ಬ್ರೇಕಿಂಗ್ ನ್ಯೂಸ್
22-04-21 02:18 pm Headline Karnataka News Network ದೇಶ - ವಿದೇಶ
ಶಹಜಹಾನ್ಪುರ, ಏ. 22: ರೈಲೊಂದು ವಾಹನಗಳ ಮೇಲೆ ಹರಿದಿದ್ದು ಒಂದೇ ಕುಟುಂಬದ ಮೂವರು ಸೇರಿ ಒಟ್ಟು 5 ಮಂದಿ ಮೃತಪಟ್ಟಿದ್ದು, ಓರ್ವ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಶಹಜಹಾನ್ಪುರದಲ್ಲಿ ನಡೆದಿದೆ.
ಮ್ಯಾನಲ್ ಲೆವೆಲ್ ಕ್ರಾಸಿಂಗ್ ನಲ್ಲಿ ರೈಲು ವಾಹನಗಳ ಮೇಲೆ ಹರಿದ ಪರಿಣಾಮ ಐವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಲಕ್ನೊ-ಚಂಡೀಘಡ ಸೂಪರ್ ಫಾಸ್ಟ್ ಲೊಕೊಮೊಟಿವ್ ರೈಲು ವಾಹನಗಳಿಗೆ ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿದೆ, ಇದೀಗ ಎರಡೂ ಕಡೆ ರೈಲು ಸಂಚಾರಕ್ಕೆ ವ್ಯತ್ಯಯವುಂಟಾಗಿದೆ.
ದುರ್ಘಟನೆ ನಡೆಯುವ ಸಂದರ್ಭದಲ್ಲಿ ರೈಲ್ವೆ ಹಳಿ ಸಮೀಪ ಮ್ಯಾನಲ್ ಲೆವೆಲ್ ಕ್ರಾಸಿಂಗ್ ನಲ್ಲಿ ಗೇಟು ಮುಚ್ಚದ ಕಾರಣ ಈ ಅವಘಡ ಸಂಭವಿಸಿದೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮೃತಪಟ್ಟವರ ಕುಟುಂಬಸ್ಥರಿಗೆ ಸಂತಾಪ ಸೂಚಿಸಿದ್ದು ಪ್ರತಿಯೊಬ್ಬರಿಗೂ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ ಎಂದು ಲಕ್ನೊದಲ್ಲಿರುವ ಅಧಿಕೃತ ವಕ್ತಾರರು ತಿಳಿಸಿದ್ದಾರೆ.
ಮೀರನ್ಪುರದ ಕತ್ರ ರೈಲ್ವೆ ನಿಲ್ದಾಣವನ್ನು ಇಂದು ಬೆಳಗ್ಗೆ ರೈಲು ದಾಟಿದ ಮೇಲೆ ಈ ದುರ್ಘಟನೆ ನಡೆದಿದ್ದು ರೈಲು ಎರಡು ಟ್ರಕ್, ಕಾರು ಮತ್ತು ಬೈಕ್ ಮೇಲೆ ಹರಿದಿದೆ ಎಂದು ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ.

ಮೃತಪಟ್ಟವರಲ್ಲಿ ಮೂವರು ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದು ಗಂಭೀರವಾಗಿ ಗಾಯಗೊಂಡ ಮತ್ತೊಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ, ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆಯಿದೆ ಎಂದು ವರದಿ ಮಾಡಿದೆ.
ಹಾನಿಗೀಡಾಗಿರುವ ಹಳಿಯ ಕೆಲಸ ನಡೆಯುತ್ತಿದೆ. ಮುಂದಿನ ಮೂರ್ನಾಲ್ಕು ಗಂಟೆಗಳಲ್ಲಿ ಸಂಚಾರ ಸಹಜ ಸ್ಥಿತಿಗೆ ಬರಲಿದೆ ಎಂದು ಜಿಲ್ಲಾಧಿಕಾರಿ ಇಂದ್ರ ವಿಕ್ರಮ್ ಸಿಂಗ್ ತಿಳಿಸಿದ್ದಾರೆ.
ಸ್ಥಳದಲ್ಲಿ ರಕ್ಷಣಾ ಮತ್ತು ಪರಿಹಾರ ಕಾರ್ಯ ಮುಂದುವರಿದಿದೆ ಎಂದು ರೈಲ್ವೆ ಆಡಳಿತಾಧಿಕಾರಿಗಳು ತಿಳಿಸಿದ್ದಾರೆ. ರೈಲ್ವೆ ಎಂಜಿನಿಯರ್ ಗಳ ತಂಡವೊಂದು ಸ್ಥಳಕ್ಕೆ ಧಾವಿಸಿದ್ದು ದುರಸ್ತಿ ಕಾರ್ಯ ನಡೆಯುತ್ತಿದೆ.
Five people were killed and one person was injured after a train rammed into some vehicles at a manned level crossing here whose gates were allegedly not closed at the time of the incident, police said.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm