ಬ್ರೇಕಿಂಗ್ ನ್ಯೂಸ್
22-04-21 02:18 pm Headline Karnataka News Network ದೇಶ - ವಿದೇಶ
ಶಹಜಹಾನ್ಪುರ, ಏ. 22: ರೈಲೊಂದು ವಾಹನಗಳ ಮೇಲೆ ಹರಿದಿದ್ದು ಒಂದೇ ಕುಟುಂಬದ ಮೂವರು ಸೇರಿ ಒಟ್ಟು 5 ಮಂದಿ ಮೃತಪಟ್ಟಿದ್ದು, ಓರ್ವ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಶಹಜಹಾನ್ಪುರದಲ್ಲಿ ನಡೆದಿದೆ.
ಮ್ಯಾನಲ್ ಲೆವೆಲ್ ಕ್ರಾಸಿಂಗ್ ನಲ್ಲಿ ರೈಲು ವಾಹನಗಳ ಮೇಲೆ ಹರಿದ ಪರಿಣಾಮ ಐವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಲಕ್ನೊ-ಚಂಡೀಘಡ ಸೂಪರ್ ಫಾಸ್ಟ್ ಲೊಕೊಮೊಟಿವ್ ರೈಲು ವಾಹನಗಳಿಗೆ ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿದೆ, ಇದೀಗ ಎರಡೂ ಕಡೆ ರೈಲು ಸಂಚಾರಕ್ಕೆ ವ್ಯತ್ಯಯವುಂಟಾಗಿದೆ.
ದುರ್ಘಟನೆ ನಡೆಯುವ ಸಂದರ್ಭದಲ್ಲಿ ರೈಲ್ವೆ ಹಳಿ ಸಮೀಪ ಮ್ಯಾನಲ್ ಲೆವೆಲ್ ಕ್ರಾಸಿಂಗ್ ನಲ್ಲಿ ಗೇಟು ಮುಚ್ಚದ ಕಾರಣ ಈ ಅವಘಡ ಸಂಭವಿಸಿದೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮೃತಪಟ್ಟವರ ಕುಟುಂಬಸ್ಥರಿಗೆ ಸಂತಾಪ ಸೂಚಿಸಿದ್ದು ಪ್ರತಿಯೊಬ್ಬರಿಗೂ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ ಎಂದು ಲಕ್ನೊದಲ್ಲಿರುವ ಅಧಿಕೃತ ವಕ್ತಾರರು ತಿಳಿಸಿದ್ದಾರೆ.
ಮೀರನ್ಪುರದ ಕತ್ರ ರೈಲ್ವೆ ನಿಲ್ದಾಣವನ್ನು ಇಂದು ಬೆಳಗ್ಗೆ ರೈಲು ದಾಟಿದ ಮೇಲೆ ಈ ದುರ್ಘಟನೆ ನಡೆದಿದ್ದು ರೈಲು ಎರಡು ಟ್ರಕ್, ಕಾರು ಮತ್ತು ಬೈಕ್ ಮೇಲೆ ಹರಿದಿದೆ ಎಂದು ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ.
ಮೃತಪಟ್ಟವರಲ್ಲಿ ಮೂವರು ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದು ಗಂಭೀರವಾಗಿ ಗಾಯಗೊಂಡ ಮತ್ತೊಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ, ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆಯಿದೆ ಎಂದು ವರದಿ ಮಾಡಿದೆ.
ಹಾನಿಗೀಡಾಗಿರುವ ಹಳಿಯ ಕೆಲಸ ನಡೆಯುತ್ತಿದೆ. ಮುಂದಿನ ಮೂರ್ನಾಲ್ಕು ಗಂಟೆಗಳಲ್ಲಿ ಸಂಚಾರ ಸಹಜ ಸ್ಥಿತಿಗೆ ಬರಲಿದೆ ಎಂದು ಜಿಲ್ಲಾಧಿಕಾರಿ ಇಂದ್ರ ವಿಕ್ರಮ್ ಸಿಂಗ್ ತಿಳಿಸಿದ್ದಾರೆ.
ಸ್ಥಳದಲ್ಲಿ ರಕ್ಷಣಾ ಮತ್ತು ಪರಿಹಾರ ಕಾರ್ಯ ಮುಂದುವರಿದಿದೆ ಎಂದು ರೈಲ್ವೆ ಆಡಳಿತಾಧಿಕಾರಿಗಳು ತಿಳಿಸಿದ್ದಾರೆ. ರೈಲ್ವೆ ಎಂಜಿನಿಯರ್ ಗಳ ತಂಡವೊಂದು ಸ್ಥಳಕ್ಕೆ ಧಾವಿಸಿದ್ದು ದುರಸ್ತಿ ಕಾರ್ಯ ನಡೆಯುತ್ತಿದೆ.
Five people were killed and one person was injured after a train rammed into some vehicles at a manned level crossing here whose gates were allegedly not closed at the time of the incident, police said.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm