ಬ್ರೇಕಿಂಗ್ ನ್ಯೂಸ್
15-04-21 10:15 pm Headline Karnataka News Network ದೇಶ - ವಿದೇಶ
ಮುಂಬೈ, ಎ 15: ಅಮೆರಿಕದ ಬ್ಯಾಂಕಿಂಗ್ ಕಂಪನಿಯಾದ ‘ಸಿಟಿಬ್ಯಾಂಕ್’ ಭಾರತದಲ್ಲಿ ಗ್ರಾಹಕ ಬ್ಯಾಂಕಿಂಗ್ ಸೇವೆಗಳನ್ನು ಸ್ಥಗಿತಗೊಳಿಸುತ್ತಿರುವುದಾಗಿ ಗುರುವಾರ ಪ್ರಕಟಿಸಿದೆ. ಸಿಟಿ ಬ್ಯಾಂಕ್ ಭಾರತದಲ್ಲಿ ಕ್ರೆಡಿಟ್ ಕಾರ್ಡ್, ಗೃಹ ಸಾಲ, ಸಂಪತ್ತು ನಿರ್ವಹಣೆ ಸೇವೆಗಳನ್ನು ನೀಡುತ್ತಿದೆ.
ದೇಶದಲ್ಲಿ ಸಿಟಿ ಬ್ಯಾಂಕ್ ಒಟ್ಟು 35 ಶಾಖೆಗಳನ್ನು ಹೊಂದಿದೆ. ಸರಿಸುಮಾರು ನಾಲ್ಕು ಸಾವಿರ ನೌಕರರು ಸಂಸ್ಥೆಯ ಗ್ರಾಹಕ ಬ್ಯಾಂಕಿಂಗ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದಾರೆ.
ಗ್ರಾಹಕ ಬ್ಯಾಂಕಿಂಗ್ ಸೇವೆಗಳನ್ನು ಒಟ್ಟು 13 ದೇಶಗಳಲ್ಲಿ ಸ್ಥಗಿತಗೊಳಿಸುವ ತೀರ್ಮಾನವನ್ನು ಸಿಟಿಬ್ಯಾಂಕ್ ಕಂಪನಿ ಗುರುವಾರ ಪ್ರಕಟಿಸಿತು. ‘ಈ ದೇಶಗಳಲ್ಲಿ ನಾವು ಇತರರಿಗೆ ಸ್ಪರ್ಧೆ ನೀಡಲು ಅಗತ್ಯವಿರುವಷ್ಟು ಬೃಹತ್ ಆಗಿ ಬೆಳೆದಿಲ್ಲ’ ಎಂಬ ಕಾರಣಕ್ಕೆ ಸೇವೆಗಳನ್ನು ಸ್ಥಗಿತಗೊಳಿಸಲಾಗುತ್ತಿದೆ ಎಂದು ಸಿಟಿಬ್ಯಾಂಕ್ನ ಜಾಗತಿಕ ವಹಿವಾಟುಗಳ ಸಿಇಒ ಜೇನ್ ಫ್ರೇಸರ್ ಹೇಳಿದ್ದಾರೆ.

ಸಿಟಿಬ್ಯಾಂಕ್ ತನ್ನ ಸೇವೆಗಳನ್ನು ಸ್ಥಗಿತಗೊಳಿಸಲು ಕಾನೂನು ಜಾರಿ ಸಂಸ್ಥೆಗಳ ಅನುಮೋದನೆ ಅಗತ್ಯ. ‘ನಮ್ಮ ಚಟುವಟಿಕೆಗಳಲ್ಲಿ ತಕ್ಷಣಕ್ಕೆ ಯಾವುದೇ ಬದಲಾವಣೆ ಇಲ್ಲ. ಈಗ ಮಾಡಿರುವ ಘೋಷಣೆಯಿಂದಾಗಿ ಉದ್ಯೋಗಿಗಳ ಮೇಲೆ ತಕ್ಷಣಕ್ಕೆ ಯಾವುದೇ ಪರಿಣಾಮ ಉಂಟಾಗುವುದಿಲ್ಲ. ನಾವು ಸದ್ಯಕ್ಕೆ ನಮ್ಮ ಗ್ರಾಹಕರಿಗೆ ಸೇವೆ ಒದಗಿಸುವುದನ್ನು ಮುಂದುವರಿಸುತ್ತೇವೆ’ ಎಂದು ಸಿಟಿ ಇಂಡಿಯಾದ ಮುಖ್ಯ ಕಾರ್ಯನಿರ್ವಾಹಕ ಅಶು ಖುಲ್ಲರ್ ಹೇಳಿದ್ದಾರೆ.
ಸಿಟಿ ಬ್ಯಾಂಕ್ 1985ರಿಂದ ಭಾರತದಲ್ಲಿ ಗ್ರಾಹಕ ಬ್ಯಾಂಕಿಂಗ್ ಸೇವೆಗಳನ್ನು ಒದಗಿಸುತ್ತಿದೆ. ಮುಂಬೈ, ಪುಣೆ, ಬೆಂಗಳೂರು, ಚೆನ್ನೈ ಮತ್ತು ಗುರುಗ್ರಾಮದಲ್ಲಿ ಇರುವ ತನ್ನ ಕೇಂದ್ರಗಳಿಂದ ಜಾಗತಿಕ ವಾಣಿಜ್ಯ ವಹಿವಾಟುಗಳಿಗೆ ಬೆಂಬಲ ನೀಡುವ ಕೆಲಸವನ್ನು ಕಂಪನಿ ಮುಂದುವರಿಸಲಿದೆ.
American banking major Citibank on Thursday announced that it will exit from the consumer banking business in India as part of a global strategy. The business comprises credit cards, retail banking, home loans and wealth management.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 07:04 pm
HK News Staffer
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm