುವುದು ಕಂಡುಬಂದಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದರೂ, ಜೀವ ಉಳಿಸಲಾಗಲಿಲ್ಲ.

ಬ್ಯಾಂಕ್ ವ್ಯವಸ್ಥಾಪಕಿ ಆತ್ಮಹತ್ಯೆಗೆ ಶರಣಾದ ಪ್ರಕರಣದ ಕುರಿತು ಕೂತುಪರಂಬ ಎಸಿಪಿ ಕೆ.ಜಿ. ಸುರೇಶ್ ಕುಮಾರ್ ಮತ್ತು ಎಸ್ಐ ಕೆ.ಟಿ. ಸಂದೀಪ್ ನೇತೃತ್ವದ ಪೊಲೀಸ್ ತಂಡ ಬ್ಯಾಂಕ್ ಪರಿಶೀಲನೆ ನಡೆಸಿದ್ದು ಸಿಸಿಟಿವಿ ದೃಶ್ಯಾವಳಿಗಳನ್ನು ವಶಕ್ಕೆ ಪಡೆದಿದೆ.
ಸಿಸಿಟಿವಿ ದೃಶ್ಯಾವಳಿಯಂತೆ ಸ್ವಪ್ನಾ ಬೆಳಗ್ಗೆ 8.10 ರ ವೇಳೆಗೆ ಕಚೇರಿ ತಲುಪಿ 8.17 ರ ವೇಳೆಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಪೊಲೀಸರಿಗೆ ಸ್ಪಪ್ನಾ ಅವರ ಡೈರಿ ಪತ್ತೆಯಾಗಿದ್ದು, ಅದರಲ್ಲಿ ಕೆಲಸವನ್ನು ಉತ್ತಮವಾಗಿ ನಿರ್ವಹಿಸಲು ಸಾಧ್ಯವಾಗಿಲ್ಲ ಎಂದು ಬರೆದಿದೆ. ಇದು ಆತ್ಮಹತ್ಯೆಗೆ ಕಾರಣವಾಗಿರಬಹುದು ಎಂದು ಎಸ್ಐ ಕೆ ಟಿ ಸಂದೀಪ್ ಅನುಮಾನ ವ್ಯಕ್ತಪಡಿಸಿದ್ದಾರೆ.
ತ್ರಿಶೂರ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸ್ವಪ್ನಾ ಭಡ್ತಿ ಪಡೆದಿದ್ದು ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ನಲ್ಲಿ ಕೂತ್ತುಪರಂಬಕ್ಕೆ ಬಂದು ಬಾಡಿಗೆ ಮನೆಯಲ್ಲಿ ವಾಸವಿದ್ದರು. ಇವರ ಪತಿ ಸಾಬು ಎರಡು ವರ್ಷಗಳ ಹಿಂದೆ ಹೃದಯಾಘಾತದಿಂದ ಮೃತಪಟ್ಟಿದ್ದರು. ಸ್ವಪ್ನಾ ಅವರ ಮಕ್ಕಳಾದ ನಿರಂಜನ್ ಮತ್ತು ನಿವೇದಿಕಾ ಇಬ್ಬರೂ ಕೇಂದ್ರಿಯ ವಿದ್ಯಾಲಯಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm