ಆಂಬುಲೆನ್ಸ್ ಡಿಕ್ಕಿ ; ಸ್ಕೂಟರ್ ಸವಾರ ಅಪ್ರಾಪ್ತ ಬಾಲಕ ಮೃತ್ಯು

14-04-21 11:24 am       Headline Karnataka News Network   ದೇಶ - ವಿದೇಶ

ವೈದ್ಯಕೀಯ ಕಾಲೇಜಿಗೆ ತೆರಳುತ್ತಿದ್ದ ಆ್ಯಂಬುಲೆನ್ಸ್ ಮತ್ತು ಸ್ಕೂಟರ್ ಮುಖಾಮುಖಿ ಡಿಕ್ಕಿಯಾಗಿ ಮೃತಪಟ್ಟ ಘಟನೆ ಬದಿಯಡ್ಕದಲ್ಲಿ ನಡೆದಿದೆ.

ಕಾಸರಗೋಡು, ಎ.14 : ಆ್ಯಂಬುಲೆನ್ಸ್ ಮತ್ತು ಸ್ಕೂಟರ್ ಮುಖಾಮುಖಿ ಡಿಕ್ಕಿಯಾಗಿ ಸ್ಕೂಟರ್ ಹಿಂಬದಿ ಸವಾರ ಬಾಲಕ ಮೃತಪಟ್ಟ ಘಟನೆ ಬದಿಯಡ್ಕದಲ್ಲಿ ನಡೆದಿದೆ.

ಬದಿಯಡ್ಕ ಪೆರಡಾಲದ  ಅಬ್ದುಲ್ ಶಾಹಿಲ್ (16) ಮೃತಪಟ್ಟ ಬಾಲಕ. ಸ್ಕೂಟರ್ ಚಲಾಯಿಸುತ್ತಿದ್ದ ಮೂಕಂಪಾರೆಯ ಅಬ್ದುಸ್ಸಮದ್ (19) ಗಂಭೀರ ಗಾಯಗೊಂಡಿದ್ದು ಆತನನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ

ಬದಿಯಡ್ಕ ಸರ್ಕಲ್ ನಲ್ಲಿ ಅಪಘಾತ ಸಂಭವಿಸಿದ್ದು ಉಕ್ಕಿನಡ್ಕ ವೈದ್ಯಕೀಯ ಕಾಲೇಜಿಗೆ ತೆರಳುತ್ತಿದ್ದ ಆ್ಯಂಬುಲೆನ್ಸ್ ಮತ್ತು ಸ್ಕೂಟರ್ ಮುಖಾಮುಖಿ ಡಿಕ್ಕಿಯಾಗಿದೆ. ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರರಿಬ್ಬರನ್ನು  ಕುಂಬಳೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶಾಹಿಲ್ ಅಸುನೀಗಿದ್ದಾನೆ.

ಅಬ್ದುಸ್ಸಮದ್ ರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.ಈ ಬಗ್ಗೆ ಬದಿಯಡ್ಕ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

A 16-year-old boy was killed in a tragic road accident after Collison with an ambulance in Badiyadka in Kasargod. The deceased has been identified as Abdul Shahil.