ಬ್ರೇಕಿಂಗ್ ನ್ಯೂಸ್
22-04-21 08:47 pm Headline Karnataka News Network ದೇಶ - ವಿದೇಶ
ನವದೆಹಲಿ, ಎ 22: ಭಾರತದಲ್ಲಿ ಕೊರೊನಾ ವೈರಸ್ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಭಾರತದಿಂದ ವಿಮಾನಗಳ ಹಾರಾಟ ಸ್ಥಗಿತಗೊಳಿಸಲು ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ನಿರ್ಧರಿಸಿದೆ.
ಏಪ್ರಿಲ್ 25ರಿಂದ ಭಾರತದಿಂದ ಎಲ್ಲ ವಿಮಾನಗಳ ಹಾರಾಟ ಕಾರ್ಯಾಚರಣೆಯನ್ನು ಹತ್ತು ದಿನಗಳ ವರೆಗೂ ರದ್ದುಪಡಿಸುವುದಾಗಿ ಗುರುವಾರ ಯುಎಇ ಪ್ರಕಟಿಸಿದೆ. ಭಾರತದಿಂದ ಅತಿ ಹೆಚ್ಚು ವಿಮಾನಗಳು ಯುಎಇ ಮಾರ್ಗದಲ್ಲಿ ಸಂಚರಿಸುತ್ತವೆ.
ಭಾರತದಿಂದ ಪ್ರಯಾಣಿಕರು ಬೇರೆ ರಾಷ್ಟ್ರಗಳ ಮೂಲಕ ಯುಎಇ ಪ್ರವೇಶಿಸುವುದಕ್ಕೂ ನಿರ್ಬಂಧ ವಿಧಿಸಲಾಗಿದೆ. ಪ್ರಯಾಣಿಕರು ಇತರೆ ರಾಷ್ಟ್ರಗಳಲ್ಲಿ 14 ದಿನಗಳು ತಂಗಿದ್ದರೆ, ನಂತರದಲ್ಲಿ ಯುಎಇ ಪ್ರವೇಶಕ್ಕೆ ಅವಕಾಶ ಸಿಗಲಿದೆ.

ಉಭಯ ರಾಷ್ಟ್ರಗಳ ನಡುವೆ ಕಾರ್ಗೊ ವಿಮಾನಗಳು ಹಾಗೂ ಯುಎಇನಿಂದ ಭಾರತಕ್ಕೆ ಬಂದಿಳಿಯುವ ವಿಮಾನಗಳ ಮೇಲೆ ನಿರ್ಬಂಧ ಇರುವುದಿಲ್ಲ. ಯುಎಇ ನಾಗರಿಕರು, ರಾಜತಾಂತ್ರಿಕ ಪ್ರತಿನಿಧಿಗಳು, ಸರ್ಕಾರದ ಪ್ರತಿನಿಧಿಗಳು ಹಾಗೂ ಉದ್ಯಮಿಗಳ ವಿಮಾನಗಳಿಗೆ ನಿರ್ಬಂಧದಿಂದ ವಿನಾಯಿತಿ ನೀಡಲಾಗಿದೆ.
ಆ ಎಲ್ಲ ವರ್ಗದ ಪ್ರಯಾಣಿಕರು ಯುಎಇಗೆ ಬಂದಿಳಿಯುವ ದಿನದಂದು ಪಿಸಿಆರ್ ಪರೀಕ್ಷೆಗೆ ಒಳಗಾಗಬೇಕು. ಕಡ್ಡಾಯವಾಗಿ 10 ದಿನಗಳು ಕ್ವಾರಂಟೈನ್ಗೆ ಒಳಗಾಗಬೇಕಾಗುತ್ತದೆ.

ಕೋವಿಡ್ ಪ್ರಕರಣ ಹಿನ್ನೆಲೆಯಲ್ಲಿ ಭಾರತದಿಂದ ದೇಶಕ್ಕೆ ಸಂಪರ್ಕ ಕಲ್ಪಿಸುವ ವಿಮಾನಗಳ ಸಂಖ್ಯೆಯನ್ನು ಕಡಿತಗೊಳಿಸಲು ಆಸ್ಟ್ರೇಲಿಯಾ ಸರ್ಕಾರ ನಿರ್ಧರಿಸಿದೆ. ಅಂತರರಾಷ್ಟ್ರೀಯ ಪ್ರಯಾಣಕ್ಕೆ ಸಂಬಂಧಿಸಿ ಭಾರತವನ್ನು ಬ್ರಿಟನ್ ‘ಕೆಂಪುಪಟ್ಟಿಗೆ’ ಸೇರಿಸಿದ ಹಿಂದೆಯೇ, ಲಂಡನ್ನ ಅತಿದೊಡ್ಡ ವಿಮಾನನಿಲ್ದಾಣ 'ಹೀಥ್ರೂ' ಆಡಳಿತ ವರ್ಗವು, ಭಾರತದಿಂದ ಹೆಚ್ಚುವರಿ ವಿಮಾನಗಳ ಆಗಮನಕ್ಕೆ ಅವಕಾಶವನ್ನು ನಿರಾಕರಿಸಿದೆ. ಕೆಂಪುಪಟ್ಟಿಗೆ ಸೇರಿಸಿದ ಆದೇಶ ಶುಕ್ರವಾರದಿಂದ ಜಾರಿಗೆ ಬರಲಿದೆ. ಏರ್ ಇಂಡಿಯಾ ಭಾರತ ಮತ್ತು ಬ್ರಿಟನ್ ನಡುವಿನ ಹಾರಾಟವನ್ನು ಏಪ್ರಿಲ್ 24ರಿಂದ ಏಪ್ರಿಲ್ 30ರ ವರೆಗೂ ರದ್ದು ಪಡಿಸಿದೆ.
Emirates will suspend flights between Dubai and India for 10 days from Sunday amid the deadly surge in COVID-19 cases in India, news agency ANI reported.
05-03-26 11:42 pm
HK News Desk
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
06-03-26 09:50 am
HK News Staffer
ಇರಾನಲ್ಲಿ 1230 ಜನರ ಸಾವು ; ಜೆರುಸಲೇಮ್ ಮೇಲೆ ಬಾಂಬ್...
05-03-26 08:51 pm
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
05-03-26 07:38 pm
HK News Staffer
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm