ಯುಗಾದಿ ಶುಭಾಶಯ ಕೋರಿದ ಪ್ರಧಾನಿ ಮೋದಿ ; ಕನ್ನಡದಲ್ಲಿಯೇ ಟ್ವೀಟ್

13-04-21 10:49 am       Headline Karnataka News Network   ದೇಶ - ವಿದೇಶ

ದೇಶದಲ್ಲಿ ಕೋವಿಡ್ ಭೀತಿಯ ನಡುವೆಯೇ ಯುಗಾದಿ ಹಬ್ಬ ಬಂದಿದೆ. ಹಿಂದೂ ಪುರಾಣಗಳ ಪ್ರಕಾರ ಈ ದಿನ ಬ್ರಹ್ಮ ಬ್ರಹ್ಮಾಂಡವನ್ನು ಸೃಷ್ಟಿಸಿದನು. ಆದ್ದರಿಂದ, ಯುಗಾದಿಯನ್ನು ಹೊಸ ವರ್ಷದ ಆರಂಭ ಎಂದು ಆಚರಣೆ ಮಾಡಲಾಗುತ್ತದೆ.

ಬೆಂಗಳೂರು, ಏಪ್ರಿಲ್ 13: ದೇಶದಲ್ಲಿ ಕೋವಿಡ್ ಭೀತಿಯ ನಡುವೆಯೇ ಯುಗಾದಿ ಹಬ್ಬ ಬಂದಿದೆ. ಹಿಂದೂ ಪುರಾಣಗಳ ಪ್ರಕಾರ ಈ ದಿನ ಬ್ರಹ್ಮ ಬ್ರಹ್ಮಾಂಡವನ್ನು ಸೃಷ್ಟಿಸಿದನು. ಆದ್ದರಿಂದ, ಯುಗಾದಿಯನ್ನು ಹೊಸ ವರ್ಷದ ಆರಂಭ ಎಂದು ಆಚರಣೆ ಮಾಡಲಾಗುತ್ತದೆ.

ಪ್ರಧಾನಿ ನರೇಂದ್ರ ಮೋದಿ ಯುಗಾದಿ ಹಬ್ಬದ ಸಂದರ್ಭದಲ್ಲಿ ಕರ್ನಾಟಕದ ಜನರಿಗೆ ಶುಭಾಶಯಗಳನ್ನು ಕೋರಿದ್ದಾರೆ. ಮಂಗಳವಾರ ಅವರು ಈ ಕುರಿತು ಕನ್ನಡದಲ್ಲಿಯೇ ಟ್ವೀಟ್ ಮಾಡಿದ್ದಾರೆ.

"ನಿಮ್ಮೆಲ್ಲರಿಗೂ ಯುಗಾದಿಯ ಶುಭಕಾಮನೆಗಳು. ಮುಂಬರುವ ವರ್ಷ ಅದ್ಭುತವಾಗಲಿ. ನೀವೆಲ್ಲರೂ ಆರೋಗ್ಯ ಹಾಗು ಸಂತಸದಿಂದಿರಿ. ಎಲ್ಲೆಡೆ ಸಮೃದ್ಧಿ ಹಾಗು ಸಂತೋಷ ಪಸರಿಸಲಿ" ಎಂದು ಅವರು ತಮ್ಮ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಆಂಧ್ರ ಪ್ರದೇಶ, ತೆಲಂಗಾಣ ಮತ್ತು ಕರ್ನಾಟಕದಲ್ಲಿ ಜನರು ಯುಗಾದಿ ಹಬ್ಬವನ್ನು ಹೆಚ್ಚು ಸಂಭ್ರಮದಿಂದಲೇ ಆಚರಣೆ ಮಾಡುತ್ತಾರೆ. ಮನೆಯ ಮುಂದೆ ಬಣ್ಣ-ಬಣ್ಣದ ರಂಗೋಲಿ ಬರೆದು, ಬಾಗಿಲಿಗೆ ಹಸಿರು ತೋರಣವನ್ನು ಕಟ್ಟಿ, ಹೊಸ ಬಟ್ಟೆ ತೊಟ್ಟು ಹಬ್ಬವನ್ನು ಆಚರಿಸುತ್ತಾರೆ.

Prime Minister Narendra Modi greeted people on Chaitra Navratri today. The nine-day Chaitra Navratri begins today and ends on April 22. PM Modi also tweeted greetings on Ugadi, the Telugu New Year, celebrated in Karnataka, Andhra Pradesh and Telangana. Chaitra Navratri and Ugadi are happy and vibrant spring festivals ringing in the Hindu New Year in several states.