ಬ್ರೇಕಿಂಗ್ ನ್ಯೂಸ್
14-04-21 10:38 am Headline Karnataka News Network ದೇಶ - ವಿದೇಶ
ನವದೆಹಲಿ, ಏ. 14: ದೇಶದಲ್ಲಿ ಎರಡನೇ ಸುತ್ತಿನಲ್ಲಿ ಮಾರಕ ಕಾಯಿಲೆ ಕೊರೋನಾ ಅಲೆ ವ್ಯಾಪಕವಾಗಿ ಹರಡುತ್ತಿದ್ದು ಆತಂಕವನ್ನು ಸೃಷ್ಟಿಸುತ್ತಿದೆ.
ಕೊರೋನಾ ಸೋಂಕು ಹರಡುವಿಕೆ ಶರವೇಗವನ್ನು ಪಡೆದುಕೊಂಡಿದೆ. ಹಲವು ನಿರ್ಬಂಧಗಳ ನಡುವೆಯೂ ಇಷ್ಟು ದೊಡ್ಡ ಪ್ರಮಾಣದಲ್ಲಿ ಕೊರೋನಾ ಸೋಂಕಿತರು ಪತ್ತೆ ಆಗುತ್ತಿದ್ದಾರೆ. ಏಪ್ರಿಲ್ 4ರಿಂದ ದಿನ ಒಂದರಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನರು ಸೋಂಕು ಪೀಡಿತರಾಗಿದ್ದರು.
ಏಪ್ರಿಲ್ 7ರಿಂದ ದಿನ ಒಂದರಲ್ಲಿ ಒಂದೂಕಾಲು ಲಕ್ಷಕ್ಕೂ ಹೆಚ್ಚು ಕೊರೋನಾ ಸೋಂಕು ಪೀಡಿತರು ಪತ್ತೆಯಾಗುತ್ತಿದ್ದರು. ಈಗ ದಿನ ಒಂದರಲ್ಲಿ 'ಒಂದೂವರೆ ಲಕ್ಷಕ್ಕೂ ಹೆಚ್ಚು ಪ್ರಕರಣಗಳು ಕಂಡುಬರುವ ಟ್ರೆಂಡ್' ಮುಂದುವರೆದಿದೆ. ಅಲ್ಲದೆ ಸುಮಾರು ಎರಡು ಲಕ್ಷ ಪ್ರಕರಣಗಳು ಗೋಚರಿಸಿವೆ.
ಮಂಗಳವಾರ 1,84,372 ಹೊಸ ಪ್ರಕರಣಗಳು ಪತ್ತೆಯಾಗಿದ್ದು ಈ ಪೈಕಿ ಗುಣ ಆಗಿರುವವರು 82,339 ಜನ ಮಾತ್ರ. ಇದರಿಂದ ದೇಶದಲ್ಲಿ ಈವರೆಗೆ ಕೊರೋನಾ ಸೋಂಕು ಪೀಡಿತರಾದವರ ಸಂಖ್ಯೆ 1,36,89,453ಕ್ಕೆ ಏರಿಕೆ ಆಗಿದೆ. ಇದಲ್ಲದೆ ದಿನದಿಂದ ದಿನಕ್ಕೆ ಕೊರೋನಾ ರೋಗಕ್ಕೆ ಬಲಿ ಆಗುತ್ತಿರುವವರ ಸಂಖ್ಯೆ ಕೂಡ ಹೆಚ್ಚಾಗಿದ್ದು ದೇಶದಲ್ಲಿ ಇದೇ ಮೊದಲ ಬಾರಿಗೆ ಮಂಗಳವಾರ ಒಂದೇ ದಿನ ಸಾವಿರಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. ಮಂಗಳವಾರ 1,027 ಜನರು ಬಲಿ ಆಗಿದ್ದು ಈವರೆಗೆ ಮಹಾಮಾರಿ ಕೊರೋನಾಗೆ ಬಲಿ ಆಗುತ್ತಿರುವವರ ಸಂಖ್ಯೆ 1,72,085ಕ್ಕೆ ಏರಿಕೆ ಆಗಿದೆ.
ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಲಸಿಕೆ ಹಾಕುವ ಕೆಲಸವನ್ನು ಹಂತ ಹಂತವಾಗಿ ತೀವ್ರಗೊಳಿಸಲಾಗುತ್ತದೆ. ಈವರೆಗೆ ದೇಶಾದ್ಯಂತ ಒಟ್ಟು 11,11,79,578 ಜನರಿಗೆ ಲಸಿಕೆ ಹಾಕಲಾಗಿದೆ. ಏಪ್ರಿಲ್ 1ರಿಂದ 45 ವರ್ಷಕ್ಕಿಂತ ಹೆಚ್ಚು ವಯಸ್ಸಾದ ಎಲ್ಲರಿಗೂ ಕೊರೋನಾ ಲಸಿಕೆ ಹಾಕಲಾಗುತ್ತಿದೆ. ಏಪ್ರಿಲ್ 11ರಿಂದ ಕೊರೋನಾ ಲಸಿಕೆ ಹಾಕುವ 'ಟಿಕಾ ಉತ್ಸವ'ವನ್ನು ನಡೆಸಲಾಗುತ್ತಿದೆ.
India reported a record single-day rise of 1,84,372 new coronavirus infections pushing the total tally of cases to 1,38,73,825, while the active cases surpassed the 13-lakh mark, according to the Union health ministry data updated on Wednesday.
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 07:19 pm
Mangalore Correspondent
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
ಕಲ್ಲು ಮರಳಿನ ಸಮಸ್ಯೆಯಿಂದ ಜನರ ತಲೆಗೆ ಚಪ್ಪಡಿ ಕಲ್ಲು...
14-07-25 09:55 pm
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
15-07-25 06:52 pm
Bangalore Correspondent
Mangalore, Moodbidri college, Rape, Blackmail...
15-07-25 06:07 pm
ಹಿಂದು ಯುವತಿಯರನ್ನು ಮತಾಂತರ ಮಾಡುತ್ತಿದ್ದಾನೆಂದು ಸು...
15-07-25 05:21 pm
Mangalore Police, Arrest, NITTE College Stude...
15-07-25 01:13 pm
Mangalore Crime, Police: ದುಬೈನಲ್ಲಿ ವಹಿವಾಟು ;...
15-07-25 11:38 am