ಬ್ರೇಕಿಂಗ್ ನ್ಯೂಸ್
26-04-21 11:01 am Headline Karnataka News Network ದೇಶ - ವಿದೇಶ
Photo credits : REUTERS
ಬಾಗ್ದಾದ್, ಏ. 26: ಕೊರೊನಾ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದ ಬಾಗ್ದಾದ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಆಮ್ಲಜನಕ ಸಿಲಿಂಡರ್ ಸ್ಫೋಟಗೊಂಡು 82 ಮಂದಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ಬಾಗ್ದಾದ್ನ ಅಲ್ ಖತೀಬಾ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಶನಿವಾರ ತಡರಾತ್ರಿ ಅಗ್ನಿ ಅನಾಹುತ ಸಂಭವಿಸಿದೆ. ನಂತರ ಆಸ್ಪತ್ರೆಯ ಇತರೆ ಅಂತಸ್ತುಗಳಿಗೂ ಬೆಂಕಿ ವ್ಯಾಪಿಸಿದೆ. ಆರೋಗ್ಯಾಧಿಕಾರಿಗಳ ನಿರ್ಲಕ್ಷ್ಯವೇ ಈ ಘಟನೆಗೆ ಕಾರಣ ಎಂಬ ಆರೋಪಗಳು ಕೇಳಿಬಂದಿದೆ.
ಈ ಘಟನೆಯಲ್ಲಿ ಒಟ್ಟು 82 ರೋಗಿಗಳು ಮೃತಪಟ್ಟಿದ್ದು, 110 ಮಂದಿ ಗಾಯಗೊಂಡಿದ್ದಾರೆ. ಸುಮಾರು 200 ಮಂದಿಯ ರಕ್ಷಣೆ ಮಾಡಲಾಗಿದೆ.
ಆಸ್ಪತ್ರೆಗೆ ರಾತ್ರಿ ಪಾಳಿಗೆ ಬಂದ ನರ್ಸ್, ಐಸಿಯುನಲ್ಲಿ ಬೆಂಕಿ ಹೊತ್ತಿಕೊಂಡಿದ್ದನ್ನು ಗಮನಿಸಿದ್ದಾರೆ. ತಕ್ಷಣವೇ ರೋಗಿಗಳನ್ನು ಸ್ಥಳಾಂತರಿಸಲು ಮುಂದಾಗಿದ್ದಾರೆ. ನೋಡನೋಡುತ್ತಿದ್ದಂತೆ ಎಲ್ಲೆಡೆ ಬೆಂಕಿ ವ್ಯಾಪಿಸಿ ಅವಘಡ ಸಂಭವಿಸಿದೆ.
ಘಟನೆ ಬೆನ್ನಲ್ಲೇ ಇರಾಕ್ ಪ್ರಧಾನಿ ಮುಸ್ತಾಫಾ ಅಲ್ ಖದಿಮಿ ಸಚಿವ ಸಂಪುತ ಸಭೆ ನಡೆಸಿದ್ದಾರೆ. ಈ ದುರಂತದಲ್ಲಿ ನಿರ್ಲಕ್ಷ್ಯತನ ಅಪರಾಧ ಎಂದು ಖಂಡಿಸಿದ್ದಾರೆ. ಆರೋಗ್ಯ ಸಚಿವ ಹಸನ್ ಅಲ್ ತಮಿಮಿ ಹಾಗೂ ಬಾಗ್ದಾದ್ ರಾಜ್ಯಪಾಲರನ್ನು ಅಮಾನತು ಮಾಡಲಾಗಿದೆ. ಘಟನೆ ಕುರಿತು ತನಿಖೆ ನಡೆಸುವಂತೆ ಆದೇಶಿಸಲಾಗಿದೆ.
ಸತ್ತವರಲ್ಲಿ 28 ರೋಗಿಗಳಿಗೆ ವೆಂಟಿಲೇಟರ್ ಅಳವಡಿಸಲಾಗಿತ್ತು. ಅಗ್ನಿ ಅವಘಡ ಸಂಭವಿಸುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ನಾಗರಿಕ ರಕ್ಷಣಾ ತಂಡಗಳು ಭಾನುವಾರ ಬೆಳಗ್ಗಿನವರೆಗೂ ಬೆಂಕಿ ನಂದಿಸಿದ್ದಾರೆ.
ಆಸ್ಪತ್ರೆಯಲ್ಲಿ ಬೆಂಕಿಯಿಂದ ರಕ್ಷಿಸುವ ವ್ಯವಸ್ಥೆ ಇರಲಿಲ್ಲ. ಹೀಗಾಗಿ ಬೆಂಕಿ ತೀವ್ರ ವ್ಯಾಪಿಸಿದೆ. ವೆಂಟಿಲೇಟರ್ಗಳನ್ನು ತೆಗೆದು ಸಾಗಿಸುವ ವೇಳೆ ಹಲವು ರೋಗಿಗಳು ಮೃತಪಟ್ಟಿದ್ದಾರೆ ಎಂದು ಇರಾಕ್ ನಾಗರಿಕ ರಕ್ಷಣಾ ಘಟಕ ತಿಳಿಸಿದೆ.
A fire caused by an oxygen tank explosion at a COVID-19 hospital in Baghdad took at least 82 lives and forced some people to leap through windows out of the burning building, witnesses and authorities said on Sunday.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm