ಬ್ರೇಕಿಂಗ್ ನ್ಯೂಸ್
15-04-21 05:27 pm Headline Karnataka News Network ದೇಶ - ವಿದೇಶ
ನವದೆಹಲಿ, ಏ.15 : ಕಳೆದ ವರ್ಷ ಕೋವಿಡ್ 19 ಸೋಂಕು ಹೆಚ್ಚಳವಾದ ಹಿನ್ನೆಲೆಯಲ್ಲಿ ಅನಾರೋಗ್ಯದ ಕಾರಣದಿಂದ ತಿಹಾರ್ ಜೈಲಿನಿಂದ ಪೆರೋಲ್ ಮೇಲೆ 6,740 ಮಂದಿ ವಿಚಾರಣಾಧೀನ ಕೈದಿಗಳು ಬಿಡುಗಡೆಗೊಂಡಿದ್ದು, ಇದರಲ್ಲಿ 3,468 ಕೈದಿಗಳು ನಾಪತ್ತೆಯಾಗಿರುವುದಾಗಿ ಜೈಲಿನ ಅಧಿಕಾರಿಗಳು ತಿಳಿಸಿದ್ದು, ಅವರ ಪತ್ತೆಗಾಗಿ ದೆಹಲಿ ಪೊಲೀಸರ ನೆರವು ಕೋರಲಾಗಿದೆ ಎಂದು ವರದಿ ತಿಳಿಸಿದೆ.
ಪೆರೋಲ್ ಮೇಲೆ ಆರೋಪಿಗಳು, ವಿಚಾರಣಾಧೀನ ಕೈದಿಗಳು ಹೊರ ಹೋಗಿದ್ದು, ಇವರು ಎಚ್ ಐವಿ, ಕ್ಯಾನ್ಸರ್, ಕಿಡ್ನಿ ಸಮಸ್ಯೆ, ಹೆಪಟೈಟೀಸ್ ಬಿ (ಸಿ), ಅಸ್ತಮಾ ಮತ್ತು ಟಿಬಿಯಂತಹ ಕಾಯಿಲೆಯಿಂದ ಬಳಲುತ್ತಿದ್ದರು. ದಕ್ಷಿಣ ಏಷ್ಯಾದ ಅತೀ ದೊಡ್ಡ ಜೈಲು ಸಂಕೀರ್ಣಗಳಲ್ಲಿ ಒಂದಾಗಿರುವ ತಿಹಾರ್ ಜೈಲಿನಲ್ಲಿ 10,026 ಕೈದಿಗಳನ್ನು ಇರಿಸಬಹುದಾಗಿದೆ ಎಂದು ವರದಿ ತಿಳಿಸಿದೆ.

ದೆಹಲಿಯ ತಿಹಾರ್, ಮಾಂಡೋಲಿ ಮತ್ತು ರೋಹಿಣಿ ಜೈಲುಗಳಿಂದ 1,184 ಆರೋಪಿಗಳನ್ನು ಕೋವಿಡ್ ಪೆರೋಲ್ ಮೇಲೆ ಬಿಡುಗಡೆಗೊಳಿಸಲಾಗಿತ್ತು. ಆರಂಭಿಕ ಎಂಟು ವಾರಗಳ ಗಡುವಿನ ಮೇಲೆ ಬಿಡುಗಡೆ ಮಾಡಲಾಗಿದ್ದು, ನಂತರ ಸಮಯಕ್ಕೆ ತಕ್ಕಂತೆ ಅವಧಿಯನ್ನು ಮುಂದುವರಿಸಲಾಗಿತ್ತು ಎಂದು ಜೈಲಿನ ಮೂಲಗಳು ವಿವರಿಸಿದೆ.

ಪೆರೋಲ್ ಮೇಲೆ ಹೋದ ಕೈದಿಗಳು ಫೆಬ್ರುವರಿ 7 ಮತ್ತು ಮಾರ್ಚ್ 6ರ ನಡುವೆ ಶರಣಾಗಬೇಕಿತ್ತು. ಆದರೆ 1,184 ಕೈದಿಗಳ ಪೈಕಿ 112 ಕೈದಿಗಳು ನಾಪತ್ತೆಯಾಗಿದ್ದಾರೆ. ಜೈಲಿನ ಅಧಿಕಾರಿಗಳು ಆರೋಪಿತರ ಕುಟುಂಬದ ಸದಸ್ಯರನ್ನು ಭೇಟಿಯಾದಾಗ, ಕೈದಿಗಳು ಮನೆಯಲ್ಲಿ ಇಲ್ಲ ಎಂದು ತಿಳಿಸಿರುವುದಾಗಿ ವರದಿ ಹೇಳಿದೆ.
ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ 5,556 ವಿಚಾರಣಾಧೀನ ಕೈದಿಗಳ ಪೈಕಿ ಕೇವಲ 2,200 ಕೈದಿಗಳು ಮಾತ್ರ ವಾಪಸ್ ಆಗಿರುವುದಾಗಿ ಜೈಲಿನ ಅಧಿಕಾರಿಗಳು ತಿಳಿಸಿದ್ದಾರೆ. 2021ರ ಮಾರ್ಚ್ 6ರಂದು ಕೈದಿಗಳು ಶರಣಾಗುವ ಪ್ರಕ್ರಿಯೆ ಆರಂಭಿಸಲಾಗಿತ್ತು, ಆದರೆ ಈವರೆಗೆ 3,468 ಕೈದಿಗಳು ನಾಪತ್ತೆಯಾಗಿರುವುದಾಗಿ ತಿಹಾರ್ ಜೈಲಿನ ಅಧಿಕಾರಿಗಳು ತಿಳಿಸಿದ್ದಾರೆ.
Of the 6,740 prisoners at Tihar Jail who were released on parole last year in the wake of the Covid-19 pandemic, 3,468 have gone “missing”. Jail authorities have now approached the Delhi Police to help trace them.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm