ಬ್ರೇಕಿಂಗ್ ನ್ಯೂಸ್
27-04-21 08:02 pm Headline Karnataka News Network ದೇಶ - ವಿದೇಶ
ದೆಹಲಿ, ಎ 27: ಇಲ್ಲಿನ ಸರಿತಾ ವಿಹಾರ್ನಲ್ಲಿರುವ ಅಪೋಲೋ ಆಸ್ಪತ್ರೆಯಲ್ಲಿ ಕೊವಿಡ್ 19 ಸೋಂಕಿತರೊಬ್ಬರು ಮೃತಪಟ್ಟ ಬೆನ್ನಲ್ಲೇ ಆತನ ಕುಟುಂಬದವರು ದಾಂಧಲೆ ಎಬ್ಬಿಸಿದ್ದಾರೆ.
ವೈದ್ಯರು, ನರ್ಸ್ಗಳು, ಆರೋಗ್ಯ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ. ಕೊರೊನಾ ಸೋಂಕಿತ 63 ವರ್ಷದ ಮಹಿಳೆಯೊಬ್ಬರನ್ನು ಇಂದು ಮುಂಜಾನೆ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಐಸಿಯು ಬೆಡ್ ಸಿಗದೆ ಆಕೆ ಮೃತಪಟ್ಟಿದ್ದರು.
ಇದರಿಂದ ಸಿಟ್ಟಿಗೆದ್ದ ಆಕೆಯ ಕುಟುಂಬದವರು ಬೆಳಗ್ಗೆ ಸುಮಾರು 9 ಗಂಟೆ ಹೊತ್ತಿಗೆ ವೈದ್ಯರು, ನರ್ಸ್ಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಮೃತ ಕೊವಿಡ್ ಸೋಂಕಿತೆಯ ಕುಟುಂಬದವರು ಆಸ್ಪತ್ರೆ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ ವಿಡಿಯೋ ಇದೀಗ ಸಿಕ್ಕಾಪಟೆ ವೈರಲ್ ಆಗಿದೆ. ವೈದ್ಯರು, ನರ್ಸ್ಗಳ ಮೇಲೆ ಹಲ್ಲೆ ನಡೆಸಿದ್ದಲ್ಲದೆ, ಆಸ್ಪತ್ರೆಯ ಕೆಲವು ಸಲಕರಣೆಗಳನ್ನೂ ಹಾಳುಗೆಡವಿದ್ದಾರೆ.

ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಆಗ್ನೇಯ ದೆಹಲಿ ಡಿಸಿಪಿ, ಘಟನೆಯ ಬಗ್ಗೆ ನಮಗೆ ಯಾವುದೇ ದೂರು ಬಂದಿಲ್ಲ ಎಂದು ಹೇಳಿದ್ದಾರೆ. ಆಸ್ಪತ್ರೆಯವರಾಗಲಿ, ಮೃತ ಸೋಂಕಿತೆಯ ಕುಟುಂಬದವರಾಗಲೀ ಯಾರೂ ನಮ್ಮ ಬಳಿ ಬಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇನ್ನು ಘಟನೆಯ ಬಗ್ಗೆ ಮಾಹಿತಿ ನೀಡಿದ ಅಪೋಲೋ ಆಸ್ಪತ್ರೆ, ಮಹಿಳೆ ನಮ್ಮಲ್ಲಿಗೆ ಬರುವಾಗಲೇ ಆಕೆಯ ಪರಿಸ್ಥಿತಿ ತೀರ ಗಂಭೀರವಾಗಿತ್ತು. ಆದರೂ ನಮ್ಮ ವೈದ್ಯಕೀಯ ಸಿಬ್ಬಂದಿಗೆ ಆಕೆಗೆ ಸೂಕ್ತ ಚಿಕಿತ್ಸೆ ನೀಡಿದ್ದರು. ಆದರೆ ಇಲ್ಲಿ ಬೆಡ್ಗಳ ಕೊರತೆ ಇರುವುದರಿಂದ ಬೇರೊಂದು ಆಸ್ಪತ್ರೆಗೆ ದಾಖಲಿಸಲು ಕುಟುಂಬಕ್ಕೆ ಹೇಳಲಾಗಿತ್ತು. ಆದರೆ ದುರದೃಷ್ಟವಶಾತ್ ಅಷ್ಟರಲ್ಲಿ ಮಹಿಳೆ ಮೃತಪಟ್ಟಿದ್ದರು. ಇದನ್ನೇ ನೆಪವನ್ನಾಗಿಟ್ಟುಕೊಂಡು ಕುಟುಂಬದವರು ಆಸ್ಪತ್ರೆಯಲ್ಲಿ ಗಲಾಟೆ ಎಬ್ಬಿಸಿದರು ಎಂದು ಹೇಳಿದೆ. ಆಸ್ಪತ್ರೆ ಸೆಕ್ಯೂರಿಟಿ ಸಿಬ್ಬಂದಿ, ಸ್ಥಳದಲ್ಲಿದ್ದ ಪೊಲೀಸರ ಸಹಾಯದಿಂದ ಪರಿಸ್ಥಿತಿ ನಿಯಂತ್ರಿಸಲಾಯಿತು ಎಂದೂ ತಿಳಿಸಿದೆ.

ದೆಹಲಿಯಲ್ಲಿ ಆಕ್ಸಿಜನ್, ಬೆಡ್ಗಳ ಅಭಾವದಿಂದ ಸಾಯುತ್ತಿರುವ ರೋಗಿಗಳ ಸಂಖ್ಯೆ ಹೆಚ್ಚಾದ ಬೆನ್ನಲ್ಲೇ ದೆಹಲಿ ಹೈಕೋರ್ಟ್ ಆಸ್ಪತ್ರೆಗಳಿಗೆ ಪೊಲೀಸ್ ಭದ್ರತೆಯನ್ನು ನೀಡಲು ಸರ್ಕಾರಕ್ಕೆ ಸೂಚಿಸಿತ್ತು. ಅದರ ಅನ್ವಯ ಈಗ ಬಹುತೇಕ ಆಸ್ಪತ್ರೆಗಳಲ್ಲಿ ಪೊಲೀಸ್ ಬಿಗಿ ಭದ್ರತೆ ಇದೆ. ಆದರೂ ಇಂಥ ಘಟನೆಗಳೂ ನಡೆಯುತ್ತಿವೆ.
Doctors at a Delhi hospital were attacked Tuesday morning by the attendants of a woman, 67, who died in the emergency ward because the hospital had no ICU beds available
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm