ಬ್ರೇಕಿಂಗ್ ನ್ಯೂಸ್
26-04-21 04:30 pm Headline Karnataka News Network ದೇಶ - ವಿದೇಶ
Photo credits : yosuccess
ವಾಷಿಂಗ್ಟನ್, ಏ.26: ಕೋವಿಡ್-19 2ನೇ ಅಲೆಯಿಂದಾಗಿ ತತ್ತರಿಸಿ ಹೋಗಿರುವ ಭಾರತದಲ್ಲಿನ ಪರಿಸ್ಥಿತಿ ಕುರಿತು ಮೈಕ್ರೋಸಾಫ್ಟ್ ಮುಖ್ಯಸ್ಥ ಸತ್ಯ ನಾಡೆಲ್ಲ ಟ್ವೀಟ್ ಮಾಡಿದ ಬೆನ್ನಲ್ಲೇ ಗೂಗಲ್ ಸಿಇಒ ಭಾರತ ಮೂಲದ ಸುಂದರ್ ಪಿಚೈ ಅವರೂ ಕೂಡ ಟ್ವೀಟ್ ಮಾಡಿ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸುಂದರ್ ಪಿಚೈ ಅವರು, ಭಾರತದಲ್ಲಿನ ಕೋವಿಡ್-19 ಸಾಂಕ್ರಾಮಿಕದ ಪರಿಸ್ಥಿತಿ ನೋಡಿ ಮನಸ್ಸು ಛಿದ್ರವಾಗಿದೆ. ಗೂಗಲ್ ಈ ಕೂಡಲೇ ಭಾರತಕ್ಕೆ ವೈದ್ಯಕೀಯ ಸರಬರಾಜು, ಹೆಚ್ಚಿನ ಅಪಾಯದಲ್ಲಿರುವ ಸಮುದಾಯಗಳನ್ನು ಬೆಂಬಲಿಸುವ ಉದ್ದೇಶದಿಂದ ಮತ್ತು ನಿರ್ಣಾಯಕ ಮಾಹಿತಿಯನ್ನು ಹರಡಲು ಸಹಾಯ ಮಾಡುವ ಉದ್ದೇಶದಿಂದ 135 ಕೋಟಿ ರೂ ಅನುದಾನ ನೀಡಲಿದೆ ಎಂದು ಟ್ವೀಟ್ ಮಾಡಿದ್ದಾರೆ.
Devastated to see the worsening Covid crisis in India. Google & Googlers are providing Rs 135 Crore in funding to @GiveIndia, @UNICEF for medical supplies, orgs supporting high-risk communities, and grants to help spread critical information.https://t.co/OHJ79iEzZH
— Sundar Pichai (@sundarpichai) April 26, 2021
ಇದಕ್ಕೂ ಮೊದಲು ಇದೇ ವಿಚಾರವಾಗಿ ಟ್ವೀಟ್ ಮಾಡಿದ್ದ ಮೈಕ್ರೋಸಾಫ್ಟ್ ಮುಖ್ಯಸ್ಥ ಸತ್ಯ ನಾಡೆಲ್ಲ, 'ಭಾರತದ ಪ್ರಸ್ತುತ ಪರಿಸ್ಥಿತಿ ಹೃದಯ ವಿದ್ರಾವಕವಾಗಿದೆ. ಈ ಸಂಕಷ್ಟದ ಪರಿಸ್ಥಿಯಿಲ್ಲಿ ಅಮೆರಿಕ ಸರ್ಕಾರವು ಭಾರತಕ್ಕೆ ನೆರವು ನೀಡಲು ಮುಂದಾಗಿದೆ. ಇದಕ್ಕಾಗಿ ನಾನು ಕೃತಜ್ಞನಾಗಿದ್ದೇನೆ. ಅಂತೆಯೇ ಮೈಕ್ರೋಸಾಫ್ಟ್ ಸಂಸ್ಥೆ ತನ್ನ ಧ್ವನಿ, ಸಂಪನ್ಮೂಲ, ಮತ್ತು ತಂತ್ರಜ್ಞಾನವನ್ನು ಭಾರತದಲ್ಲಿನ ಪ್ರಸ್ತುತ ಪರಿಸ್ಥಿತಿಯಲ್ಲಿ ಪರಿಹಾರ ಕಾರ್ಯಗಳಿಗೆ ಸಹಾಯ ಮಾಡಲು ಮತ್ತು ನಿರ್ಣಾಯಕ ಆಮ್ಲಜನಕ ಸಾಂದ್ರತೆಯ ಸಾಧನಗಳ ಖರೀದಿಯನ್ನು ಬೆಂಬಲಿಸಲು ಬಳಸುವುದನ್ನು ಮುಂದುವರಿಸುತ್ತದೆ ಎಂದು ಭರವಸೆ ನೀಡಿದ್ದರು.
ಇನ್ನು ಭಾರತದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದ್ದು, ಪ್ರತಿನಿತ್ಯ 3.50ಕ್ಕೂ ಹೆಚ್ಚು ಹೊಸ ಸೋಂಕು ಪ್ರಕರಣಗಳು ದಾಖಲಾಗುತ್ತಿವೆ. ದೇಶಾದ್ಯಂತ ಚಿಕಿತ್ಸೆಗಾಗಿ ಸೋಂಕಿತರು ಪರದಾಡುತ್ತಿದ್ದು, ಆಸ್ಪತ್ರೆಗಳ ಬೆಡ್ ಗಳು ಸಂಪೂರ್ಣ ಭರ್ತಿಯಾಗಿದ್ದು, ಬೆಡ್ ಗಳಿಲ್ಲದೆ ರೋಗಿಗಳು ಆಸ್ಪತ್ರೆಯಿಂದ ಆಸ್ಪತ್ರೆಗೆ ಓಡಾಡುತ್ತಿದ್ದಾರೆ. ಅಂತೆಯೇ ಇತ್ತ ಅಸ್ಪತ್ರೆಗೆ ದಾಖಲಾದ ಸೋಂಕಿತರೂ ಕೂಡ ಆಕ್ಸಿಜನ್ ಕೊರತೆಯಿಂದಾಗಿ ಸಂಕಷ್ಟ ಅನುಭವಿಸುತ್ತಿದ್ದು, ಸಾಕಷ್ಟು ರೋಗಿಗಳು ಆಕ್ಸಿಜನ್ ಇಲ್ಲದೇ ಸಾವನ್ನಪ್ಪುತ್ತಿದ್ದಾರೆ. ಅಂತೆಯೇ ಕೋವಿಡ್ ಸೋಂಕಿತರ ಸಾವಿನ ಸಂಖ್ಯೆ ಕೂಡ ದೇಶದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿದ್ದು, ಶವಸಂಸ್ಕಾರಕ್ಕಾಗಿ ಶವಾಗಾರಗಳ ಮುಂದೆ ಮೃತರ ಸಂಬಂಧಿಕರು ಗಂಟೆಗಟ್ಟಲೇ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
Google and Alphabet CEO Sundar Pichai has pledged support in India's battle against the second wave of Covid-19, which Prime Minister Narendra Modi had referred to as a 'toofan' (storm) while addressing his radio program 'Mann Ki Baat' on Sunday.
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 10:40 pm
Mangalore Correspondent
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
15-07-25 10:57 pm
HK News Desk
Lawrence Bishnoi, Bangalore, Crime: ಡಾನ್ ಲಾರೆ...
15-07-25 06:52 pm
Mangalore, Moodbidri college, Rape, Blackmail...
15-07-25 06:07 pm
ಹಿಂದು ಯುವತಿಯರನ್ನು ಮತಾಂತರ ಮಾಡುತ್ತಿದ್ದಾನೆಂದು ಸು...
15-07-25 05:21 pm
Mangalore Police, Arrest, NITTE College Stude...
15-07-25 01:13 pm