ಬ್ರೇಕಿಂಗ್ ನ್ಯೂಸ್
24-08-20 08:24 pm Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 24: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ನಿಧನಕ್ಕೆ ಭೂಗತಲೋಕದ ನಂಟಿದೆ ಎಂದು ಬಿಜೆಪಿ ರಾಜ್ಯಸಭಾ ಸಂಸದ ಸುಬ್ರಮಣಿಯನ್ ಸ್ವಾಮಿ ಆರೋಪಿಸಿದ್ದಾರೆ.
ಸುಶಾಂತ್ ಆತ್ಮಹತ್ಯೆ ಮಾಡಿಕೊಂಡಿಲ್ಲ, ಅದು ಕೊಲೆ ಎಂದು ಸುಬ್ರಮಣಿಯನ್ ಸ್ವಾಮಿ ಆರೋಪಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ಮಾಧ್ಯಮಗಳ ಚರ್ಚೆಯಲ್ಲಿ ಪಾಲ್ಗೊಂಡ ವೇಳೆ ಹಲವು ಬಾರಿ ಇದೇ ರೀತಿಯ ಆರೋಪಗಳನ್ನು ಮಾಡಿದ್ದಾರೆ.
ಸುಶಾಂತ್ ನಿಧನದ ದಿನ ದುಬೈ ಮೂಲದ ಡ್ರಗ್ ಡೀಲರ್ ಅಯಾಶ್ ಖಾನ್ ನನ್ನ ಭೇಟಿಯಾಗಿದ್ದೇಕೆ? ನಟಿ ಶ್ರೀದೇವಿ ಅವರ ಸಾವಿನ ರೀತಿ ಸುಶಾಂತ್ ಪ್ರಕರಣ ನಿಗೂಢವಾಗಿದೆ. ಸುನಂದಾ ಪುಷ್ಕರ್ ಮರಣೋತ್ತರ ಪರೀಕ್ಷೆ ವೇಳೆ ಏಮ್ಸ್ ಅವರ ಹೊಟ್ಟೆಯಲ್ಲಿ ಸಿಕ್ಕ ವಸ್ತು ಏನು? ಅದೇ ರೀತಿ ಶ್ರೀದೇವಿ ಮತ್ತು ಸುಶಾಂತ್ ಪ್ರಕರಣಗಳಲ್ಲಿ ನಡೆದಿಲ್ಲ. ಸಾವಿನ ದಿನ ಅಂದ್ರೆ ಜೂನ್ 14ರಂದು ಸುಶಾಂತ್ ದುಬೈನ ಡ್ರಗ್ ಡೀಲರ್ ಅಯಾಶ್ ಖಾನ್ ಭೇಟಿಯಾಗಿದ್ದು ಯಾಕೆ ಪ್ರಶ್ನೆಗೆ ಉತ್ತರ ಬೇಕಿದೆ ಎಂದು ಸುಬ್ರಮಣಿಯನ್ ಸ್ವಾಮಿ ಟ್ವೀಟ್ ಮಾಡಿದ್ದಾರೆ.
ಸದ್ಯ ಸುಶಾಂತ್ ಪ್ರಕರಣ ಸಿಬಿಐಗೆ ವರ್ಗಾವಣೆಯಾಗಿದೆ. ಸಿಬಿಐ ಅಧಿಕಾರಿಗಳು ಮುಂಬೈ ಪೊಲೀಸರಿಂದ ತನಿಖೆಯ ಎಲ್ಲ ದಾಖಲಾತಿಗಳನ್ನು ಪಡೆದುಕೊಂಡಿದ್ದಾರೆ. ಸುಶಾಂತ್ ವಾಸವಾಗಿದ್ದ ಮನೆಗೆ ಭೇಟಿ ನೀಡಿದ ಅಧಿಕಾರಿಗಳು ಘಟನೆಯನ್ನ ಮರುಸೃಷ್ಟಿ ಮಾಡಿ ಮಾಹಿತಿ ಕಲೆ ಹಾಕಿದ್ದಾರೆ. ಸುಶಾಂತ್ ಆಪ್ತ ಸಿದ್ಧಾರ್ಥ್ ಪಿಠಾಣಿ ಮತ್ತು ಅಡುಗೆಯಾತ ನೀರಜ್ ಸಿಂಗ್ ಸಮ್ಮುಖದಲ್ಲಿ ಕ್ರೈಂ ಸೀನ್ ಮರುಸೃಷ್ಟಿ ಮಾಡಲಾಗಿತ್ತು. ಸುಶಾಂತ್ ಆಪ್ತರನ್ನು ಸಿಬಿಐ ವಿಚಾರಣೆಗೆ ಒಳಪಡಿಸಿದ್ದಾರೆ.
04-04-26 07:33 pm
HK News Staffer
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 05:42 pm
HK News Staffer
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm