ಬ್ರೇಕಿಂಗ್ ನ್ಯೂಸ್
22-04-21 08:47 pm Headline Karnataka News Network ದೇಶ - ವಿದೇಶ
ನವದೆಹಲಿ, ಎ 22: ಭಾರತದಲ್ಲಿ ಕೊರೊನಾ ವೈರಸ್ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಭಾರತದಿಂದ ವಿಮಾನಗಳ ಹಾರಾಟ ಸ್ಥಗಿತಗೊಳಿಸಲು ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ನಿರ್ಧರಿಸಿದೆ.
ಏಪ್ರಿಲ್ 25ರಿಂದ ಭಾರತದಿಂದ ಎಲ್ಲ ವಿಮಾನಗಳ ಹಾರಾಟ ಕಾರ್ಯಾಚರಣೆಯನ್ನು ಹತ್ತು ದಿನಗಳ ವರೆಗೂ ರದ್ದುಪಡಿಸುವುದಾಗಿ ಗುರುವಾರ ಯುಎಇ ಪ್ರಕಟಿಸಿದೆ. ಭಾರತದಿಂದ ಅತಿ ಹೆಚ್ಚು ವಿಮಾನಗಳು ಯುಎಇ ಮಾರ್ಗದಲ್ಲಿ ಸಂಚರಿಸುತ್ತವೆ.
ಭಾರತದಿಂದ ಪ್ರಯಾಣಿಕರು ಬೇರೆ ರಾಷ್ಟ್ರಗಳ ಮೂಲಕ ಯುಎಇ ಪ್ರವೇಶಿಸುವುದಕ್ಕೂ ನಿರ್ಬಂಧ ವಿಧಿಸಲಾಗಿದೆ. ಪ್ರಯಾಣಿಕರು ಇತರೆ ರಾಷ್ಟ್ರಗಳಲ್ಲಿ 14 ದಿನಗಳು ತಂಗಿದ್ದರೆ, ನಂತರದಲ್ಲಿ ಯುಎಇ ಪ್ರವೇಶಕ್ಕೆ ಅವಕಾಶ ಸಿಗಲಿದೆ.

ಉಭಯ ರಾಷ್ಟ್ರಗಳ ನಡುವೆ ಕಾರ್ಗೊ ವಿಮಾನಗಳು ಹಾಗೂ ಯುಎಇನಿಂದ ಭಾರತಕ್ಕೆ ಬಂದಿಳಿಯುವ ವಿಮಾನಗಳ ಮೇಲೆ ನಿರ್ಬಂಧ ಇರುವುದಿಲ್ಲ. ಯುಎಇ ನಾಗರಿಕರು, ರಾಜತಾಂತ್ರಿಕ ಪ್ರತಿನಿಧಿಗಳು, ಸರ್ಕಾರದ ಪ್ರತಿನಿಧಿಗಳು ಹಾಗೂ ಉದ್ಯಮಿಗಳ ವಿಮಾನಗಳಿಗೆ ನಿರ್ಬಂಧದಿಂದ ವಿನಾಯಿತಿ ನೀಡಲಾಗಿದೆ.
ಆ ಎಲ್ಲ ವರ್ಗದ ಪ್ರಯಾಣಿಕರು ಯುಎಇಗೆ ಬಂದಿಳಿಯುವ ದಿನದಂದು ಪಿಸಿಆರ್ ಪರೀಕ್ಷೆಗೆ ಒಳಗಾಗಬೇಕು. ಕಡ್ಡಾಯವಾಗಿ 10 ದಿನಗಳು ಕ್ವಾರಂಟೈನ್ಗೆ ಒಳಗಾಗಬೇಕಾಗುತ್ತದೆ.

ಕೋವಿಡ್ ಪ್ರಕರಣ ಹಿನ್ನೆಲೆಯಲ್ಲಿ ಭಾರತದಿಂದ ದೇಶಕ್ಕೆ ಸಂಪರ್ಕ ಕಲ್ಪಿಸುವ ವಿಮಾನಗಳ ಸಂಖ್ಯೆಯನ್ನು ಕಡಿತಗೊಳಿಸಲು ಆಸ್ಟ್ರೇಲಿಯಾ ಸರ್ಕಾರ ನಿರ್ಧರಿಸಿದೆ. ಅಂತರರಾಷ್ಟ್ರೀಯ ಪ್ರಯಾಣಕ್ಕೆ ಸಂಬಂಧಿಸಿ ಭಾರತವನ್ನು ಬ್ರಿಟನ್ ‘ಕೆಂಪುಪಟ್ಟಿಗೆ’ ಸೇರಿಸಿದ ಹಿಂದೆಯೇ, ಲಂಡನ್ನ ಅತಿದೊಡ್ಡ ವಿಮಾನನಿಲ್ದಾಣ 'ಹೀಥ್ರೂ' ಆಡಳಿತ ವರ್ಗವು, ಭಾರತದಿಂದ ಹೆಚ್ಚುವರಿ ವಿಮಾನಗಳ ಆಗಮನಕ್ಕೆ ಅವಕಾಶವನ್ನು ನಿರಾಕರಿಸಿದೆ. ಕೆಂಪುಪಟ್ಟಿಗೆ ಸೇರಿಸಿದ ಆದೇಶ ಶುಕ್ರವಾರದಿಂದ ಜಾರಿಗೆ ಬರಲಿದೆ. ಏರ್ ಇಂಡಿಯಾ ಭಾರತ ಮತ್ತು ಬ್ರಿಟನ್ ನಡುವಿನ ಹಾರಾಟವನ್ನು ಏಪ್ರಿಲ್ 24ರಿಂದ ಏಪ್ರಿಲ್ 30ರ ವರೆಗೂ ರದ್ದು ಪಡಿಸಿದೆ.
Emirates will suspend flights between Dubai and India for 10 days from Sunday amid the deadly surge in COVID-19 cases in India, news agency ANI reported.
02-01-26 10:24 pm
HK News Desk
CM Siddaramaiah, Ballari Clash, MLA Bharat Re...
02-01-26 06:09 pm
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
02-01-26 11:01 pm
Mangalore Correspondent
ಪಾಲಿಕೆ ವ್ಯಾಪ್ತಿಯಲ್ಲಿ ಬೇಸಿಗೆ ಮೊದಲೇ ನೀರಿನ ಸಮಸ್ಯ...
02-01-26 11:00 pm
Pratibha Kulai: ಹಿಂದು ಮುಖಂಡರು ಮರ್ಯಾದೆ ಕಳಕೊಂಡಿ...
02-01-26 09:32 pm
ಕಿಲಿಮಂಜಾರೋ ಬಳಿಕ ಮೌಂಟ್ ಕೆನ್ಯಾ ಹತ್ತಿದ 11ರ ಪೋರ ;...
02-01-26 02:02 pm
Dr Vinaya Hegde Death, NItte Mangalore: ನಿಟ್ಟ...
01-01-26 09:43 am
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm