ಬ್ರೇಕಿಂಗ್ ನ್ಯೂಸ್
14-04-21 10:38 am Headline Karnataka News Network ದೇಶ - ವಿದೇಶ
ನವದೆಹಲಿ, ಏ. 14: ದೇಶದಲ್ಲಿ ಎರಡನೇ ಸುತ್ತಿನಲ್ಲಿ ಮಾರಕ ಕಾಯಿಲೆ ಕೊರೋನಾ ಅಲೆ ವ್ಯಾಪಕವಾಗಿ ಹರಡುತ್ತಿದ್ದು ಆತಂಕವನ್ನು ಸೃಷ್ಟಿಸುತ್ತಿದೆ.
ಕೊರೋನಾ ಸೋಂಕು ಹರಡುವಿಕೆ ಶರವೇಗವನ್ನು ಪಡೆದುಕೊಂಡಿದೆ. ಹಲವು ನಿರ್ಬಂಧಗಳ ನಡುವೆಯೂ ಇಷ್ಟು ದೊಡ್ಡ ಪ್ರಮಾಣದಲ್ಲಿ ಕೊರೋನಾ ಸೋಂಕಿತರು ಪತ್ತೆ ಆಗುತ್ತಿದ್ದಾರೆ. ಏಪ್ರಿಲ್ 4ರಿಂದ ದಿನ ಒಂದರಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನರು ಸೋಂಕು ಪೀಡಿತರಾಗಿದ್ದರು.
ಏಪ್ರಿಲ್ 7ರಿಂದ ದಿನ ಒಂದರಲ್ಲಿ ಒಂದೂಕಾಲು ಲಕ್ಷಕ್ಕೂ ಹೆಚ್ಚು ಕೊರೋನಾ ಸೋಂಕು ಪೀಡಿತರು ಪತ್ತೆಯಾಗುತ್ತಿದ್ದರು. ಈಗ ದಿನ ಒಂದರಲ್ಲಿ 'ಒಂದೂವರೆ ಲಕ್ಷಕ್ಕೂ ಹೆಚ್ಚು ಪ್ರಕರಣಗಳು ಕಂಡುಬರುವ ಟ್ರೆಂಡ್' ಮುಂದುವರೆದಿದೆ. ಅಲ್ಲದೆ ಸುಮಾರು ಎರಡು ಲಕ್ಷ ಪ್ರಕರಣಗಳು ಗೋಚರಿಸಿವೆ.
ಮಂಗಳವಾರ 1,84,372 ಹೊಸ ಪ್ರಕರಣಗಳು ಪತ್ತೆಯಾಗಿದ್ದು ಈ ಪೈಕಿ ಗುಣ ಆಗಿರುವವರು 82,339 ಜನ ಮಾತ್ರ. ಇದರಿಂದ ದೇಶದಲ್ಲಿ ಈವರೆಗೆ ಕೊರೋನಾ ಸೋಂಕು ಪೀಡಿತರಾದವರ ಸಂಖ್ಯೆ 1,36,89,453ಕ್ಕೆ ಏರಿಕೆ ಆಗಿದೆ. ಇದಲ್ಲದೆ ದಿನದಿಂದ ದಿನಕ್ಕೆ ಕೊರೋನಾ ರೋಗಕ್ಕೆ ಬಲಿ ಆಗುತ್ತಿರುವವರ ಸಂಖ್ಯೆ ಕೂಡ ಹೆಚ್ಚಾಗಿದ್ದು ದೇಶದಲ್ಲಿ ಇದೇ ಮೊದಲ ಬಾರಿಗೆ ಮಂಗಳವಾರ ಒಂದೇ ದಿನ ಸಾವಿರಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. ಮಂಗಳವಾರ 1,027 ಜನರು ಬಲಿ ಆಗಿದ್ದು ಈವರೆಗೆ ಮಹಾಮಾರಿ ಕೊರೋನಾಗೆ ಬಲಿ ಆಗುತ್ತಿರುವವರ ಸಂಖ್ಯೆ 1,72,085ಕ್ಕೆ ಏರಿಕೆ ಆಗಿದೆ.
ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಲಸಿಕೆ ಹಾಕುವ ಕೆಲಸವನ್ನು ಹಂತ ಹಂತವಾಗಿ ತೀವ್ರಗೊಳಿಸಲಾಗುತ್ತದೆ. ಈವರೆಗೆ ದೇಶಾದ್ಯಂತ ಒಟ್ಟು 11,11,79,578 ಜನರಿಗೆ ಲಸಿಕೆ ಹಾಕಲಾಗಿದೆ. ಏಪ್ರಿಲ್ 1ರಿಂದ 45 ವರ್ಷಕ್ಕಿಂತ ಹೆಚ್ಚು ವಯಸ್ಸಾದ ಎಲ್ಲರಿಗೂ ಕೊರೋನಾ ಲಸಿಕೆ ಹಾಕಲಾಗುತ್ತಿದೆ. ಏಪ್ರಿಲ್ 11ರಿಂದ ಕೊರೋನಾ ಲಸಿಕೆ ಹಾಕುವ 'ಟಿಕಾ ಉತ್ಸವ'ವನ್ನು ನಡೆಸಲಾಗುತ್ತಿದೆ.
India reported a record single-day rise of 1,84,372 new coronavirus infections pushing the total tally of cases to 1,38,73,825, while the active cases surpassed the 13-lakh mark, according to the Union health ministry data updated on Wednesday.
07-09-25 10:17 am
Bangalore Correspondent
Mandya Suicide, Marriage: ಮದುವೆ ಕ್ಯಾನ್ಸಲ್ ಆಗಿ...
07-09-25 10:11 am
Sirsi Airgun, Murder, Crime: ಶಿರಸಿ; ಏರ್ಗನ್ ಗ...
06-09-25 08:28 pm
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
Sonia Gandhi, Dharmasthala: Who Killed the Wo...
05-09-25 11:15 pm
06-09-25 10:34 am
HK News Desk
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
07-09-25 02:25 pm
Mangalore Correspondent
Ullal, Mangalore Police: ಮೊದಲ ಪತ್ನಿಗೆ ಜೀವನಾಂಶ...
06-09-25 10:59 pm
Mangalore, Dharmasthala, Vittal Gowda, Skull:...
06-09-25 10:15 pm
ಗೋಮಾಂಸ ಭಕ್ಷಕರಿಗೆ ರಾಜ್ಯ ಸರ್ಕಾರ ಶಾದಿ ಭಾಗ್ಯ ರೀತಿ...
06-09-25 05:56 pm
Mla Vedavyas Kamath, Mangalore: ಮಳೆಗೆ ಹದಗೆಟ್ಟ...
06-09-25 04:46 pm
07-09-25 03:34 pm
Mangalore Correspondent
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm