ಬ್ರೇಕಿಂಗ್ ನ್ಯೂಸ್
15-04-21 10:15 pm Headline Karnataka News Network ದೇಶ - ವಿದೇಶ
ಮುಂಬೈ, ಎ 15: ಅಮೆರಿಕದ ಬ್ಯಾಂಕಿಂಗ್ ಕಂಪನಿಯಾದ ‘ಸಿಟಿಬ್ಯಾಂಕ್’ ಭಾರತದಲ್ಲಿ ಗ್ರಾಹಕ ಬ್ಯಾಂಕಿಂಗ್ ಸೇವೆಗಳನ್ನು ಸ್ಥಗಿತಗೊಳಿಸುತ್ತಿರುವುದಾಗಿ ಗುರುವಾರ ಪ್ರಕಟಿಸಿದೆ. ಸಿಟಿ ಬ್ಯಾಂಕ್ ಭಾರತದಲ್ಲಿ ಕ್ರೆಡಿಟ್ ಕಾರ್ಡ್, ಗೃಹ ಸಾಲ, ಸಂಪತ್ತು ನಿರ್ವಹಣೆ ಸೇವೆಗಳನ್ನು ನೀಡುತ್ತಿದೆ.
ದೇಶದಲ್ಲಿ ಸಿಟಿ ಬ್ಯಾಂಕ್ ಒಟ್ಟು 35 ಶಾಖೆಗಳನ್ನು ಹೊಂದಿದೆ. ಸರಿಸುಮಾರು ನಾಲ್ಕು ಸಾವಿರ ನೌಕರರು ಸಂಸ್ಥೆಯ ಗ್ರಾಹಕ ಬ್ಯಾಂಕಿಂಗ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದಾರೆ.
ಗ್ರಾಹಕ ಬ್ಯಾಂಕಿಂಗ್ ಸೇವೆಗಳನ್ನು ಒಟ್ಟು 13 ದೇಶಗಳಲ್ಲಿ ಸ್ಥಗಿತಗೊಳಿಸುವ ತೀರ್ಮಾನವನ್ನು ಸಿಟಿಬ್ಯಾಂಕ್ ಕಂಪನಿ ಗುರುವಾರ ಪ್ರಕಟಿಸಿತು. ‘ಈ ದೇಶಗಳಲ್ಲಿ ನಾವು ಇತರರಿಗೆ ಸ್ಪರ್ಧೆ ನೀಡಲು ಅಗತ್ಯವಿರುವಷ್ಟು ಬೃಹತ್ ಆಗಿ ಬೆಳೆದಿಲ್ಲ’ ಎಂಬ ಕಾರಣಕ್ಕೆ ಸೇವೆಗಳನ್ನು ಸ್ಥಗಿತಗೊಳಿಸಲಾಗುತ್ತಿದೆ ಎಂದು ಸಿಟಿಬ್ಯಾಂಕ್ನ ಜಾಗತಿಕ ವಹಿವಾಟುಗಳ ಸಿಇಒ ಜೇನ್ ಫ್ರೇಸರ್ ಹೇಳಿದ್ದಾರೆ.
ಸಿಟಿಬ್ಯಾಂಕ್ ತನ್ನ ಸೇವೆಗಳನ್ನು ಸ್ಥಗಿತಗೊಳಿಸಲು ಕಾನೂನು ಜಾರಿ ಸಂಸ್ಥೆಗಳ ಅನುಮೋದನೆ ಅಗತ್ಯ. ‘ನಮ್ಮ ಚಟುವಟಿಕೆಗಳಲ್ಲಿ ತಕ್ಷಣಕ್ಕೆ ಯಾವುದೇ ಬದಲಾವಣೆ ಇಲ್ಲ. ಈಗ ಮಾಡಿರುವ ಘೋಷಣೆಯಿಂದಾಗಿ ಉದ್ಯೋಗಿಗಳ ಮೇಲೆ ತಕ್ಷಣಕ್ಕೆ ಯಾವುದೇ ಪರಿಣಾಮ ಉಂಟಾಗುವುದಿಲ್ಲ. ನಾವು ಸದ್ಯಕ್ಕೆ ನಮ್ಮ ಗ್ರಾಹಕರಿಗೆ ಸೇವೆ ಒದಗಿಸುವುದನ್ನು ಮುಂದುವರಿಸುತ್ತೇವೆ’ ಎಂದು ಸಿಟಿ ಇಂಡಿಯಾದ ಮುಖ್ಯ ಕಾರ್ಯನಿರ್ವಾಹಕ ಅಶು ಖುಲ್ಲರ್ ಹೇಳಿದ್ದಾರೆ.
ಸಿಟಿ ಬ್ಯಾಂಕ್ 1985ರಿಂದ ಭಾರತದಲ್ಲಿ ಗ್ರಾಹಕ ಬ್ಯಾಂಕಿಂಗ್ ಸೇವೆಗಳನ್ನು ಒದಗಿಸುತ್ತಿದೆ. ಮುಂಬೈ, ಪುಣೆ, ಬೆಂಗಳೂರು, ಚೆನ್ನೈ ಮತ್ತು ಗುರುಗ್ರಾಮದಲ್ಲಿ ಇರುವ ತನ್ನ ಕೇಂದ್ರಗಳಿಂದ ಜಾಗತಿಕ ವಾಣಿಜ್ಯ ವಹಿವಾಟುಗಳಿಗೆ ಬೆಂಬಲ ನೀಡುವ ಕೆಲಸವನ್ನು ಕಂಪನಿ ಮುಂದುವರಿಸಲಿದೆ.
American banking major Citibank on Thursday announced that it will exit from the consumer banking business in India as part of a global strategy. The business comprises credit cards, retail banking, home loans and wealth management.
07-09-25 07:43 pm
Bangalore Correspondent
Fine, Violation, Home Minister: ಮುಖ್ಯಸ್ಥರಿಗೂ...
07-09-25 10:17 am
Mandya Suicide, Marriage: ಮದುವೆ ಕ್ಯಾನ್ಸಲ್ ಆಗಿ...
07-09-25 10:11 am
Sirsi Airgun, Murder, Crime: ಶಿರಸಿ; ಏರ್ಗನ್ ಗ...
06-09-25 08:28 pm
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
07-09-25 08:33 pm
HK News Desk
UPI Transaction Limit: ಯುಪಿಐ ಪಾವತಿ ಮಿತಿ ಹೆಚ್ಚ...
06-09-25 10:34 am
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
07-09-25 03:34 pm
Mangalore Correspondent
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm