ಬ್ರೇಕಿಂಗ್ ನ್ಯೂಸ್
26-04-21 04:30 pm Headline Karnataka News Network ದೇಶ - ವಿದೇಶ
Photo credits : yosuccess
ವಾಷಿಂಗ್ಟನ್, ಏ.26: ಕೋವಿಡ್-19 2ನೇ ಅಲೆಯಿಂದಾಗಿ ತತ್ತರಿಸಿ ಹೋಗಿರುವ ಭಾರತದಲ್ಲಿನ ಪರಿಸ್ಥಿತಿ ಕುರಿತು ಮೈಕ್ರೋಸಾಫ್ಟ್ ಮುಖ್ಯಸ್ಥ ಸತ್ಯ ನಾಡೆಲ್ಲ ಟ್ವೀಟ್ ಮಾಡಿದ ಬೆನ್ನಲ್ಲೇ ಗೂಗಲ್ ಸಿಇಒ ಭಾರತ ಮೂಲದ ಸುಂದರ್ ಪಿಚೈ ಅವರೂ ಕೂಡ ಟ್ವೀಟ್ ಮಾಡಿ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸುಂದರ್ ಪಿಚೈ ಅವರು, ಭಾರತದಲ್ಲಿನ ಕೋವಿಡ್-19 ಸಾಂಕ್ರಾಮಿಕದ ಪರಿಸ್ಥಿತಿ ನೋಡಿ ಮನಸ್ಸು ಛಿದ್ರವಾಗಿದೆ. ಗೂಗಲ್ ಈ ಕೂಡಲೇ ಭಾರತಕ್ಕೆ ವೈದ್ಯಕೀಯ ಸರಬರಾಜು, ಹೆಚ್ಚಿನ ಅಪಾಯದಲ್ಲಿರುವ ಸಮುದಾಯಗಳನ್ನು ಬೆಂಬಲಿಸುವ ಉದ್ದೇಶದಿಂದ ಮತ್ತು ನಿರ್ಣಾಯಕ ಮಾಹಿತಿಯನ್ನು ಹರಡಲು ಸಹಾಯ ಮಾಡುವ ಉದ್ದೇಶದಿಂದ 135 ಕೋಟಿ ರೂ ಅನುದಾನ ನೀಡಲಿದೆ ಎಂದು ಟ್ವೀಟ್ ಮಾಡಿದ್ದಾರೆ.
Devastated to see the worsening Covid crisis in India. Google & Googlers are providing Rs 135 Crore in funding to @GiveIndia, @UNICEF for medical supplies, orgs supporting high-risk communities, and grants to help spread critical information.https://t.co/OHJ79iEzZH
— Sundar Pichai (@sundarpichai) April 26, 2021
ಇದಕ್ಕೂ ಮೊದಲು ಇದೇ ವಿಚಾರವಾಗಿ ಟ್ವೀಟ್ ಮಾಡಿದ್ದ ಮೈಕ್ರೋಸಾಫ್ಟ್ ಮುಖ್ಯಸ್ಥ ಸತ್ಯ ನಾಡೆಲ್ಲ, 'ಭಾರತದ ಪ್ರಸ್ತುತ ಪರಿಸ್ಥಿತಿ ಹೃದಯ ವಿದ್ರಾವಕವಾಗಿದೆ. ಈ ಸಂಕಷ್ಟದ ಪರಿಸ್ಥಿಯಿಲ್ಲಿ ಅಮೆರಿಕ ಸರ್ಕಾರವು ಭಾರತಕ್ಕೆ ನೆರವು ನೀಡಲು ಮುಂದಾಗಿದೆ. ಇದಕ್ಕಾಗಿ ನಾನು ಕೃತಜ್ಞನಾಗಿದ್ದೇನೆ. ಅಂತೆಯೇ ಮೈಕ್ರೋಸಾಫ್ಟ್ ಸಂಸ್ಥೆ ತನ್ನ ಧ್ವನಿ, ಸಂಪನ್ಮೂಲ, ಮತ್ತು ತಂತ್ರಜ್ಞಾನವನ್ನು ಭಾರತದಲ್ಲಿನ ಪ್ರಸ್ತುತ ಪರಿಸ್ಥಿತಿಯಲ್ಲಿ ಪರಿಹಾರ ಕಾರ್ಯಗಳಿಗೆ ಸಹಾಯ ಮಾಡಲು ಮತ್ತು ನಿರ್ಣಾಯಕ ಆಮ್ಲಜನಕ ಸಾಂದ್ರತೆಯ ಸಾಧನಗಳ ಖರೀದಿಯನ್ನು ಬೆಂಬಲಿಸಲು ಬಳಸುವುದನ್ನು ಮುಂದುವರಿಸುತ್ತದೆ ಎಂದು ಭರವಸೆ ನೀಡಿದ್ದರು.
ಇನ್ನು ಭಾರತದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದ್ದು, ಪ್ರತಿನಿತ್ಯ 3.50ಕ್ಕೂ ಹೆಚ್ಚು ಹೊಸ ಸೋಂಕು ಪ್ರಕರಣಗಳು ದಾಖಲಾಗುತ್ತಿವೆ. ದೇಶಾದ್ಯಂತ ಚಿಕಿತ್ಸೆಗಾಗಿ ಸೋಂಕಿತರು ಪರದಾಡುತ್ತಿದ್ದು, ಆಸ್ಪತ್ರೆಗಳ ಬೆಡ್ ಗಳು ಸಂಪೂರ್ಣ ಭರ್ತಿಯಾಗಿದ್ದು, ಬೆಡ್ ಗಳಿಲ್ಲದೆ ರೋಗಿಗಳು ಆಸ್ಪತ್ರೆಯಿಂದ ಆಸ್ಪತ್ರೆಗೆ ಓಡಾಡುತ್ತಿದ್ದಾರೆ. ಅಂತೆಯೇ ಇತ್ತ ಅಸ್ಪತ್ರೆಗೆ ದಾಖಲಾದ ಸೋಂಕಿತರೂ ಕೂಡ ಆಕ್ಸಿಜನ್ ಕೊರತೆಯಿಂದಾಗಿ ಸಂಕಷ್ಟ ಅನುಭವಿಸುತ್ತಿದ್ದು, ಸಾಕಷ್ಟು ರೋಗಿಗಳು ಆಕ್ಸಿಜನ್ ಇಲ್ಲದೇ ಸಾವನ್ನಪ್ಪುತ್ತಿದ್ದಾರೆ. ಅಂತೆಯೇ ಕೋವಿಡ್ ಸೋಂಕಿತರ ಸಾವಿನ ಸಂಖ್ಯೆ ಕೂಡ ದೇಶದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿದ್ದು, ಶವಸಂಸ್ಕಾರಕ್ಕಾಗಿ ಶವಾಗಾರಗಳ ಮುಂದೆ ಮೃತರ ಸಂಬಂಧಿಕರು ಗಂಟೆಗಟ್ಟಲೇ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
Google and Alphabet CEO Sundar Pichai has pledged support in India's battle against the second wave of Covid-19, which Prime Minister Narendra Modi had referred to as a 'toofan' (storm) while addressing his radio program 'Mann Ki Baat' on Sunday.
02-02-26 04:06 pm
HK News Desk
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm