ಬ್ರೇಕಿಂಗ್ ನ್ಯೂಸ್
24-04-21 05:42 pm Headline Karnataka News Network ದೇಶ - ವಿದೇಶ
ಲಕ್ನೋ, ಎ.24: ಉತ್ತರ ಪ್ರದೇಶದಲ್ಲಿ ಕೋವಿಡ್ ಸೋಂಕು ಭಾರೀ ತೀವ್ರಗತಿಯಲ್ಲಿ ಹರಡುತ್ತಿದ್ದು, ಗಂಭೀರ ಪರಿಸ್ಥಿತಿ ಎದುರಾಗಿದೆ. ಲಕ್ನೋ ಮತ್ತು ಗಾಜಿಯಾಬಾದ್ ನಲ್ಲಿ ರೋಗಿಗಳಿಗೆ ಸಕಾಲದಲ್ಲಿ ಆಕ್ಸಿಜನ್ ಮತ್ತು ವೆಂಟಿಲೇಟರ್ ಸಿಗದೆ ಪರದಾಡುವ ಸ್ಥಿತಿ ಎದುರಾಗಿದೆ. ಇದೇ ವೇಳೆ, ಆಕ್ಸಿಜನ್ ಸಿಗದೆ ಬಳಲುವ ಮಂದಿಗಾಗಿ ಗಾಜಿಯಾಬಾದ್ ಸಿಖ್ ಗುರುದ್ವಾರ ಸಮಿತಿಯವರು ಉಚಿತವಾಗಿ ಆಕ್ಸಿಜನ್ ಪೂರೈಸುವ ಮುಂದಾಗಿದ್ದಾರೆ.

ಗಾಜಿಯಾಬಾದ್ ನಲ್ಲಿ ಆಸ್ಪತ್ರೆಗಳಿಗೆ ಅಲೆದಾಡುವುದಕ್ಕೂ ಮುನ್ನ ಗುರುದ್ವಾರ ಸಮಿತಿಯವರು ರಸ್ತೆ ಬದಿಗಳಲ್ಲೇ ಜನರಿಗೆ ಆಕ್ಸಿಜನ್ ಪೂರೈಸಲು ಆರಂಭಿಸಿದ್ದಾರೆ. ಆಧಾರ್ ಕಾರ್ಡ್ ಆಗಲೀ, ಕೋವಿಡ್ ಪಾಸಿಟಿವ್ ರಿಪೋರ್ಟ್ ಇಲ್ಲದೆಯೂ ಉಸಿರಾಟದ ಸಮಸ್ಯೆಯಿಂದ ನರಳುತ್ತಿರುವ ಮಂದಿಗೆ ರಸ್ತೆಯಲ್ಲೇ ಆಕ್ಸಿಜನ್ ಪೂರೈಸುತ್ತಿದ್ದಾರೆ.

ಪಶ್ಚಿಮ ಉತ್ತರ ಪ್ರದೇಶದ ಗಾಜಿಯಾಬಾದ್ ನಗರದ ಇಂದಿರಾಪುರಂನಲ್ಲಿ ಗುರುದ್ವಾರ ಸಮಿತಿಯವರು ಆಕ್ಸಿಜನ್ ಸಿಲಿಂಡರ್ ನೀಡುತ್ತಿದ್ದು, ಉಸಿರಾಟ ಸಮಸ್ಯೆ ಎದುರಾದ ಜನರು ಸ್ಥಳದಲ್ಲಿ ಕ್ಯೂ ನಿಲ್ಲುತ್ತಿದ್ದಾರೆ. ರಸ್ತೆ ಬದಿ ವಾಹನಗಳಲ್ಲಿಯೇ ರೋಗಿಗಳನ್ನು ಮಲಗಿಸಿ ಆಕ್ಸಿಜನ್ ನೀಡಲಾಗುತ್ತಿದೆ. ಸ್ಥಳದಲ್ಲೇ ಆಕ್ಸಿಜನ್ ಲೆವೆಲ್ ಪರೀಕ್ಷೆ ನಡೆಸುತ್ತಿದ್ದು, 50ಕ್ಕಿಂತ ಕಡಿಮೆ ಇದ್ದವರಿಗೆ ಆಕ್ಸಿಜನ್ ಸಿಲಿಂಡರ್ ಸಂಪರ್ಕ ನೀಡುತ್ತಿದ್ದಾರೆ. ನಾಲ್ಕರಿಂದ ಐದು ಗಂಟೆ ಕಾಲ ಆಕ್ಸಿಜನ್ ನೀಡಿದ ಬಳಿಕ ಸ್ವಸ್ಥರಾದಲ್ಲಿ ಮರಳಿ ಕಳಿಸಿಕೊಡುತ್ತಿದ್ದಾರೆ.

ಗಾಜಿಯಾಬಾದ್ ನಗರದಲ್ಲಿ 25 ಆಕ್ಸಿಜನ್ ಸಿಲಿಂಡರ್ ಗಳನ್ನು ಗುರುದ್ವಾರ ಸಮಿತಿಯಿಂದ ಒದಗಿಸಲಾಗಿದ್ದು ಗುರುವಾರದಿಂದ ಈವರೆಗೆ 700ಕ್ಕಿಂತಲೂ ಹೆಚ್ಚು ಮಂದಿಗೆ ಆಕ್ಸಿಜನ್ ನೀಡಲಾಗಿದೆ. 200ಕ್ಕೂ ಹೆಚ್ಚು ಕೋವಿಡ್ ಸೋಂಕಿತರು ಸರತಿಯಲ್ಲಿದ್ದಾರೆ. ಇನ್ನಷ್ಟು ಆಕ್ಸಿಜನ್ ಪೂರೈಕೆ ಮಾಡಲು ನಮ್ಮಲ್ಲಿ ಖಾಲಿ ಸಿಲಿಂಡರ್ ಇಲ್ಲ ಎಂದು ಗುರುದ್ವಾರ ಕಮಿಟಿ ಅಧ್ಯಕ್ಷ ಗುರುಪ್ರೀತ್ ಸಿಂಗ್ ಹೇಳಿದ್ದಾರೆ. ಈ ನಡುವೆ, ಇಂದಿರಾಪುರಂ ಗುರುದ್ವಾರ ಕಮಿಟಿಯವರು ತಮ್ಮ ನಂಬರ್ ಕೊಟ್ಟಿದ್ದು, ನೋಂದಣಿ ಮಾಡಿಕೊಂಡೇ ಬರುವಂತೆ ಸೂಚಿಸುತ್ತಿದ್ದಾರೆ. ಗಾಜಿಯಾಬಾದ್ ಪೂರ್ವ ದೆಹಲಿಗೆ ಸಮೀಪ ಇರುವುದರಿಂದ ದೆಹಲಿ ಭಾಗದಿಂದಲೂ ಸೋಂಕಿತರು ಉಚಿತ ಆಕ್ಸಿಜನ್ ಪಡೆಯಲು ಬರುತ್ತಿದ್ದಾರೆ.

ಜನರು ಬೆಡ್ ಸಿಗದೆ ಪರದಾಡುತ್ತಿದ್ದು, ಅಂಥವರಿಗೆ ರಸ್ತೆಯಲ್ಲೇ ಆಕ್ಸಿಜನ್ ಪೂರೈಸುವ ಗುರುದ್ವಾರ ಸಮಿತಿಯವರ ಕೆಲಸದ ಬಗ್ಗೆ ಭಾರೀ ಶ್ಲಾಘನೆಯೂ ವ್ಯಕ್ತವಾಗಿದೆ. ಕೆಲವರು ರಸ್ತೆಯಲ್ಲಿ ಆಕ್ಸಿಜನ್ ಸಿಲಿಂಡರ್ ಪೂರೈಸುವ ಸ್ಥಿತಿ ಬಂದಿರುವ ಉತ್ತರ ಪ್ರದೇಶ ಸರಕಾರದ ದುಸ್ಥಿತಿಯ ಬಗ್ಗೆ ವಿಡಿಯೋ ಮಾಡಿ ಹಂಚಿಕೊಂಡಿದ್ದಾರೆ. ಆ ರೀತಿಯ ವಿಡಿಯೋಗಳು ಭಾರೀ ವೈರಲ್ ಆಗಿದ್ದು ಅಲ್ಲಿನ ವಾಸ್ತವ ಸ್ಥಿತಿಗೆ ಕನ್ನಡಿ ಹಿಡಿಯುತ್ತಿದೆ.
20-03-26 12:02 pm
HK News Staffer
ಹುಬ್ಬಳ್ಳಿ ; ರೀಲ್ಸ್ ಹುಚ್ಚಾಟಕ್ಕೆ 15 ವರ್ಷದ ಬಿಜೆಪ...
20-03-26 12:00 pm
ಶಿವಮೊಗ್ಗದ ಹುಲಿ ಸಿಂಹ ಧಾಮದಲ್ಲಿ ನೀರಾನೆ ದಾಳಿ ; 26...
20-03-26 10:03 am
ಗ್ಯಾಸ್ ಸಿಲಿಂಡರ್ ಅಭಾವ; ಬಹುತೇಕ ಹೋಟೆಲ್ ಗಳು ಬಂದ್...
19-03-26 05:01 pm
DG Ramachandra Rao, Sandesh PG: ರಕ್ಷಕರೇ ಭಕ್ಷಕ...
18-03-26 11:00 pm
19-03-26 04:51 pm
HK News Staffer
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
20-03-26 03:39 pm
HK News Staffer
ದ.ಕ. ಜಿಲ್ಲೆಯಲ್ಲಿ ಮಾರ್ಚ್ 20ರಂದೇ ಈದುಲ್ ಫಿತರ್ ಹಬ...
19-03-26 11:30 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣಕ್ಕೆ ಟ್ವಿಸ್ಟ್!...
19-03-26 05:27 pm
ಗ್ಯಾಸ್ ಬಿಲ್ ನಲ್ಲಿ 20 ರು. ಬಾಕಿ ಇದೆಯೆಂದು ಸೈಬರ್...
19-03-26 02:51 pm
ಮೂಡುಬಿದ್ರೆ ; ಕೋಳಿ ಅಂಕಕ್ಕೆ ಪೊಲೀಸ್ ದಾಳಿ, ಆರು ಮಂ...
19-03-26 01:05 pm
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm