ಬ್ರೇಕಿಂಗ್ ನ್ಯೂಸ್
15-04-21 05:27 pm Headline Karnataka News Network ದೇಶ - ವಿದೇಶ
ನವದೆಹಲಿ, ಏ.15 : ಕಳೆದ ವರ್ಷ ಕೋವಿಡ್ 19 ಸೋಂಕು ಹೆಚ್ಚಳವಾದ ಹಿನ್ನೆಲೆಯಲ್ಲಿ ಅನಾರೋಗ್ಯದ ಕಾರಣದಿಂದ ತಿಹಾರ್ ಜೈಲಿನಿಂದ ಪೆರೋಲ್ ಮೇಲೆ 6,740 ಮಂದಿ ವಿಚಾರಣಾಧೀನ ಕೈದಿಗಳು ಬಿಡುಗಡೆಗೊಂಡಿದ್ದು, ಇದರಲ್ಲಿ 3,468 ಕೈದಿಗಳು ನಾಪತ್ತೆಯಾಗಿರುವುದಾಗಿ ಜೈಲಿನ ಅಧಿಕಾರಿಗಳು ತಿಳಿಸಿದ್ದು, ಅವರ ಪತ್ತೆಗಾಗಿ ದೆಹಲಿ ಪೊಲೀಸರ ನೆರವು ಕೋರಲಾಗಿದೆ ಎಂದು ವರದಿ ತಿಳಿಸಿದೆ.
ಪೆರೋಲ್ ಮೇಲೆ ಆರೋಪಿಗಳು, ವಿಚಾರಣಾಧೀನ ಕೈದಿಗಳು ಹೊರ ಹೋಗಿದ್ದು, ಇವರು ಎಚ್ ಐವಿ, ಕ್ಯಾನ್ಸರ್, ಕಿಡ್ನಿ ಸಮಸ್ಯೆ, ಹೆಪಟೈಟೀಸ್ ಬಿ (ಸಿ), ಅಸ್ತಮಾ ಮತ್ತು ಟಿಬಿಯಂತಹ ಕಾಯಿಲೆಯಿಂದ ಬಳಲುತ್ತಿದ್ದರು. ದಕ್ಷಿಣ ಏಷ್ಯಾದ ಅತೀ ದೊಡ್ಡ ಜೈಲು ಸಂಕೀರ್ಣಗಳಲ್ಲಿ ಒಂದಾಗಿರುವ ತಿಹಾರ್ ಜೈಲಿನಲ್ಲಿ 10,026 ಕೈದಿಗಳನ್ನು ಇರಿಸಬಹುದಾಗಿದೆ ಎಂದು ವರದಿ ತಿಳಿಸಿದೆ.
ದೆಹಲಿಯ ತಿಹಾರ್, ಮಾಂಡೋಲಿ ಮತ್ತು ರೋಹಿಣಿ ಜೈಲುಗಳಿಂದ 1,184 ಆರೋಪಿಗಳನ್ನು ಕೋವಿಡ್ ಪೆರೋಲ್ ಮೇಲೆ ಬಿಡುಗಡೆಗೊಳಿಸಲಾಗಿತ್ತು. ಆರಂಭಿಕ ಎಂಟು ವಾರಗಳ ಗಡುವಿನ ಮೇಲೆ ಬಿಡುಗಡೆ ಮಾಡಲಾಗಿದ್ದು, ನಂತರ ಸಮಯಕ್ಕೆ ತಕ್ಕಂತೆ ಅವಧಿಯನ್ನು ಮುಂದುವರಿಸಲಾಗಿತ್ತು ಎಂದು ಜೈಲಿನ ಮೂಲಗಳು ವಿವರಿಸಿದೆ.
ಪೆರೋಲ್ ಮೇಲೆ ಹೋದ ಕೈದಿಗಳು ಫೆಬ್ರುವರಿ 7 ಮತ್ತು ಮಾರ್ಚ್ 6ರ ನಡುವೆ ಶರಣಾಗಬೇಕಿತ್ತು. ಆದರೆ 1,184 ಕೈದಿಗಳ ಪೈಕಿ 112 ಕೈದಿಗಳು ನಾಪತ್ತೆಯಾಗಿದ್ದಾರೆ. ಜೈಲಿನ ಅಧಿಕಾರಿಗಳು ಆರೋಪಿತರ ಕುಟುಂಬದ ಸದಸ್ಯರನ್ನು ಭೇಟಿಯಾದಾಗ, ಕೈದಿಗಳು ಮನೆಯಲ್ಲಿ ಇಲ್ಲ ಎಂದು ತಿಳಿಸಿರುವುದಾಗಿ ವರದಿ ಹೇಳಿದೆ.
ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ 5,556 ವಿಚಾರಣಾಧೀನ ಕೈದಿಗಳ ಪೈಕಿ ಕೇವಲ 2,200 ಕೈದಿಗಳು ಮಾತ್ರ ವಾಪಸ್ ಆಗಿರುವುದಾಗಿ ಜೈಲಿನ ಅಧಿಕಾರಿಗಳು ತಿಳಿಸಿದ್ದಾರೆ. 2021ರ ಮಾರ್ಚ್ 6ರಂದು ಕೈದಿಗಳು ಶರಣಾಗುವ ಪ್ರಕ್ರಿಯೆ ಆರಂಭಿಸಲಾಗಿತ್ತು, ಆದರೆ ಈವರೆಗೆ 3,468 ಕೈದಿಗಳು ನಾಪತ್ತೆಯಾಗಿರುವುದಾಗಿ ತಿಹಾರ್ ಜೈಲಿನ ಅಧಿಕಾರಿಗಳು ತಿಳಿಸಿದ್ದಾರೆ.
Of the 6,740 prisoners at Tihar Jail who were released on parole last year in the wake of the Covid-19 pandemic, 3,468 have gone “missing”. Jail authorities have now approached the Delhi Police to help trace them.
26-04-24 11:17 pm
Bangalore Correspondent
ಬಿಜೆಪಿ ತನ್ನ ಭದ್ರಕೋಟೆಯಲ್ಲೂ ಗೆದ್ದೇ ಗೆಲ್ಲುತ್ತೇವೆ...
26-04-24 09:10 pm
Madikeri, election, heart attack; ಮಡಿಕೇರಿ ; ಮ...
26-04-24 06:14 pm
Chamarajanagar, villagers, Booth: ಮತದಾನ ಬಹಿಷ್...
26-04-24 04:53 pm
ಚಿತ್ರದುರ್ಗ ; ಲೋ ಬಿಪಿಯಿಂದ ಅಸ್ವಸ್ಥ , ಮತಗಟ್ಟೆಯಲ್...
26-04-24 03:04 pm
26-04-24 02:58 pm
HK News Desk
Road Accident In Telangana: ಹಾಳಾಗಿ ನಿಂತಿದ್ದ ಲ...
25-04-24 03:49 pm
Groom electrocuted in Rajasthan: ರೆಸಾರ್ಟ್ ನಲ್...
24-04-24 05:01 pm
Pm Modi, Muslims: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ...
22-04-24 10:37 pm
ಮದುವೆ ಮುಗಿಸಿ ವಾಪಾಸ್ ಆಗುವ ವೇಳೆ ಭೀಕರ ಅಪಘಾತ ; ಓ...
21-04-24 03:23 pm
26-04-24 10:45 pm
Mangalore Correspondent
Mangalore Voting, Election 2024; ದಕ್ಷಿಣ ಕನ್ನಡ...
26-04-24 10:32 pm
Karkala, Horse ride to cast his vote: ಕಾರ್ಕಳ...
26-04-24 09:28 pm
ಸುಳ್ಯ ; 18 ನಕ್ಸಲ್ ಪೀಡಿತ ಮತಗಟ್ಟೆಗಳಲ್ಲಿ ಶಸ್ತ್ರಸ...
26-04-24 08:42 pm
Mangalore live voting percentage: ದಕ್ಷಿಣ ಕನ್ನ...
26-04-24 05:56 pm
26-04-24 03:59 pm
Mangalore Correspondent
Mangalore Fraud, crime, Krishnaprasad Shetty:...
25-04-24 10:18 pm
Bangalore crime, Dacoity gang, 40 lakhs, robb...
25-04-24 03:33 pm
Gang raped in Bengaluru: ಬೆಂಗಳೂರಿನಲ್ಲಿ ಯುವತಿ...
25-04-24 12:19 pm
Glide touist bus, Mangalore, crime: ಬೆಂಗಳೂರು...
24-04-24 10:48 pm