ಬ್ರೇಕಿಂಗ್ ನ್ಯೂಸ್
22-04-21 08:47 pm Headline Karnataka News Network ದೇಶ - ವಿದೇಶ
ನವದೆಹಲಿ, ಎ 22: ಭಾರತದಲ್ಲಿ ಕೊರೊನಾ ವೈರಸ್ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಭಾರತದಿಂದ ವಿಮಾನಗಳ ಹಾರಾಟ ಸ್ಥಗಿತಗೊಳಿಸಲು ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ನಿರ್ಧರಿಸಿದೆ.
ಏಪ್ರಿಲ್ 25ರಿಂದ ಭಾರತದಿಂದ ಎಲ್ಲ ವಿಮಾನಗಳ ಹಾರಾಟ ಕಾರ್ಯಾಚರಣೆಯನ್ನು ಹತ್ತು ದಿನಗಳ ವರೆಗೂ ರದ್ದುಪಡಿಸುವುದಾಗಿ ಗುರುವಾರ ಯುಎಇ ಪ್ರಕಟಿಸಿದೆ. ಭಾರತದಿಂದ ಅತಿ ಹೆಚ್ಚು ವಿಮಾನಗಳು ಯುಎಇ ಮಾರ್ಗದಲ್ಲಿ ಸಂಚರಿಸುತ್ತವೆ.
ಭಾರತದಿಂದ ಪ್ರಯಾಣಿಕರು ಬೇರೆ ರಾಷ್ಟ್ರಗಳ ಮೂಲಕ ಯುಎಇ ಪ್ರವೇಶಿಸುವುದಕ್ಕೂ ನಿರ್ಬಂಧ ವಿಧಿಸಲಾಗಿದೆ. ಪ್ರಯಾಣಿಕರು ಇತರೆ ರಾಷ್ಟ್ರಗಳಲ್ಲಿ 14 ದಿನಗಳು ತಂಗಿದ್ದರೆ, ನಂತರದಲ್ಲಿ ಯುಎಇ ಪ್ರವೇಶಕ್ಕೆ ಅವಕಾಶ ಸಿಗಲಿದೆ.

ಉಭಯ ರಾಷ್ಟ್ರಗಳ ನಡುವೆ ಕಾರ್ಗೊ ವಿಮಾನಗಳು ಹಾಗೂ ಯುಎಇನಿಂದ ಭಾರತಕ್ಕೆ ಬಂದಿಳಿಯುವ ವಿಮಾನಗಳ ಮೇಲೆ ನಿರ್ಬಂಧ ಇರುವುದಿಲ್ಲ. ಯುಎಇ ನಾಗರಿಕರು, ರಾಜತಾಂತ್ರಿಕ ಪ್ರತಿನಿಧಿಗಳು, ಸರ್ಕಾರದ ಪ್ರತಿನಿಧಿಗಳು ಹಾಗೂ ಉದ್ಯಮಿಗಳ ವಿಮಾನಗಳಿಗೆ ನಿರ್ಬಂಧದಿಂದ ವಿನಾಯಿತಿ ನೀಡಲಾಗಿದೆ.
ಆ ಎಲ್ಲ ವರ್ಗದ ಪ್ರಯಾಣಿಕರು ಯುಎಇಗೆ ಬಂದಿಳಿಯುವ ದಿನದಂದು ಪಿಸಿಆರ್ ಪರೀಕ್ಷೆಗೆ ಒಳಗಾಗಬೇಕು. ಕಡ್ಡಾಯವಾಗಿ 10 ದಿನಗಳು ಕ್ವಾರಂಟೈನ್ಗೆ ಒಳಗಾಗಬೇಕಾಗುತ್ತದೆ.

ಕೋವಿಡ್ ಪ್ರಕರಣ ಹಿನ್ನೆಲೆಯಲ್ಲಿ ಭಾರತದಿಂದ ದೇಶಕ್ಕೆ ಸಂಪರ್ಕ ಕಲ್ಪಿಸುವ ವಿಮಾನಗಳ ಸಂಖ್ಯೆಯನ್ನು ಕಡಿತಗೊಳಿಸಲು ಆಸ್ಟ್ರೇಲಿಯಾ ಸರ್ಕಾರ ನಿರ್ಧರಿಸಿದೆ. ಅಂತರರಾಷ್ಟ್ರೀಯ ಪ್ರಯಾಣಕ್ಕೆ ಸಂಬಂಧಿಸಿ ಭಾರತವನ್ನು ಬ್ರಿಟನ್ ‘ಕೆಂಪುಪಟ್ಟಿಗೆ’ ಸೇರಿಸಿದ ಹಿಂದೆಯೇ, ಲಂಡನ್ನ ಅತಿದೊಡ್ಡ ವಿಮಾನನಿಲ್ದಾಣ 'ಹೀಥ್ರೂ' ಆಡಳಿತ ವರ್ಗವು, ಭಾರತದಿಂದ ಹೆಚ್ಚುವರಿ ವಿಮಾನಗಳ ಆಗಮನಕ್ಕೆ ಅವಕಾಶವನ್ನು ನಿರಾಕರಿಸಿದೆ. ಕೆಂಪುಪಟ್ಟಿಗೆ ಸೇರಿಸಿದ ಆದೇಶ ಶುಕ್ರವಾರದಿಂದ ಜಾರಿಗೆ ಬರಲಿದೆ. ಏರ್ ಇಂಡಿಯಾ ಭಾರತ ಮತ್ತು ಬ್ರಿಟನ್ ನಡುವಿನ ಹಾರಾಟವನ್ನು ಏಪ್ರಿಲ್ 24ರಿಂದ ಏಪ್ರಿಲ್ 30ರ ವರೆಗೂ ರದ್ದು ಪಡಿಸಿದೆ.
Emirates will suspend flights between Dubai and India for 10 days from Sunday amid the deadly surge in COVID-19 cases in India, news agency ANI reported.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm