ಬ್ರೇಕಿಂಗ್ ನ್ಯೂಸ್
15-04-21 05:27 pm Headline Karnataka News Network ದೇಶ - ವಿದೇಶ
ನವದೆಹಲಿ, ಏ.15 : ಕಳೆದ ವರ್ಷ ಕೋವಿಡ್ 19 ಸೋಂಕು ಹೆಚ್ಚಳವಾದ ಹಿನ್ನೆಲೆಯಲ್ಲಿ ಅನಾರೋಗ್ಯದ ಕಾರಣದಿಂದ ತಿಹಾರ್ ಜೈಲಿನಿಂದ ಪೆರೋಲ್ ಮೇಲೆ 6,740 ಮಂದಿ ವಿಚಾರಣಾಧೀನ ಕೈದಿಗಳು ಬಿಡುಗಡೆಗೊಂಡಿದ್ದು, ಇದರಲ್ಲಿ 3,468 ಕೈದಿಗಳು ನಾಪತ್ತೆಯಾಗಿರುವುದಾಗಿ ಜೈಲಿನ ಅಧಿಕಾರಿಗಳು ತಿಳಿಸಿದ್ದು, ಅವರ ಪತ್ತೆಗಾಗಿ ದೆಹಲಿ ಪೊಲೀಸರ ನೆರವು ಕೋರಲಾಗಿದೆ ಎಂದು ವರದಿ ತಿಳಿಸಿದೆ.
ಪೆರೋಲ್ ಮೇಲೆ ಆರೋಪಿಗಳು, ವಿಚಾರಣಾಧೀನ ಕೈದಿಗಳು ಹೊರ ಹೋಗಿದ್ದು, ಇವರು ಎಚ್ ಐವಿ, ಕ್ಯಾನ್ಸರ್, ಕಿಡ್ನಿ ಸಮಸ್ಯೆ, ಹೆಪಟೈಟೀಸ್ ಬಿ (ಸಿ), ಅಸ್ತಮಾ ಮತ್ತು ಟಿಬಿಯಂತಹ ಕಾಯಿಲೆಯಿಂದ ಬಳಲುತ್ತಿದ್ದರು. ದಕ್ಷಿಣ ಏಷ್ಯಾದ ಅತೀ ದೊಡ್ಡ ಜೈಲು ಸಂಕೀರ್ಣಗಳಲ್ಲಿ ಒಂದಾಗಿರುವ ತಿಹಾರ್ ಜೈಲಿನಲ್ಲಿ 10,026 ಕೈದಿಗಳನ್ನು ಇರಿಸಬಹುದಾಗಿದೆ ಎಂದು ವರದಿ ತಿಳಿಸಿದೆ.

ದೆಹಲಿಯ ತಿಹಾರ್, ಮಾಂಡೋಲಿ ಮತ್ತು ರೋಹಿಣಿ ಜೈಲುಗಳಿಂದ 1,184 ಆರೋಪಿಗಳನ್ನು ಕೋವಿಡ್ ಪೆರೋಲ್ ಮೇಲೆ ಬಿಡುಗಡೆಗೊಳಿಸಲಾಗಿತ್ತು. ಆರಂಭಿಕ ಎಂಟು ವಾರಗಳ ಗಡುವಿನ ಮೇಲೆ ಬಿಡುಗಡೆ ಮಾಡಲಾಗಿದ್ದು, ನಂತರ ಸಮಯಕ್ಕೆ ತಕ್ಕಂತೆ ಅವಧಿಯನ್ನು ಮುಂದುವರಿಸಲಾಗಿತ್ತು ಎಂದು ಜೈಲಿನ ಮೂಲಗಳು ವಿವರಿಸಿದೆ.

ಪೆರೋಲ್ ಮೇಲೆ ಹೋದ ಕೈದಿಗಳು ಫೆಬ್ರುವರಿ 7 ಮತ್ತು ಮಾರ್ಚ್ 6ರ ನಡುವೆ ಶರಣಾಗಬೇಕಿತ್ತು. ಆದರೆ 1,184 ಕೈದಿಗಳ ಪೈಕಿ 112 ಕೈದಿಗಳು ನಾಪತ್ತೆಯಾಗಿದ್ದಾರೆ. ಜೈಲಿನ ಅಧಿಕಾರಿಗಳು ಆರೋಪಿತರ ಕುಟುಂಬದ ಸದಸ್ಯರನ್ನು ಭೇಟಿಯಾದಾಗ, ಕೈದಿಗಳು ಮನೆಯಲ್ಲಿ ಇಲ್ಲ ಎಂದು ತಿಳಿಸಿರುವುದಾಗಿ ವರದಿ ಹೇಳಿದೆ.
ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ 5,556 ವಿಚಾರಣಾಧೀನ ಕೈದಿಗಳ ಪೈಕಿ ಕೇವಲ 2,200 ಕೈದಿಗಳು ಮಾತ್ರ ವಾಪಸ್ ಆಗಿರುವುದಾಗಿ ಜೈಲಿನ ಅಧಿಕಾರಿಗಳು ತಿಳಿಸಿದ್ದಾರೆ. 2021ರ ಮಾರ್ಚ್ 6ರಂದು ಕೈದಿಗಳು ಶರಣಾಗುವ ಪ್ರಕ್ರಿಯೆ ಆರಂಭಿಸಲಾಗಿತ್ತು, ಆದರೆ ಈವರೆಗೆ 3,468 ಕೈದಿಗಳು ನಾಪತ್ತೆಯಾಗಿರುವುದಾಗಿ ತಿಹಾರ್ ಜೈಲಿನ ಅಧಿಕಾರಿಗಳು ತಿಳಿಸಿದ್ದಾರೆ.
Of the 6,740 prisoners at Tihar Jail who were released on parole last year in the wake of the Covid-19 pandemic, 3,468 have gone “missing”. Jail authorities have now approached the Delhi Police to help trace them.
20-03-26 12:02 pm
HK News Staffer
ಹುಬ್ಬಳ್ಳಿ ; ರೀಲ್ಸ್ ಹುಚ್ಚಾಟಕ್ಕೆ 15 ವರ್ಷದ ಬಿಜೆಪ...
20-03-26 12:00 pm
ಶಿವಮೊಗ್ಗದ ಹುಲಿ ಸಿಂಹ ಧಾಮದಲ್ಲಿ ನೀರಾನೆ ದಾಳಿ ; 26...
20-03-26 10:03 am
ಗ್ಯಾಸ್ ಸಿಲಿಂಡರ್ ಅಭಾವ; ಬಹುತೇಕ ಹೋಟೆಲ್ ಗಳು ಬಂದ್...
19-03-26 05:01 pm
DG Ramachandra Rao, Sandesh PG: ರಕ್ಷಕರೇ ಭಕ್ಷಕ...
18-03-26 11:00 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
20-03-26 03:39 pm
HK News Staffer
ದ.ಕ. ಜಿಲ್ಲೆಯಲ್ಲಿ ಮಾರ್ಚ್ 20ರಂದೇ ಈದುಲ್ ಫಿತರ್ ಹಬ...
19-03-26 11:30 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣಕ್ಕೆ ಟ್ವಿಸ್ಟ್!...
19-03-26 05:27 pm
ಗ್ಯಾಸ್ ಬಿಲ್ ನಲ್ಲಿ 20 ರು. ಬಾಕಿ ಇದೆಯೆಂದು ಸೈಬರ್...
19-03-26 02:51 pm
ಮೂಡುಬಿದ್ರೆ ; ಕೋಳಿ ಅಂಕಕ್ಕೆ ಪೊಲೀಸ್ ದಾಳಿ, ಆರು ಮಂ...
19-03-26 01:05 pm
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm