ಬ್ರೇಕಿಂಗ್ ನ್ಯೂಸ್
15-04-21 05:27 pm Headline Karnataka News Network ದೇಶ - ವಿದೇಶ
ನವದೆಹಲಿ, ಏ.15 : ಕಳೆದ ವರ್ಷ ಕೋವಿಡ್ 19 ಸೋಂಕು ಹೆಚ್ಚಳವಾದ ಹಿನ್ನೆಲೆಯಲ್ಲಿ ಅನಾರೋಗ್ಯದ ಕಾರಣದಿಂದ ತಿಹಾರ್ ಜೈಲಿನಿಂದ ಪೆರೋಲ್ ಮೇಲೆ 6,740 ಮಂದಿ ವಿಚಾರಣಾಧೀನ ಕೈದಿಗಳು ಬಿಡುಗಡೆಗೊಂಡಿದ್ದು, ಇದರಲ್ಲಿ 3,468 ಕೈದಿಗಳು ನಾಪತ್ತೆಯಾಗಿರುವುದಾಗಿ ಜೈಲಿನ ಅಧಿಕಾರಿಗಳು ತಿಳಿಸಿದ್ದು, ಅವರ ಪತ್ತೆಗಾಗಿ ದೆಹಲಿ ಪೊಲೀಸರ ನೆರವು ಕೋರಲಾಗಿದೆ ಎಂದು ವರದಿ ತಿಳಿಸಿದೆ.
ಪೆರೋಲ್ ಮೇಲೆ ಆರೋಪಿಗಳು, ವಿಚಾರಣಾಧೀನ ಕೈದಿಗಳು ಹೊರ ಹೋಗಿದ್ದು, ಇವರು ಎಚ್ ಐವಿ, ಕ್ಯಾನ್ಸರ್, ಕಿಡ್ನಿ ಸಮಸ್ಯೆ, ಹೆಪಟೈಟೀಸ್ ಬಿ (ಸಿ), ಅಸ್ತಮಾ ಮತ್ತು ಟಿಬಿಯಂತಹ ಕಾಯಿಲೆಯಿಂದ ಬಳಲುತ್ತಿದ್ದರು. ದಕ್ಷಿಣ ಏಷ್ಯಾದ ಅತೀ ದೊಡ್ಡ ಜೈಲು ಸಂಕೀರ್ಣಗಳಲ್ಲಿ ಒಂದಾಗಿರುವ ತಿಹಾರ್ ಜೈಲಿನಲ್ಲಿ 10,026 ಕೈದಿಗಳನ್ನು ಇರಿಸಬಹುದಾಗಿದೆ ಎಂದು ವರದಿ ತಿಳಿಸಿದೆ.

ದೆಹಲಿಯ ತಿಹಾರ್, ಮಾಂಡೋಲಿ ಮತ್ತು ರೋಹಿಣಿ ಜೈಲುಗಳಿಂದ 1,184 ಆರೋಪಿಗಳನ್ನು ಕೋವಿಡ್ ಪೆರೋಲ್ ಮೇಲೆ ಬಿಡುಗಡೆಗೊಳಿಸಲಾಗಿತ್ತು. ಆರಂಭಿಕ ಎಂಟು ವಾರಗಳ ಗಡುವಿನ ಮೇಲೆ ಬಿಡುಗಡೆ ಮಾಡಲಾಗಿದ್ದು, ನಂತರ ಸಮಯಕ್ಕೆ ತಕ್ಕಂತೆ ಅವಧಿಯನ್ನು ಮುಂದುವರಿಸಲಾಗಿತ್ತು ಎಂದು ಜೈಲಿನ ಮೂಲಗಳು ವಿವರಿಸಿದೆ.

ಪೆರೋಲ್ ಮೇಲೆ ಹೋದ ಕೈದಿಗಳು ಫೆಬ್ರುವರಿ 7 ಮತ್ತು ಮಾರ್ಚ್ 6ರ ನಡುವೆ ಶರಣಾಗಬೇಕಿತ್ತು. ಆದರೆ 1,184 ಕೈದಿಗಳ ಪೈಕಿ 112 ಕೈದಿಗಳು ನಾಪತ್ತೆಯಾಗಿದ್ದಾರೆ. ಜೈಲಿನ ಅಧಿಕಾರಿಗಳು ಆರೋಪಿತರ ಕುಟುಂಬದ ಸದಸ್ಯರನ್ನು ಭೇಟಿಯಾದಾಗ, ಕೈದಿಗಳು ಮನೆಯಲ್ಲಿ ಇಲ್ಲ ಎಂದು ತಿಳಿಸಿರುವುದಾಗಿ ವರದಿ ಹೇಳಿದೆ.
ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ 5,556 ವಿಚಾರಣಾಧೀನ ಕೈದಿಗಳ ಪೈಕಿ ಕೇವಲ 2,200 ಕೈದಿಗಳು ಮಾತ್ರ ವಾಪಸ್ ಆಗಿರುವುದಾಗಿ ಜೈಲಿನ ಅಧಿಕಾರಿಗಳು ತಿಳಿಸಿದ್ದಾರೆ. 2021ರ ಮಾರ್ಚ್ 6ರಂದು ಕೈದಿಗಳು ಶರಣಾಗುವ ಪ್ರಕ್ರಿಯೆ ಆರಂಭಿಸಲಾಗಿತ್ತು, ಆದರೆ ಈವರೆಗೆ 3,468 ಕೈದಿಗಳು ನಾಪತ್ತೆಯಾಗಿರುವುದಾಗಿ ತಿಹಾರ್ ಜೈಲಿನ ಅಧಿಕಾರಿಗಳು ತಿಳಿಸಿದ್ದಾರೆ.
Of the 6,740 prisoners at Tihar Jail who were released on parole last year in the wake of the Covid-19 pandemic, 3,468 have gone “missing”. Jail authorities have now approached the Delhi Police to help trace them.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm