ಬ್ರೇಕಿಂಗ್ ನ್ಯೂಸ್
15-04-21 09:29 pm Headline Karnataka News Network ದೇಶ - ವಿದೇಶ
ನವದೆಹಲಿ, ಏಪ್ರಿಲ್ 15: ದೇಶದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ನೀಟ್ ಪಿಜಿ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ತಿಳಿಸಿದ್ದಾರೆ.
ದೇಶದಲ್ಲಿ ದಿನೇ ದಿನೇ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವುದರಿಂದ ಸಿಬಿಎಸ್ಇ 10ನೇ ತರಗತಿ ಹಾಗೂ 12ನೇ ತರಗತಿ ಪರೀಕ್ಷೆಯನ್ನು ಮುಂದೂಡಲಾಗಿತ್ತು. ಈ ಎಲ್ಲಾ ಪರೀಕ್ಷೆಗಳನ್ನು ಮುಂದೂಡಲಾಗಿದೆ ಆದರೆ ನೀಟ್ ಪಿಜಿ ಪರೀಕ್ಷೆಯನ್ನು ಮಾತ್ರ ಯಾಕೆ ಮುಂದೂಡುತ್ತಿಲ್ಲ ಎನ್ನುವ ಪ್ರಶ್ನೆಗಳು ಕೇಳಿಬಂದಿದ್ದವು.
ಇದೀಗ ನೀಟ್ ಪಿಜಿ ಪರೀಕ್ಷೆಗಳನ್ನು ಕೂಡ ಮುಂದೂಡಲಾಗಿದೆ. ಏಪ್ರಿಲ್ 18 ರಂದು ಪರೀಕ್ಷೆ ನಡೆಯಬೇಕಿತ್ತು. ಕೊರೊನಾ ಪರಿಸ್ಥಿತಿ ನೋಡಿಕೊಂಡು ಮುಂದಿನ ಪರೀಕ್ಷೆ ದಿನಾಂಕವನ್ನು ನಿಗದಿಮಾಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಈ ಕುರಿತು ಮಾತನಾಡಿರುವ ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಸ್ನಾತಕೋತ್ತರ ನೀಟ್ ಪರೀಕ್ಷೆ ನಡೆಸಲು ಇದು ಸರಿಯಾದ ಸಮಯವೇ ಎಂದು ಪ್ರಶ್ನಿಸಿದ್ದರು. ನೀಟ್ ಪಿಜಿ ಪರೀಕ್ಷೆ ಏಪ್ರಿಲ್ 18 ರಂದು ನಿಗದಿಯಾಗಿದೆ.
ಸ್ಟಾಲಿನ್ ಟ್ವೀಟ್ ಮಾಡಿದ್ದು, ಕೊರೊನಾ ಎರಡನೇ ಅಲೆಯ ಕಾರಣದಿಂದಾಗಿ ಸಿಬಿಎಸ್ಇ 10ನೇ ತರಗತಿ ಪರೀಕ್ಷೆಗಳನ್ನು ರದ್ದುಪಡಿಸಲಾಗಿದೆ. ಇದೇ ಸಮಯದಲ್ಲಿ ನೀಟ್ ಪಿಜಿ ಪರೀಕ್ಷೆಗಳನ್ನು ನಡೆಸುವುದು ಎಷ್ಟು ಸಮಂಜಸ ಎಂದಿದ್ದರು.

ಹಾಗೆಯೇ ದೇಶಾದ್ಯಂತ ಕೋವಿಡ್ ಪ್ರಕರಣಗಳಲ್ಲಿ ಭಾರಿ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ನೀಟ್-ಪಿಜಿ ವೈದ್ಯಕೀಯ ಪ್ರವೇಶ ಪರೀಕ್ಷೆಗಳನ್ನು ಮುಂದೂಡುವಂತೆ ವಿದ್ಯಾರ್ಥಿ ವೈದ್ಯರ ಗುಂಪೊಂದು ಸುಪ್ರೀಂಕೋರ್ಟ್ಗೆ ಗುರುವಾರ ಅರ್ಜಿ ಸಲ್ಲಿಸಿದೆ.
#NEETPG2021 POSTPONED !
— Dr Harsh Vardhan (@drharshvardhan) April 15, 2021
Health & safety of our young doctors is paramount.
Next date to be decided after reviewing the situation later. @PMOIndia @MoHFW_INDIA #Unite2FightCorona pic.twitter.com/5FFzcje3iB
The NEET-PG medical entrance exams - scheduled for Sunday - have been postponed "in light of the surge in COVID-19 cases", Union Health Minister Dr Harsh Vardhan tweeted Thursday evening.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 07:04 pm
HK News Staffer
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm