ಬ್ರೇಕಿಂಗ್ ನ್ಯೂಸ್
17-04-21 09:53 pm Headline Karnataka News Network ದೇಶ - ವಿದೇಶ
ಕಾಸರಗೋಡು, ಎ.17: ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಾಸರಗೋಡು ಜಿಲ್ಲಾಡಳಿತ ನಗರ ಪ್ರದೇಶಗಳಲ್ಲಿ ಹೊಸ ರೀತಿಯ ನಿಯಂತ್ರಣ ಕ್ರಮಗಳನ್ನು ಜಾರಿಗೆ ತಂದಿದೆ. ನಗರ ಪ್ರದೇಶಗಳಿಗೆ ಬರುವ ಮಂದಿ ಕಡ್ಡಾಯ ಕೋವಿಡ್ ನೆಗೆಟಿವ್ ಸರ್ಟಿಫಿಕೇಟ್ ಹೊಂದಿರಬೇಕು ಅಥವಾ ಕೋವಿಡ್ ಲಸಿಕೆಯನ್ನು ಹಾಕಿಸಿರಬೇಕು ಎಂಬ ನಿಯಮ ಜಾರಿಗೆ ತರುತ್ತಿದೆ.
ಕಾಸರಗೋಡು ಜಿಲ್ಲೆಯ ಕಾಸರಗೋಡು ನಗರ, ಕುಂಬಳೆ, ಉಪ್ಪಳ, ಕಾಞಂಗಾಡ್, ಚೆರುವತ್ತೂರು, ನೀಲೇಶ್ವರ ನಗರಗಳಲ್ಲಿ ಈ ಹೊಸ ನಿಯಮ ಎ.24ರಿಂದ ಜಾರಿಗೆ ಬರಲಿದೆ. ಜನರು ಮಾರ್ಕೆಟ್, ಶಾಪಿಂಗ್ ಇನ್ನಿತರ ಕಾರಣಕ್ಕೆ ಎಲ್ಲೆಂದರಲ್ಲಿ ಸಂಚರಿಸುವುದು, ಸೇರುವುದನ್ನು ತಪ್ಪಿಸಲು ಜಿಲ್ಲಾಡಳಿತ ಈ ರೀತಿಯ ಕಾನೂನು ಜಾರಿಗೆ ತರಲು ನಿರ್ಧರಿಸಿದೆ.
ಕಾಸರಗೋಡು ಜಿಲ್ಲಾಧಿಕಾರಿ ಡಾ. ಸಜಿತ್ ಬಾಬು ನೇತೃತ್ವದಲ್ಲಿ ಜಿಲ್ಲಾ ವಿಪತ್ತು ನಿರ್ವಹಣೆ ಪ್ರಾಧಿಕಾರದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು ಜನರಿಗೆ ಅರಿವು ಮೂಡಿಸುವುದಕ್ಕಾಗಿ ಹೊಸ ನಿಯಮವನ್ನು ತಕ್ಷಣಕ್ಕೆ ಜಾರಿಗೆ ತರದೆ ಒಂದು ವಾರ ಕಾಲ ಸಮಯ ಕೊಡಲಾಗಿದೆ. ಅಷ್ಟರಲ್ಲಿ ಲಸಿಕೆ ಹಾಕಿಸಿಕೊಳ್ಳಬೇಕು ಅಥವಾ ಕೋವಿಡ್ ನೆಗೆಟಿವ್ ಸರ್ಟಿಫಿಕೇಟ್ ಹೊಂದಬೇಕು ಎಂದು ಸೂಚನೆ ನೀಡಲಾಗಿದೆ.
ಎ.24 ರ ಬೆಳಗ್ಗೆ 8ರಿಂದ ಹೊಸ ನೀತಿ ಜಾರಿಗೆ ಬರಲಿದ್ದು ಅಲ್ಲಲ್ಲಿ ಪೊಲೀಸರು ಪೆಟ್ರೋಲಿಂಗ್ ನಡೆಸಲಿದ್ದಾರೆ. ತಪಾಸಣೆ ನಡೆಸಲಿದ್ದು, ಲಸಿಕೆ ಹಾಕಿಸಿಕೊಂಡಿದ್ದಕ್ಕೆ ದೃಢಪತ್ರ ಇಲ್ಲದಿದ್ದಲ್ಲಿ ಹಿಂದಕ್ಕೆ ಕಳುಹಿಸಲಿದ್ದಾರೆ.
ಇದೇ ಸೋಮವಾರದಿಂದಲೇ ಹೊಸ ನೀತಿ ಜಾರಿಗೆ ತರುವ ಬಗ್ಗೆ ಜಿಲ್ಲಾಡಳಿತ ನಿರ್ಧರಿಸಿತ್ತು. ಆದರೆ, ಜನರಿಗೆ ಹೊಸ ನೀತಿಯ ಬಗ್ಗೆ ಅರಿವು ಮೂಡಿಸದೆ ಅದನ್ನು ಹೇರಬಾರದು ಎಂಬ ನೆಲೆಯಲ್ಲಿ ಆಡಳಿತಾತ್ಮಕ ಕಾರಣಕ್ಕೆ ಮುಂದಿನ ಶನಿವಾರದಿಂದ ಹೊಸ ನಿಯಮ ಜಾರಿಗೆ ತರಲು ನಿರ್ಧರಿಸಲಾಗಿದೆ. ಈಗ ನಿಷೇಧ ಜಾರಿಗೆ ತಂದಿರುವ ಪ್ರದೇಶಗಳಲ್ಲಿ ಪೊಲೀಸರು ತಪಾಸಣೆ ನಡೆಸಲಿದ್ದಾರೆ. ಜೊತೆಗೆ ಕೋವಿಡ್ ಲಸಿಕೆ ನೀಡಲು ಕ್ರಮ ಮತ್ತು ಸ್ಥಳದಲ್ಲೇ ಪರೀಕ್ಷೆ ನಡೆಸುವುದಕ್ಕೂ ವ್ಯವಸ್ಥೆ ಮಾಡಲು ನಿರ್ಧರಿಸಲಾಗಿದೆ.
The Kasaragod district administration has imposed restrictions on people entering the town in the wake of surging Covid cases in the state. A Covid negative certificate or full vaccination certificate is needed for people to enter Kasaragod, Kanhangad, Neeleshwaram, Cheruvathur, Uppala and Kumbala towns. District collector Dr D Sajithbabu informed that the restriction will come into effect from Saturday.
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 07:19 pm
Mangalore Correspondent
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
ಕಲ್ಲು ಮರಳಿನ ಸಮಸ್ಯೆಯಿಂದ ಜನರ ತಲೆಗೆ ಚಪ್ಪಡಿ ಕಲ್ಲು...
14-07-25 09:55 pm
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
15-07-25 06:52 pm
Bangalore Correspondent
Mangalore, Moodbidri college, Rape, Blackmail...
15-07-25 06:07 pm
ಹಿಂದು ಯುವತಿಯರನ್ನು ಮತಾಂತರ ಮಾಡುತ್ತಿದ್ದಾನೆಂದು ಸು...
15-07-25 05:21 pm
Mangalore Police, Arrest, NITTE College Stude...
15-07-25 01:13 pm
Mangalore Crime, Police: ದುಬೈನಲ್ಲಿ ವಹಿವಾಟು ;...
15-07-25 11:38 am