ಬ್ರೇಕಿಂಗ್ ನ್ಯೂಸ್
17-04-21 12:52 pm Headline Karnataka News Network ದೇಶ - ವಿದೇಶ
ಹರಿದ್ವಾರ, ಏಪ್ರಿಲ್ 17: ಉತ್ತರಾಖಂಡದ ಹರಿದ್ವಾರದಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಭಾಗವಹಿಸಿದ್ದ ಹಲವು ಸಾಧುಗಳಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ. ಕುಂಭಮೇಳ ಈಗ ಸಾಂಕೇತಿಕವಾಗಿರಬೇಕಿದೆ. ಇದು ಕೊರೊನಾ ವಿರುದ್ಧದ ಭಾರತದ ಹೋರಾಟಕ್ಕೆ ಸಹಕಾರಿಯಾಗಲಿದೆ ಎಂದು ಹೇಳಿದ್ದಾರೆ.
ಸ್ವಾಮಿ ಅವದೇಶಾನಂದ ಗಿರಿ ಅವರೊಂದಿಗೆ ಮಾತನಾಡಿದ ನಂತರ ಮೋದಿ ಟ್ವೀಟ್ ಮಾಡಿದ್ದಾರೆ. ಶುಕ್ರವಾರ ಕುಂಭಮೇಳದಲ್ಲಿ ಭಾಗವಹಿಸಿದ್ದ 30 ಸಾಧುಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿತ್ತು. ಇಬ್ಬರು ಮಹಾಮಂಡಲೇಶ್ವರ (ಮುಖ್ಯ ಸಾಧುಗಳು) ಸೋಂಕಿನಿಂದಾಗಿ ಮೃತಪಟ್ಟಿದ್ದರು.
ಕುಂಭಮೇಳದಲ್ಲಿ ಕೊರೊನಾ ಸೋಂಕು ಹೆಚ್ಚಿರುವ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಮೋದಿ, "ಫೋನ್ ನಲ್ಲಿ ಸ್ವಾಮಿ ಅವದೇಶಾನಂದ ಗಿರಿ ಜೀ ಅವರೊಂದಿಗೆ ಮಾತನಾಡಿದೆ. ಎಲ್ಲಾ ಸಾಧುಗಳ ಆರೋಗ್ಯದ ಕುರಿತು ವಿಚಾರಿಸಿದ್ದೇನೆ. ಸಾಧುಗಳ ಆರೋಗ್ಯ ಸುಧಾರಣೆಗೆ ಎಲ್ಲಾ ವ್ಯವಸ್ಥೆ ಮಾಡಲಾಗಿದೆ" ಎಂದು ಹೇಳಿದ್ದಾರೆ. ಸದ್ಯಕ್ಕೆ ಕುಂಭಮೇಳದಲ್ಲಿ ಎರಡು ಪವಿತ್ರ ಸ್ನಾನಗಳು ಸಂಪನ್ನವಾಗಿವೆ. ಇದೀಗ ದೇಶದಲ್ಲಿ ಕೊರೊನಾ ಸೋಂಕು ಮಿತಿ ಮೀರುತ್ತಿರುವುದರಿಂದ ಹಾಗೂ ಕುಂಭಮೇಳದಲ್ಲಿಯೂ ಕೊರೊನಾ ಸೋಂಕಿನ ಪ್ರಮಾಣ ಏರಿಕೆಯಾಗುತ್ತಿರುವ ಕಾರಣ ಕುಂಭಮೇಳವನ್ನು ಸಾಂಕೇತಿಕವಾಗಿ ನಡೆಸಬೇಕೆಂದು ಎಲ್ಲರಲ್ಲಿಯೂ ಮನವಿ ಮಾಡುತ್ತಿದ್ದೇನೆ. ಇದು ಕೊರೊನಾ ವಿರುದ್ಧದ ಭಾರತದ ಹೋರಾಟಕ್ಕೆ ಬಲ ನೀಡಲಿದೆ ಎಂದು ಮತ್ತೊಂದು ಟ್ವೀಟ್ ಮಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರು ಫೋನ್ ಕರೆ ಮಾಡಿದ ನಂತರ ಕುಂಭಮೇಳಕ್ಕೆ ಬರದಂತೆ ಅವದೇಶಾನಂದ ಸ್ವಾಮೀಜಿ ಕೂಡ ಮನವಿ ಮಾಡಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಪವಿತ್ರ ಸ್ನಾನದಲ್ಲಿ ಭಾಗವಹಿಸದಂತೆ ಕೇಳಿಕೊಂಡಿದ್ದಾರೆ.
ಕುಂಭಮೇಳ ಆರಂಭವಾದ ನಂತರ ವಾರದಲ್ಲಿ ಹರಿದ್ವಾರದಲ್ಲಿ ಸುಮಾರು 2000 ಕೊರೊನಾ ಪ್ರಕರಣಗಳು ದಾಖಲಾಗಿವೆ. ಪವಿತ್ರ ಸ್ನಾನದಲ್ಲಿ ಪಾಲ್ಗೊಂಡಿದ್ದ ಲಕ್ಷಾಂತರ ಭಕ್ತಾದಿಗಳು ಕೊರೊನಾ ನಿಯಮಾವಳಿಗಳನ್ನು ಪಾಲಿಸದಿರುವುದೂ ಕಂಡುಬಂದಿದೆ.
ಕೊರೊನಾ ಹಾಟ್ ಸ್ಪಾಟ್ ಆಗ್ತಿದ್ಯಾ ಕುಂಭಮೇಳ ! 1700 ಜನಕ್ಕೆ ಪಾಸಿಟಿವ್ !
ಕರ್ನಾಟಕದಿಂದ ಕುಂಭಮೇಳಕ್ಕೆ ಹೋಗಿ ಬಂದವರಿಗೆ ಕೊವಿಡ್ ಟೆಸ್ಟ್ ಕಡ್ಡಾಯ; ಆರೋಗ್ಯ ಸಚಿವ ಡಾ.ಸುಧಾಕರ್
मैंने प्रार्थना की है कि दो शाही स्नान हो चुके हैं और अब कुंभ को कोरोना के संकट के चलते प्रतीकात्मक ही रखा जाए। इससे इस संकट से लड़ाई को एक ताकत मिलेगी। @AvdheshanandG
— Narendra Modi (@narendramodi) April 17, 2021
As COVID-19 cases in the country topped over 2.3 lakh cases on Saturday, Prime Minister Narendra Modi sought a curtailment of the Kumbh Mela underway in Haridwar, suggesting to ‘akharas’ (congregations of Hindu seers) that the event be concluded with symbolic rituals.
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 07:19 pm
Mangalore Correspondent
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
ಕಲ್ಲು ಮರಳಿನ ಸಮಸ್ಯೆಯಿಂದ ಜನರ ತಲೆಗೆ ಚಪ್ಪಡಿ ಕಲ್ಲು...
14-07-25 09:55 pm
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
15-07-25 06:52 pm
Bangalore Correspondent
Mangalore, Moodbidri college, Rape, Blackmail...
15-07-25 06:07 pm
ಹಿಂದು ಯುವತಿಯರನ್ನು ಮತಾಂತರ ಮಾಡುತ್ತಿದ್ದಾನೆಂದು ಸು...
15-07-25 05:21 pm
Mangalore Police, Arrest, NITTE College Stude...
15-07-25 01:13 pm
Mangalore Crime, Police: ದುಬೈನಲ್ಲಿ ವಹಿವಾಟು ;...
15-07-25 11:38 am