ಬ್ರೇಕಿಂಗ್ ನ್ಯೂಸ್
26-04-21 11:01 am Headline Karnataka News Network ದೇಶ - ವಿದೇಶ
Photo credits : REUTERS
ಬಾಗ್ದಾದ್, ಏ. 26: ಕೊರೊನಾ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದ ಬಾಗ್ದಾದ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಆಮ್ಲಜನಕ ಸಿಲಿಂಡರ್ ಸ್ಫೋಟಗೊಂಡು 82 ಮಂದಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ಬಾಗ್ದಾದ್ನ ಅಲ್ ಖತೀಬಾ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಶನಿವಾರ ತಡರಾತ್ರಿ ಅಗ್ನಿ ಅನಾಹುತ ಸಂಭವಿಸಿದೆ. ನಂತರ ಆಸ್ಪತ್ರೆಯ ಇತರೆ ಅಂತಸ್ತುಗಳಿಗೂ ಬೆಂಕಿ ವ್ಯಾಪಿಸಿದೆ. ಆರೋಗ್ಯಾಧಿಕಾರಿಗಳ ನಿರ್ಲಕ್ಷ್ಯವೇ ಈ ಘಟನೆಗೆ ಕಾರಣ ಎಂಬ ಆರೋಪಗಳು ಕೇಳಿಬಂದಿದೆ.

ಈ ಘಟನೆಯಲ್ಲಿ ಒಟ್ಟು 82 ರೋಗಿಗಳು ಮೃತಪಟ್ಟಿದ್ದು, 110 ಮಂದಿ ಗಾಯಗೊಂಡಿದ್ದಾರೆ. ಸುಮಾರು 200 ಮಂದಿಯ ರಕ್ಷಣೆ ಮಾಡಲಾಗಿದೆ.

ಆಸ್ಪತ್ರೆಗೆ ರಾತ್ರಿ ಪಾಳಿಗೆ ಬಂದ ನರ್ಸ್, ಐಸಿಯುನಲ್ಲಿ ಬೆಂಕಿ ಹೊತ್ತಿಕೊಂಡಿದ್ದನ್ನು ಗಮನಿಸಿದ್ದಾರೆ. ತಕ್ಷಣವೇ ರೋಗಿಗಳನ್ನು ಸ್ಥಳಾಂತರಿಸಲು ಮುಂದಾಗಿದ್ದಾರೆ. ನೋಡನೋಡುತ್ತಿದ್ದಂತೆ ಎಲ್ಲೆಡೆ ಬೆಂಕಿ ವ್ಯಾಪಿಸಿ ಅವಘಡ ಸಂಭವಿಸಿದೆ.

ಘಟನೆ ಬೆನ್ನಲ್ಲೇ ಇರಾಕ್ ಪ್ರಧಾನಿ ಮುಸ್ತಾಫಾ ಅಲ್ ಖದಿಮಿ ಸಚಿವ ಸಂಪುತ ಸಭೆ ನಡೆಸಿದ್ದಾರೆ. ಈ ದುರಂತದಲ್ಲಿ ನಿರ್ಲಕ್ಷ್ಯತನ ಅಪರಾಧ ಎಂದು ಖಂಡಿಸಿದ್ದಾರೆ. ಆರೋಗ್ಯ ಸಚಿವ ಹಸನ್ ಅಲ್ ತಮಿಮಿ ಹಾಗೂ ಬಾಗ್ದಾದ್ ರಾಜ್ಯಪಾಲರನ್ನು ಅಮಾನತು ಮಾಡಲಾಗಿದೆ. ಘಟನೆ ಕುರಿತು ತನಿಖೆ ನಡೆಸುವಂತೆ ಆದೇಶಿಸಲಾಗಿದೆ.

ಸತ್ತವರಲ್ಲಿ 28 ರೋಗಿಗಳಿಗೆ ವೆಂಟಿಲೇಟರ್ ಅಳವಡಿಸಲಾಗಿತ್ತು. ಅಗ್ನಿ ಅವಘಡ ಸಂಭವಿಸುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ನಾಗರಿಕ ರಕ್ಷಣಾ ತಂಡಗಳು ಭಾನುವಾರ ಬೆಳಗ್ಗಿನವರೆಗೂ ಬೆಂಕಿ ನಂದಿಸಿದ್ದಾರೆ.

ಆಸ್ಪತ್ರೆಯಲ್ಲಿ ಬೆಂಕಿಯಿಂದ ರಕ್ಷಿಸುವ ವ್ಯವಸ್ಥೆ ಇರಲಿಲ್ಲ. ಹೀಗಾಗಿ ಬೆಂಕಿ ತೀವ್ರ ವ್ಯಾಪಿಸಿದೆ. ವೆಂಟಿಲೇಟರ್ಗಳನ್ನು ತೆಗೆದು ಸಾಗಿಸುವ ವೇಳೆ ಹಲವು ರೋಗಿಗಳು ಮೃತಪಟ್ಟಿದ್ದಾರೆ ಎಂದು ಇರಾಕ್ ನಾಗರಿಕ ರಕ್ಷಣಾ ಘಟಕ ತಿಳಿಸಿದೆ.
A fire caused by an oxygen tank explosion at a COVID-19 hospital in Baghdad took at least 82 lives and forced some people to leap through windows out of the burning building, witnesses and authorities said on Sunday.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm